![Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ](https://www.udayavani.com/wp-content/uploads/2024/12/Army-1-415x277.jpg)
ಗುಡ್ಡಾಪುರ ದಾನಮ್ಮದೇವಿಗೂ ನೀರಿನ ಅಭಾವ
Team Udayavani, May 19, 2019, 3:08 AM IST
![guddapura](https://www.udayavani.com/wp-content/uploads/2019/05/guddapura-620x411.jpg)
ವಿಜಯಪುರ: ದಕ್ಷಿಣ ಭಾರತದ ಜನತೆಯ ಆರಾಧ್ಯ ದೈವ ಶಿವಶರಣೆ ಗುಡ್ಡಾಪುರ ದಾನಮ್ಮ ದೇವಿ ಕ್ಷೇತ್ರದಲ್ಲೂ ನೀರಿನ ಅಭಾವ ತಲೆದೋರಿದೆ. ಹೀಗಾಗಿ, ಭಕ್ತರು ದೇವಿಯ ದರ್ಶನಕ್ಕಾಗಿ ಕ್ಷೇತ್ರಕ್ಕೆ ಬರುವುದನ್ನು ಮುಂದೂಡಿದರೆ ಒಳಿತು ಎಂದು ಮನವಿ ಮಾಡಲು ದೇವಸ್ಥಾನದ ಆಡಳಿತ ಮಂಡಳಿ ಮುಂದಾಗಿದೆ. ಇದಕ್ಕಾಗಿ ಮೇ 25ರಂದು ದೇವಸ್ಥಾನ ಆಡಳಿತ ಮಂಡಳಿ ಸಭೆ ಕರೆದಿದೆ.
ಗುಡ್ಡಾಪುರ ಕ್ಷೇತ್ರ ವಿಜಯಪುರ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟ್ರ ರಾಜ್ಯದಲ್ಲಿದ್ದರೂ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳ ಭಕ್ತರಿಗೆ ಆರಾಧ್ಯ ದೇವಿ. ದೇವಿ ದರ್ಶನ, ವಿವಿಧ ಹರಕೆ ತೀರಿಸಲು ನಿತ್ಯವೂ ಕನಿಷ್ಠ 3 ಸಾವಿರ ಭಕ್ತರು ಇಲ್ಲಿಗೆ ಬರುತ್ತಾರೆ. 2018ರ ಕಾರ್ತಿಕ ಮಾಸದ ಸಂದರ್ಭದಲ್ಲೇ ಸ್ಥಳೀಯ ಜಲಮೂಲಗಳು ಸಂಪೂರ್ಣ ಬತ್ತಿ, ಜಾತ್ರೆ ಹಂತದಲ್ಲೇ ನೀರಿನ ಅಭಾವ ಎದುರಾಗಿತ್ತು.
ಈಗ ಬರದಿಂದ ಕ್ಷೇತ್ರಕ್ಕೆ ಬರುವ ಭಕ್ತರಿಗೆ ನೀರು ಹೊಂದಿಸಲು ದೇವಸ್ಥಾನದ ಆಡಳಿತ ಮಂಡಳಿ ಹೈರಾಣಾಗುವಂತೆ ಮಾಡಿದೆ. ಹೀಗಾಗಿ, ಭಕ್ತರಿಗೆ ಸಮಸ್ಯೆ ಆಗದಿರಲಿ ಎಂದು ಕಳೆದ ವರ್ಷದ ನವೆಂಬರ್ನಿಂದಲೇ ದೇವಸ್ಥಾನದ ಟ್ರಸ್ಟ್ ಸಮಿತಿ, ಮಾಸಿಕ 1.50 ಲಕ್ಷ ರೂ.ವೆಚ್ಚ ಮಾಡಿ ಟ್ಯಾಂಕರ್ ನೀರು ಕೊಡುತ್ತಿದೆ. ಸ್ವಂತ ಟ್ರಾಕ್ಟರ್ ಹಾಗೂ 6000 ಲೀ.ಸಾಮರ್ಥ್ಯದ ಟ್ಯಾಂಕರ್ ಖರೀದಿಸಿ, ವಿದ್ಯುತ್ ಸಮಸ್ಯೆ ನೀಗಲು ಜನರೇಟರ್ ಇರಿಸಿದೆ.
