ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಉದ್ಭವ


Team Udayavani, Mar 25, 2021, 4:00 AM IST

ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಉದ್ಭವ

ಕುಂದಾಪುರ: ದಿನೇ ದಿನೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಇದರಿಂದಾಗಿ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಲವು ಗ್ರಾಮಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ಉದ್ಭವವಾಗಿದೆ. ಆದರೆ ಇನ್ನೂ ಕೂಡ ಟ್ಯಾಂಕರ್‌ ನೀರು ಸಹಿತ ತುರ್ತು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ಅನುದಾನ ಬಿಡುಗಡೆಯಾಗದೇ ಸಮಸ್ಯೆಯಾಗುತ್ತಿದ್ದು, ತತ್‌ಕ್ಷಣ ಅನುದಾನ ಬಿಡುಗಡೆ ಮಾಡಬೇಕು ಎನ್ನುವುದಾಗಿ ಗ್ರಾ.ಪಂ.ಗಳು ಬೇಡಿಕೆಯನ್ನು ಇಟ್ಟಿದ್ದಾರೆ.

ಉಭಯ ತಾಲೂಕುಗಳ ಹಲವು ಗ್ರಾ.ಪಂ. ವ್ಯಾಪ್ತಿಯಲ್ಲಿ ಈಗಾಗಲೇ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದರೂ, ಈ ಬಗ್ಗೆ ಗ್ರಾ.ಪಂ.ಗಳು ನಿರ್ಣಯ ಮಾಡಿ ತಹಶೀಲ್ದಾರ್‌ಗೆ ಪ್ರಸ್ತಾವನೆ ಕಳುಹಿಸಿದ್ದರೂ, ಈ ವರೆಗೆ ತಾಲೂಕು ಆಡಳಿತ ದಿಂದ ನೀರಿನ ಪೂರೈಕೆಗೆ ಯಾವುದೇ ಅನುದಾನ ಬಂದಿಲ್ಲ ಎನ್ನುವುದು ಗ್ರಾ.ಪಂ.ಗಳ ವಾದವಾಗಿದೆ.

ಅವಧಿಗಿಂತ ಮೊದಲೇ ಸಮಸ್ಯೆ
ಪ್ರತಿ ವರ್ಷ ಎಪ್ರಿಲ್‌ನಿಂದ ಕುಡಿಯುವ ನೀರಿನ ಪೂರೈಕೆಗೆ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು.
ಆದರೆ ಈ ಬಾರಿ ಬಿಸಿಲಿನ ಬೇಗೆ ಫೆಬ್ರವರಿ, ಮಾರ್ಚ್‌ ನಿಂದಲೇ ಶುರುವಾಗಿದ್ದು, ಇದರಿಂದ ಎಲ್ಲೆಡೆಗಳಲ್ಲಿ ನೀರಿನ ಮೂಲಗಳಲ್ಲಿ ನೀರು ಇಳಿಮುಖವಾಗುತ್ತಿದೆ. ಕೆಲವು ಬಾವಿಗಳಲ್ಲಿ ಬತ್ತಿ ಹೋಗಿದೆ. ಈ ಕಾರಣದಿಂದಾಗಿ ತುರ್ತಾಗಿ ಕುಡಿಯುವ ನೀರಿನ ಪೂರೈಕೆಗೆ ಅನುದಾನ ನೀಡಬೇಕು ಎನ್ನುವುದು ಪಂಚಾಯತ್‌ಗಳ ಒತ್ತಾಯವಾಗಿದೆ.

ಕೆಲವು ಗ್ರಾ.ಪಂ.ಗಳಲ್ಲಿ ಎರಡು ದಿನಕ್ಕೊಮ್ಮೆ ಜನರಿಗೆ ನಳ್ಳಿ ನೀರು ಪೂರೈಸಲಾಗುತ್ತಿದ್ದು, ಇನ್ನು ಹೆಮ್ಮಾಡಿ ಸೇರಿದಂತೆ ಕೆಲ ಪಂಚಾಯತ್‌ ವ್ಯಾಪ್ತಿಯಲ್ಲಿ ಕೆಲ ವಾರ್ಡ್‌ಗಳಿಗೆ 3 ದಿನಕ್ಕೊಮ್ಮೆ ನೀರು ಕೊಡಲಾಗುತ್ತಿದೆ. ಶಾಲೆಯ ಪಾಳು ಬಿದ್ದ ಬಾವಿಯನ್ನು ಪಂಚಾಯತ್‌ ವತಿಯಿಂದ ಸ್ವತ್ಛಗೊಳಿಸಿ, ಅದರಿಂದ ನೀರು ಕೊಡಲಾಗುತ್ತಿದೆ. ಇನ್ನು ಜಿ.ಪಂ. ಅನುದಾನದಡಿ ಸಂತೋಷನಗರದಲ್ಲಿ ಬಾವಿ ತೊಡಲಾಗುತ್ತಿದೆ. ಗುಜ್ಜಾಡಿಯಲ್ಲಿ ಶಾಲೆಯೊಂದಕ್ಕೆ ಪಂಚಾಯತ್‌ ವತಿಯಿಂದಲೇ ಈಗಾಗಲೇ ಟ್ಯಾಂಕರ್‌ ಮೂಲಕ ನೀರು ಕೊಡಲಾಗುತ್ತಿದೆ.

