Water: ಕುಡಿಯುವ ನೀರು ಕೊಡಿ, ಇಲ್ಲವೇ ಕರ್ನಾಟಕ ಸೇರಲು ಬಿಡಿ
Team Udayavani, Aug 20, 2023, 11:31 PM IST
ವಿಜಯಪುರ: “ಕುಡಿಯಲು ನೀರು ಕೊಡಿ, ಇಲ್ಲವೇ ಕರ್ನಾಟಕಕ್ಕೆ ಸೇರಲು ಬಿಡಿ’ – ಇಂಥದ್ದೊಂದು ಘೋಷಣೆಯೊಂದಿಗೆ ಮಹಾರಾಷ್ಟ್ರದ ಗಡಿನಾಡ ಕನ್ನಡಿಗರು ಹೋರಾಟಕ್ಕೆ ಮುಂದಾಗಿದ್ದಾರೆ.
ಮಹಾರಾಷ್ಟ್ರ ಸರಕಾರಕ್ಕೆ ಕೊನೆಯ ಎಚ್ಚರಿಕೆ ನೀಡಲು ಆ.25ರಂದು 2 ಕಿ.ಮೀ. ದೀರ್ಘದಂಡ ನಮಸ್ಕಾರ ಹಾಕಿ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.
ಕರ್ನಾಟಕಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ 120 ಹಳ್ಳಿಗಳಲ್ಲಿ 84 ಹಳ್ಳಿಗಳಲ್ಲಿ ಕನ್ನಡಿಗರೇ ತುಂಬಿಕೊಂಡಿದ್ದು, ಮನೆ-ಮನಗಳಲ್ಲಿ ಕನ್ನಡವನ್ನೇ ಉಸಿರಾಗಿಸಿಕೊಂಡಿದ್ದಾರೆ. ಇವರಿಗೆ ಮಹಾರಾಷ್ಟ್ರ ಸರಕಾರ ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಸಾರಿಗೆ, ವಿದ್ಯುತ್, ಕುಡಿಯುವ ನೀರು, ನೀರಾವರಿ ವಿಷಯದಲ್ಲಿ ತೋರುತ್ತಿರುವ ಅನ್ಯಾಯದ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ.
ಮೂಲ ಸೌಲಭ್ಯಕ್ಕಾಗಿ 40 ವರ್ಷಗಳಿಂದ ಕನ್ನಡಿಗರು ಹೋರಾಟ ಮಾಡುತ್ತಿದ್ದಾರೆ. 2014 ಜೂನ್ 1ರಿಂದ 9ರ ವರೆಗೆ ಉಮದಿ ಪಟ್ಟಣದಿಂದ ಜಿಲ್ಲಾ ಕೇಂದ್ರ ಸಾಂಗ್ಲಿ ವರೆಗೆ ಸಾವಿರಾರು ಕನ್ನಡಿಗರು 200 ಕಿ.ಮೀ. ಪಾದಯಾತ್ರೆ ನಡೆಸಿದ್ದಾಗ ಮಹಾರಾಷ್ಟ್ರ ಸರಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೂ ಅದು ಕೃತಿ ರೂಪಕ್ಕೆ ಬಾರದ ಕಾರಣ 2015ರ ಜನವರಿ 26ರಂದೇ ಸಾಂಗ್ಲಿ ಜಿಲ್ಲಾ ಧಿಕಾರಿ ಕಚೇರಿ ಎದುರು ಬೃಹತ್ ಹೋರಾಟ ನಡೆಸಿದ್ದರು. ಬಳಿಕ ಕರ್ನಾಟಕಕ್ಕೆ ಸೇರಲು ನಮಗೆ ಅವಕಾಶ ನೀಡಿ ಎಂಬ ಚಳವಳಿ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.