Karnataka: ತಮಿಳುನಾಡಿಗೆ ನೀರು; ರೈತರ ಆಕ್ರೋಶ; ಹೆದ್ದಾರಿ ತಡೆಗೆ ಯತ್ನ
Team Udayavani, Aug 22, 2023, 11:10 PM IST
ಮಂಡ್ಯ/ಮೈಸೂರು: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ರೈತರ ಆಕ್ರೋಶ ಮುಂದು
ವರಿದಿದ್ದು, ಮಂಡ್ಯ, ಮೈಸೂರು ಸೇರಿ ಹಲವೆಡೆ ರೈತಸಂಘ, ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಂಗಳವಾರವೂ ಪ್ರತಿಭಟನೆ ನಡೆದಿದೆ. ಮಂಡ್ಯದಲ್ಲಿ ಹೆದ್ದಾರಿ ತಡೆಯಲು ಯತ್ನಿಸಿದ ರೈತಸಂಘ (ಮೂಲ ಸಂಘಟನೆ)ದ ಕಾರ್ಯಕರ್ತರನ್ನು ಪೊಲೀಸರು ಬಂಧಿ ಸಿ ಅನಂತರ ಸಂಜೆ ವೇಳೆಗೆ ಬಿಡುಗಡೆ ಮಾಡಿದರು.
ವಿವಿಧೆಡೆಗಳಿಂದ ಆಗಮಿಸಿದ ರೈತ ಸಂಘದ ಕಾರ್ಯಕರ್ತರು ಮಂಡ್ಯ ತಾಲೂಕು ಇಂಡುವಾಳು ಗ್ರಾಮದ ಬಳಿ ಜಮಾಯಿಸಿ, ಸರ್ವೀಸ್ ರಸ್ತೆಯಲ್ಲಿ ಮೆರವಣಿಗೆ ಮೂಲಕ ತೆರಳಿದರು. ಘೋಷಣೆ ಮೊಳಗಿಸುತ್ತ ರೈತರು ಎಕ್ಸ್ಪ್ರೆಸ್ ಹೈವೆಗೆ ನುಗ್ಗಲು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಪರಸ್ಪರ ತಳ್ಳಾಟ-ನೂಕಾಟ ಉಂಟಾಗಿ ಪೊಲೀಸರು ಪ್ರತಿಭಟನನಿರತ ರೈತರನ್ನು ಬಲಪ್ರಯೋಗಿಸಿ ಬಂ ಧಿಸಿದರು. ಐದಾರು ರೈತರಿಗೆ ಸಣ್ಣಪುಟ್ಟ ಗಾಯಗಳಾದವು. ಇದರಿಂದ ಕುಪಿತಗೊಂಡ ರೈತರು ಪೊಲೀಸರ ದೌರ್ಜನ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ರೈತರು ಅಡ್ಡಿಪಡಿಸಿದರು. ಇದರಿಂದ ಅರ್ಧ ತಾಸಿಗೂ ಹೆಚ್ಚು ಸಮಯ ವಾಹನ ಸಂಚಾರ ಅಸ್ತವ್ಯಸ್ತವಾಯಿತು.
ಮೈಸೂರಿನಲ್ಲೂ ಪ್ರತಿಭಟನೆ
ತಮಿಳುನಾಡು ಒತ್ತಡಕ್ಕೆ ಮಣಿದು ಕಾವೇರಿ ನೀರನ್ನು ಹರಿಯಲು ಬಿಡಲಾಗಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಇರುವ ರಾಜ್ಕುಮಾರ್ ಉದ್ಯಾನವನದ ಮುಂಭಾಗ ಪ್ರತಿಭಟನೆ ನಡೆಯಿತು.
ಸಿಎಂ ಅಧ್ಯಕ್ಷತೆಯಲ್ಲಿ ಬುಧವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಅಂತಿಮವಾಗಿ ಏನು ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಜೆಡಿಎಸ್, ಬಿಜೆಪಿ ನಾಯಕರು ನೀರಿನ ಮೇಲೆ ರಾಜಕೀಯ ಮಾಡಬಾರದು. ತಮಿಳುನಾಡಿನ ಪರ ತೀರ್ಪು ಬಂದಿದ್ದರೆ 20 ಸಾವಿರ ಕ್ಯೂಸೆಕ್ ನೀರು ಬಿಡಬೇಕಾಗುತ್ತಿತ್ತು. ಹೀಗಾಗಿ 10 ಸಾವಿರ ಕ್ಯೂಸೆಕ್ ಅಷ್ಟೇ ನೀರು ಬಿಟ್ಟಿದ್ದೇವೆ.
– ಎನ್. ಚಲುವರಾಯಸ್ವಾಮಿ, ಕೃಷಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.