ಎಲ್ಲೆಲ್ಲಿ ಸಮಸ್ಯೆ
ತಲ್ಲೂರು ಗ್ರಾ.ಪಂ.ನ ಉಪ್ಪಿನಕುದ್ರು, ಹೆಮ್ಮಾಡಿ ಗ್ರಾ.ಪಂ.ನ ಸಂತೊಷನಗರ, ಕನ್ನಡಕುದ್ರು, ದೇವಸ್ಥಾನ ವಠಾರ, ಕಟ್‌ಬೆಲೂ¤ರು ಪಂಚಾಯತ್‌, ಹಕ್ಲಾಡಿಯ ತೋಪುÉ, ಹಕ್ಲಾಡಿ ಗುಡ್ಡೆ, ಎಸ್ಸಿ ಕಾಲನಿ, ಬ್ರಹೆ¾àರಿ ಕೊರಗ ಕಾಲನಿ, ಕರ್ಕುಂಜೆ ಗ್ರಾ.ಪಂ.ನ ಮಾವಿನಕಟ್ಟೆ, ಗುಲ್ವಾಡಿ ಗ್ರಾ.ಪಂ., ಹೊಸಾಡು ಗ್ರಾ.ಪಂ.ನ ಮುಳ್ಳಿಕಟ್ಟೆ, ತ್ರಾಸಿಯ ಮೊವಾಡಿ, ಗುಜ್ಜಾಡಿಯ ಬೆಣೆYರೆ, ಜನತಾ ಕಾಲನಿ, ಕೊಡಪಾಡಿ, ಗಂಗೊಳ್ಳಿ, ಮರವಂತೆ, ನಾವುಂದ, ಉಪ್ಪುಂದ, ಯಡ್ತರೆ ಸೇರಿದಂತೆ ಅನೇಕ ಗ್ರಾ.ಪಂ.ಗಳಲ್ಲಿ ನೀರಿನ ಸಮಸ್ಯೆ ಉದ್ಭವವಾಗಿದೆ.

ಸಭೆ ಕರೆದು ತೀರ್ಮಾನ
ಕುಂದಾಪುರ ತಾ|ನ ಕುಡಿಯುವ ನೀರಿನ ಪೂರೈಕೆಗೆ ಅನುದಾನದ ಕೊರತೆಯಿಲ್ಲ. ಆದಷ್ಟು ಬೇಗ ನಾನು, ಕಾರ್ಯನಿರ್ವಹಣಾಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು, ತೀರ್ಮಾನಿಸಲಾಗುವುದು. ಸಭೆಯಲ್ಲಿ ಟ್ಯಾಂಕರ್‌ ನೀರು ಪೂರೈಕೆಗೆ ಲೀ.ಗೆ ಇಂತಿಷ್ಟು ದರ ನಿಗದಿಪಡಿಸಿ, ಅನುದಾನ ಬಿಡುಗಡೆ ಮಾಡಲಾಗುವುದು. – ಆನಂದಪ್ಪ ನಾಯ್ಕ,
ಕುಂದಾಪುರ ತಹಶೀಲ್ದಾರ್‌

ಶೀಘ್ರ ಬಿಡುಗಡೆ
ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇರುವಲ್ಲಿ ಎಲ್ಲೆಲ್ಲ ಟ್ಯಾಂಕರ್‌ ನೀರಿನ ಅಗತ್ಯತೆಯಿದೆಯೋ ಅಲ್ಲಿಗೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಬಾರಿ ಎಪ್ರಿಲ್‌ಗಿಂತ ಮೊದಲೇ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಕುಡಿಯುವ ನೀರಿನ ಪೂರೈಕೆಗೆ ಆದಷ್ಟು ಬೇಗ ತೀರ್ಮಾನಿಸಲಾಗುವುದು.
– ಕಿರಣ್‌ ಗೌರಯ್ಯ, ಬೈಂದೂರು ತಹಶೀಲ್ದಾರ್‌ (ಪ್ರಭಾರ)

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.