![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 14, 2024, 12:46 AM IST
ಉಡುಪಿ: ಕೇಂದ್ರ ಸರಕಾರಿ ಉದ್ಯೋಗಿಗಳು, ನಿವೃತ್ತ ನೌಕರರ ಬಹುದಿನದ ಬೇಡಿಕೆಯಾದ ಸೆಂಟ್ರಲ್ ಗವರ್ನ್ಮೆಂಟ್ ಹೆಲ್ತ್ ಸ್ಕೀಮ್ (ಸಿಜಿಎಚ್ಸಿ) ವೆಲ್ನೆಸ್ ಸೆಂಟರನ್ನು ಉಡುಪಿಯಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡದಲ್ಲಿ ಇಂಥದ್ದೇ ಕೇಂದ್ರ ತೆರೆಯಲು ಅನುಮೋದನೆ ನೀಡಲಾಗಿತ್ತು.
ಕೇಂದ್ರ ಸರಕಾರದ 46ಕ್ಕೂ ಅಧಿಕ ಇಲಾಖೆಗಳಲ್ಲಿ 4,500 ಉದ್ಯೋಗಿಗಳು ಉಡುಪಿ ಹಾಗೂ ನೆರೆಯ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
9 ಸಾವಿರಕ್ಕೂ ಅಧಿಕ ನಿವೃತ್ತ ಉದ್ಯೋಗಿಗಳಿದ್ದಾರೆ. ಈ ವೆಲ್ನೆಸ್ ಕೇಂದ್ರ ಉಡುಪಿಯಲ್ಲಿ ಪ್ರಾರಂಭವಾಗುವುದರಿಂದ ನಿವೃತ್ತ ನೌಕರರು ನಿಯಮಾನುಸಾರ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ ಎಂದು ಕೇಂದ್ರ ಸಹಾಯಕ ಕೃಷಿ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಈ ಬಗ್ಗೆ ಶೋಭಾ ಅವರು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು.ಈಗ ಉಡುಪಿ ಸಹಿತ 20 ನಗರಗಳಲ್ಲಿ ವೆಲ್ನೆಸ್ ಸೆಂಟರ್ಗಳನ್ನು ತೆರೆಯುವುದಾಗಿ ಕೇಂದ್ರ ಸರಕಾರ ತಿಳಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.