ನೆರೆಯ ಅಂಕಲಗಿ, ಸೊರಡಿ ಹಾಗೂ ಮುಚ್ಚಂಡಿ ಗ್ರಾಮಗಳಿಂದ ನೀರನ್ನು ಟ್ಯಾಂಕರ್ ಮೂಲಕ ತರಲಾಗುತ್ತಿತ್ತು. ಈಗ ಅಲ್ಲಿಯೂ ಜಲಮೂಲ ಬತ್ತಿರುವುದರಿಂದ ನೀರಿನ ಸಮಸ್ಯೆ ಗಂಭೀರ ಸ್ಥಿತಿಗೆ ತಲುಪಿದೆ. ತಿಂಗಳಿಂದ ಕ್ಷೇತ್ರದಲ್ಲಿ ಮದುವೆ ಮಾಡಲು ಪರವಾನಗಿ ನೀಡಿಕೆ ಸ್ಥಗಿತ ಮಾಡಿದ್ದು, ದೇವಸ್ಥಾನದ ಶುದ್ಧ ನೀರಿನ ಘಟಕ ಮುಚ್ಚಿದೆ. ನಿತ್ಯ ದಾಸೋಹ, ಊಟದ ಮುನ್ನ-ನಂತರ ಕೈ ತೊಳೆಯಲು, ಕುಡಿಯಲು ಸೇರಿದಂತೆ ಕನಿಷ್ಠ 7 ಟ್ಯಾಂಕರ್ ನೀರು ಹೊಂದಿಸಲು ಹೆಣಗಾಟ ನಡೆದಿದೆ.
ಈಗ ಹಣ ಕೊಟ್ಟರೂ ನೀರಿಲ್ಲದಂತಾಗಿದೆ. ಮೇ 25ರ ಸಭೆಯಲ್ಲಿ ಇನ್ನೂ ಕೆಲವು ನಿರ್ಣಯಗಳನ್ನು ಮಾಡಲಿದ್ದೇವೆ. ಅದರೂ ಭಕ್ತರಿಗೆ ದಾನಮ್ಮದೇವಿ ದರ್ಶನಕ್ಕೆ ಬರಬೇಡಿ ಎನ್ನಲಾಗದು, ಬರುವುದನ್ನು ಮುಂದೂಡಿದರೆ ಒಳಿತು.
-ಪ್ರಕಾಶ ಗಣಿ, ಅಧ್ಯಕ್ಷರು, ಶ್ರೀದಾನಮ್ಮದೇವಿ ದೇವಸ್ಥಾನ ಟ್ರಸ್ಟ್, ಗುಡ್ಡಾಪುರ, ತಾ| ಜತ್ತ, ಮಹಾರಾಷ್ಟ್ರ.
* ಜಿ.ಎಸ್. ಕಮತರ
ಟಾಪ್ ನ್ಯೂಸ್
![Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ](https://www.udayavani.com/wp-content/uploads/2024/12/Army-1-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್](https://www.udayavani.com/wp-content/uploads/2024/12/bjp-a-150x82.jpg)
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
![9-agri](https://www.udayavani.com/wp-content/uploads/2024/12/9-agri-150x90.jpg)
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
![Laxmi-Minister](https://www.udayavani.com/wp-content/uploads/2024/12/Laxmi-Minister-1-150x90.jpg)
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
![Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ](https://www.udayavani.com/wp-content/uploads/2024/12/dk-shivkumar-1-150x84.jpg)
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
![Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ](https://www.udayavani.com/wp-content/uploads/2024/12/lokayukta-150x89.jpg)
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ](https://www.udayavani.com/wp-content/uploads/2024/12/Army-1-150x100.jpg)
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
![Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ](https://www.udayavani.com/wp-content/uploads/2024/12/modi-pm-150x72.jpg)
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
![England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ](https://www.udayavani.com/wp-content/uploads/2024/12/ben-150x84.jpg)
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
![15-crime](https://www.udayavani.com/wp-content/uploads/2024/12/15-crime-150x90.jpg)
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
![CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್](https://www.udayavani.com/wp-content/uploads/2024/12/bjp-a-150x82.jpg)
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್ಗೆ ಬಿಜೆಪಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.