Karkala: ಕೆಲಸಗಾರ ಶಾಸಕ ಸುನಿಲ್ ಬೇಕು ಹೊರತು ಜಾತಿವಾದಿ ಶಾಸಕನಲ್ಲ – ವಿಕ್ರಮ್‌ ಹೆಗ್ಡೆ

ನೀರೆ ಬೈಲೂರು ಬಿಜೆಪಿ ಕಾರ್ಯಕರ್ತರ ಸಭೆ

Team Udayavani, Apr 26, 2023, 4:18 PM IST

Karkala: ಕೆಲಸಗಾರ ಶಾಸಕ ಸುನಿಲ್ ಬೇಕು ಹೊರತು ಜಾತಿವಾದಿ ಶಾಸಕನಲ್ಲ – ವಿಕ್ರಮ್‌ ಹೆಗ್ಡೆ

ಕಾರ್ಕಳ: ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕಷ್ಟೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ ಶಾಸಕ ಬೇಡ ಎಂದು ತಾ.ಪಂ ಮಾಜಿ ಅಧ್ಯಕ್ಷ ವಿಕ್ರಮ ಹೆಗ್ಡೆ ಹೇಳಿದರು.

ಕಾರ್ಕಳ ವಿಧಾನ ಸಭಾ ಕ್ಷೇತ್ರದ ನೀರೆ- ಬೈಲೂರು ಭಾಗದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾರ್ಕಳ ಕ್ಷೇತ್ರವನ್ನು ಕಳೆದ 5 ವರ್ಷದ ಅವಧಿಯಲ್ಲಿ ಅವರು ಪ್ರಗತಿಯ ಉತ್ತುಂಗ ಶಿಖರಕ್ಕೆ ಏರಿಸಿದ್ದಾರೆ‌. ರಸ್ತೆ, ಕುಡಿಯುವ ನೀರು, ವಿದ್ಯುತ್, ಅಂತರ್ಜಲದಂತಹ ಅಭಿವೃದ್ಧಿಗೆ ಒತ್ತು ನೀಡಿದಷ್ಟೇ ಅಲ್ಲ, ಪ್ರತಿ ಸಾಮಾನ್ಯನ ಸುಖ-ಕಷ್ಟಗಳಲ್ಲಿ ಅವರು 5 ವರ್ಷಗಳ ಪ್ರತಿ ದಿನವೂ ನಿಂತು ಕೆಲಸ ಮಾಡಿದವರು. ಎರಡೆರಡು ಖಾತೆಯ ಜವಾಬ್ದಾರಿ ಇದ್ದರೂ ಕ್ಷೇತ್ರದ ಜನರ ಸಮಸ್ಯೆಗೆ ಸಮಯ ಮೀಸಲಿಟ್ಟ ಇಂತಹ ಶಾಸಕರೇ ನಮಗೆ ಮುಂದೆಯೂ ಶಾಸಕನಾಗಿ ಇರಬೇಕು‌. ಜಾತಿ, ಮತ ಎನ್ನುವುದೆಲ್ಲ ಚುನಾವಣೆ ಸಂದರ್ಭ ಮಾತ್ರ ಬಳಕೆಯಾಗುತ್ತದೆ. ಆದರೆ ಸುನಿಲರವರು ಜಾತಿ-ಧರ್ಮದ ಆಧಾರದಲ್ಲಿ ಎಂದೂ ಜನರನ್ನು ಕಂಡವರಲ್ಲ. ಕೊರೊನಾ ಸಂದರ್ಭ, ಕ್ವಾರಂಟೈನ್ ಆಸ್ಪತ್ರೆಗಳಲ್ಲಿ ಸಕಲ ವ್ಯವಸ್ಥೆ ಕಲ್ಪಿಸಿ ಎಲ್ಲ ಸಮುದಾಯದ ರಕ್ಷಣೆ ನಿಂತದ್ದು ಬಿಜೆಪಿ ಪಕ್ಷ ಮತ್ತು ಇಲ್ಲಿನ ಶಾಸಕ, ಸಚಿವ ಸುನಿಲ್ ರವರು ಎಂದ ಅವರು ಕಾರ್ಕಳದಲ್ಲಿ  5 ವರುಷವೂ ಗಲಾಟೆ, ಗದ್ದಲಗಳಿಲ್ಲದೆ  ಶಾಂತಿ ನೆಲೆಸಿರುವುದೆ ಅದಕ್ಕೆ ಸಾಕ್ಷಿ.

ಎಲ್ಲ ಜಾತಿ ಸಮುದಾಯಗಳಿಗೆ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಒದಗಿಸಿದ  ಶಾಸಕರಿದ್ದರೆ ಅದು ಸುನಿಲ್ ಕುಮಾರ್. ಹಾಗಾಗಿ ಕ್ಷೇತ್ರದ ಜನರಿಗಾಗಿ ಕೆಲಸ ಮಾಡುವ, ಎಲ್ಲ ಜಾತಿಯನ್ನು ಪ್ರೀತಿಸುವ ಶಾಸಕ ಸುನಿಲರನ್ನೆ ಮತ್ತೆ ಗೆಲ್ಲಿಸೋಣ. ಜಾತಿವಾದಿಗಳನ್ನು ದೂರವಿಡೋಣ ಎಂದರು. ಜಿ.ಪಂ ಮಾಜಿ ಸದಸ್ಯ ಸುಮಿತ್ ಶೆಟ್ಟಿ ಮಾತನಾಡಿ ಬಿಜೆಪಿ ಒಂದು ಜಾತಿಗೆ ಮೀಸಲಿಟ್ಟ ಪಕ್ಷ ಅಲ್ಲ. ಎಲ್ಲರನ್ನು ಸಮಾನವಾಗಿ ಕಾಣುವ ಪಕ್ಷ. ಪಕ್ಷ ಸಿದ್ಧಾಂತದಂತೆ ನಡೆಯುವ ಸುನಿಲ್ ಕುಮಾರ್ ಅವರನ್ನು ಮತ್ತೊಮ್ನೆ ಶಾಸಕರಾಗಿ ಆರಿಸುವುದು ನಮ್ಮ ಕರ್ತವ್ಯ ಎಂದರು. ಪ್ರಮುಖರಾದ ರವೀಂದ್ರ ನಾಯಕ್‌, ಮಾಲಿನಿ ಶೆಟ್ಟಿ, ಜಗದೀಶ ಪೂಜಾರಿ, ಸಂತೋಷ್ ವಾಗ್ಲೆ, ಪ್ರಶಾಂತ್ ಶೆಟ್ಟಿ ಸಹಿತ ಹಲವು ಮಂದಿ ಗಣ್ಯರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಮತಯಾಚಿಸಿ ಮಾತನಾಡಿದರು.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

4

Kundapura: ಕೋಣಿ ಬ್ಯಾಂಕ್‌ ಕಳ್ಳತನ ಯತ್ನ; ಅಂತರ್‌ ರಾಜ್ಯ ಕಳ್ಳರಿಬ್ಬರ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.