ಗಬ್ಬೂರು ಎಸ್‌ಟಿಪಿಗೆ ತ್ಯಾಜ್ಯ ನೀರಿನ ಕೊರತೆ : ಯುಜಿಡಿ ಪೈಪ್‌ಲೈನ್‌ ಸೋರಿಕೆ-ಹರಿವು ಇಳಿಕೆ


Team Udayavani, Jan 10, 2021, 11:21 AM IST

ಗಬ್ಬೂರು ಎಸ್‌ಟಿಪಿಗೆ ತ್ಯಾಜ್ಯ ನೀರಿನ ಕೊರತೆ : ಯುಜಿಡಿ ಪೈಪ್‌ಲೈನ್‌ ಸೋರಿಕೆ-ಹರಿವು ಇಳಿಕೆ

ಹುಬ್ಬಳ್ಳಿ: ನಗರದ ತ್ಯಾಜ್ಯ ನೀರು ಸಂಸ್ಕರಿಸಿ ಪುನರ್‌ ಬಳಕೆಗೆ ಅನುವಾಗುವಂತೆ ಮಾಡುವ ಉದ್ದೇಶದಿಂದ ಸ್ಥಾಪನೆಗೊಂಡಿರುವ ಕೊಳಚೆ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ)ವು ನಿರ್ವಹಣೆ ಹಾಗೂ ತ್ಯಾಜ್ಯ ನೀರಿನ ಕೊರತೆಯಿಂದ ನಲುಗುವಂತಾಗಿದೆ.
ಘಟಕ ಪ್ರತಿದಿನ 40 ಎಂಎಲ್‌ಡಿ ನೀರಿನ ಸಂಸ್ಕರಣಾ ಸಾಮರ್ಥ್ಯ ಹೊಂದಿದ್ದು, ಘಟಕದ ನಿರ್ಮಾಣ ಸಮಯದಲ್ಲಿ ಪ್ರತಿದಿನ ಸುಮಾರು 35 ಎಂಎಲ್‌ಡಿ ನೀರು ಸಂಸ್ಕರಣೆ ಮಾಡಲಾಗುತ್ತಿತ್ತು. ಆದರೆ ದಿನಕಳೆದಂತೆ ತನ್ನ ತನವನ್ನು ಕಳೆದುಕೊಳ್ಳುತ್ತಿರುವ
ಘಟಕಕ್ಕೆ ಪ್ರಸ್ತುತ 5 ಎಂಎಲ್‌ಡಿ ನೀರು ಸಹ ಬರುತ್ತಿಲ್ಲ. ಇದರಿಂದಾಗಿ ಘಟಕ ನಡೆಸುವುದೇ ದುಸ್ತರವಾಗಿದೆ.

ಸದ್ಯ ಪ್ರತಿದಿನ ಬರುತ್ತಿರುವ 3-4 ಎಂಎಲ್‌ಡಿ ಕೊಳಚೆ ನೀರನ್ನು ಸಂಸ್ಕರಿಸಿ ನಾಲಾಕ್ಕೆ ಹರಿಬಿಡಲಾಗುತ್ತಿದೆ.

ಪೈಪ್‌ಲೈನ್‌ ಸೋರಿಕೆ: ನಗರದಲ್ಲಿ ಅಳವಡಿಸಿರುವ ಯುಜಿಡಿ ಪೈಪ್‌ಲೈನ್‌ ಸೋರಿಕೆಯಾಗುತ್ತಿದ್ದು, ಇದರಿಂದ ನೀರಿನ ಹರಿವು ಇಳಿಕೆಯಾಗಿದೆ. ಬರಬೇಕಾದ ನೀರು ನಾಲಾ ಮೂಲಕ ಹೊರ ಹೋಗುತ್ತಿರುವುದರಿಂದ ಘಟಕಕ್ಕೆ ಅಗತ್ಯ ಕೊಳಚೆ ನೀರು ಬರುತ್ತಿಲ್ಲ. ಅಲ್ಲದೆ ರೈತರು ಅಕ್ರಮವಾಗಿ ಪಂಪ್‌ಸೆಟ್‌ ಅಳವಡಿಸಿ ಘಟಕಕ್ಕೆ ನೀರು ಬಾರದಂತೆ ತಡೆಯೊಡ್ಡುತ್ತಿದ್ದಾರೆ ಎಂಬ
ಆರೋಪವೂ ಕೇಳಿಬರುತ್ತಿದೆ.

