Politics: ಹಿಂದಿನ ಸರ್ಕಾರದಲ್ಲಿ ಏನೇನು ತಿಂದಿದ್ದಾರೆ ಗೊತ್ತಿದೆ: ತಂಗಡಗಿ
Team Udayavani, Oct 14, 2023, 6:30 PM IST
ಕೊಪ್ಪಳ: ಬಿಜೆಪಿಯವರಿಗೆ ಐಟಿ, ಇಡಿ, ಸಿಬಿಐ ಬಿಟ್ಟರೆ ಬೇರೇನೂ ಇಲ್ಲ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ನಾಯಕರ ಮನೆ ಮೇಲೆ ದಾಳಿಯೇ ನಡೆಯಲ್ಲ. ಅವರ ಮನೆಯಲ್ಲಿ ಏನೂ ಇಲ್ವಾ? ಹಿಂದಿನ ಸರ್ಕಾರದಲ್ಲಿ ಅವರು ಏನೇನು ತಿಂದಿದ್ದಾರೆ ಎಂದು ಎಲ್ಲವೂ ಜನರಿಗೆ ಗೊತ್ತಿದೆ. ದೆಹಲಿಯಲ್ಲಿ ಆಪ್, ಕರ್ನಾಟಕದಲ್ಲಿ ಕಾಂಗ್ರೆಸ್, ಆಂಧ್ರದಲ್ಲಿ ಅವರಿಗೆ ಚಂದ್ರಬಾಬು ನಾಯ್ಡು ಮಾತ್ರ ಕಾಣುತ್ತಾರೆ. ನಮ್ಮದು ಎಟಿಎಂ ಸರ್ಕಾರ ಎನ್ನುವುದಕ್ಕೆ ಅವರು ಪ್ರೂಫ್ ಕೊಡಲಿ.
ತಪ್ಪಿದ್ದರೆ ಹೇಳಲಿ ತಿದ್ದಿಕೊಳ್ಳುತ್ತೇವೆ. 42 ಕೋಟಿ ಸಿಕ್ಕಿರೋದನ್ನು ನಾನು ಸಮರ್ಥಿಸಿಕೊಳ್ಳಲ್ಲ. ತೆರಿಗೆ ವಂಚನೆ ಮಾಡುವವರ ಮನೆ ಮೇಲೆ ಐಟಿ ದಾಳಿಯಾಗಲಿ. ಮೊದಲು ಬಿಜೆಪಿಯವರ ಮನೆ ಮೇಲೆ ದಾಳಿ ನಡೆಯಲಿ. ಬಿಜೆಪಿಯವರಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಅದೇ ರೀತಿ ಕಾಣಬೇಕು. ವಿದ್ಯುತ್ ಅಭಾವವಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ, ಮಟ್ಕಾ, ಇಸ್ಪೀಟ್ ಆಟ ಬಂದ್ ಮಾಡಿಸಿದ್ದೇವೆ. ನಿಗಮ-ಮಂಡಳಿಗೆ ಆದಷ್ಟು ಬೇಗ ನೇಮಕ ನಡೆಯುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.