ಕಳೆದ ಎರಡು ಬಾರಿ ಬಂದ ನೆರೆ ಹಾವಳಿಯಿಂದ ನಗರದಲ್ಲಿ ಅಳವಡಿಸಿರುವ ಯುಜಿಡಿ ಪೈಪ್‌ಲೈನ್‌ಗಳು ತಪ್ಪಿದ್ದು, ಘಟಕಕ್ಕೆ ಬರುವ ನೀರು ನಾಲಾ ಮೂಲಕ ಹೊರಹೋಗುತ್ತಿದೆ. ಈಗಾಗಲೇ ಸಂಬಂಧಿಸಿದ ಇಲಾಖೆ ಗಮನ ಸೆಳೆಯಲಾಗಿದೆ. ಸದ್ಯ ಅವಳಿನಗರದಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ನಡೆಯುತ್ತಿದ್ದು, ಅದರಲ್ಲಿ ಸರಿಪಡಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

ಅನಧಿಕೃತ ಪಂಪ್‌ಸೆಟ್‌ ಅಳವಡಿಕೆ
ಎಸ್‌ಟಿಪಿ ಘಟಕದ ಸಮೀಪವೇ ಒಳಚರಂಡಿಗೆ ರೈತರು ಅಕ್ರಮವಾಗಿ ಬೃಹತ್‌ ಪಂಪ್‌ಸೆಟ್‌ ಅಳವಡಿಸಿ ನೀರು ಪಡೆದುಕೊಳ್ಳುತ್ತಿದ್ದಾರೆ. ಸಂಸ್ಕರಣೆ ಮಾಡಿದ ನೀರನ್ನು ರೈತರಿಗೆ ಪಡೆಯಲು ಸೂಚಿಸಿದರೂ ಅದನ್ನು ಪಡೆಯದೇ ಸಂಸ್ಕರಣೆ ಮಾಡದೇ ಇರುವ ನೀರನ್ನೇ ಪಡೆಯುತ್ತಿದ್ದಾರೆ. ಈ ಹಿಂದೆ ರೈತರು ಒಂದು ಬೆಳೆ ತೆಗೆದುಕೊಂಡು ಪಂಪ್‌ಸೆಟ್‌ ತೆಗೆಯುವುದಾಗಿ ಹೇಳಿದ್ದರು. ಆದರೆ ಹಳೆ ಚಾಳಿಯನ್ನೇ ಮುಂದುವರಿಸಿಕೊಂಡು ಹೋಗಿದ್ದು, ಶಿಸ್ತುಕ್ರಮ ಅವಶ್ಯವಾಗಿದೆ.

ಒಂದು ವರ್ಷ ಬಂದ್‌ ಆಗಿತ್ತು ಘಟಕ
ಘಟಕ ನಿರ್ವಹಣೆ ಟೆಂಡರ್‌ ಪಡೆದವರ ಅವಧಿ ಮುಕ್ತಾಯಗೊಂಡಿದ್ದರಿಂದ ಹೊಸ ಟೆಂಡರ್‌ ಪ್ರಕ್ರಿಯೆ ನಡೆಸಿ ಹೊಸ ತ್ತಿಗೆದಾರರಿಗೆ ಹಸ್ತಾಂತರ ಮಾಡುವಲ್ಲಿನ ವಿಳಂಬ ಹಾಗೂ ಕೊರೊನಾ ಹಾವಳಿಯಿಂದ ಸುಮಾರು ಒಂದು ವರ್ಷ ಕಾಲ ಘಟಕ ಸ್ಥಗಿತಗೊಂಡಿತ್ತು. ಇದೀಗ ಬೆಂಗಳೂರು ಮೂಲದ ಗ್ರೀನ್‌ ಎವರ್‌ಟೆಕ್‌ ಸರ್ವೀಸಸ್‌ ಸಂಸ್ಥೆ ಟೆಂಡರ್‌ ಪಡೆದು ಘಟಕ ನಿರ್ವಹಣೆ ಮಾಡುತ್ತಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.