ಬಿಎಸ್‌ವೈ ಮೂಲೆಗುಂಪು ಮಾಡಿದ್ದು ಯಾರು?: ಜೋಶಿಗೆ ಸಿದ್ದರಾಮಯ್ಯ ತಿರುಗೇಟು

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಬೆಂಕಿ ಬಿದ್ದದ್ದು ಯಾರ ಹೊಟ್ಟೆಗೆ ಎಂದು ಪ್ರಶ್ನಿಸಿದ್ದಾರೆ.

Team Udayavani, Jul 12, 2022, 10:58 AM IST

ಬಿಎಸ್‌ವೈ ಮೂಲೆಗುಂಪು ಮಾಡಿದ್ದು ಯಾರು?: ಜೋಶಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ನಾಲ್ಕು ದಶಕಗಳ ಕಾಲ ಬೆವರು ಹರಿಸಿ ಪಕ್ಷ ಕಟ್ಟಿದ್ದ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದವರು ಯಾರು. ಪಕ್ಷ ಅಧಿಕಾರದಲ್ಲಿದ್ದಾಗಲೇ ಅವರನ್ನು ಜೈಲಿಗೆ ಕಳುಹಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಯಾರ ಷಡ್ಯಂತ್ರ. ನೀವೂ ಅದರಲ್ಲಿ ಶಾಮೀಲಾಗಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಿದ್ದರಾಮೋತ್ಸವದಿಂದ ಕಾಂಗ್ರೆಸ್‌ ಸರ್ವನಾಶವಾಗಲಿದೆ ಎಂದಿದ್ದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿಕೆ ಪ್ರಸ್ತಾಪಿಸಿ ಟ್ವೀಟ್‌ ಮಾಡಿರುವ ಅವರು, ಬಿಎಸ್‌ ವೈಗೆ ಮುಖ್ಯಮಂತ್ರಿ ಸ್ಥಾನದ ಆಸೆ ತೋರಿಸಿ ಅವರಿಂದಲೇ ಆಪರೇಷನ್‌ ಕಮಲ ಮಾಡಿಸಿದ್ದು ಯಾರು?, ಕೊನೆಗೆ ಅವರನ್ನೇ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದು ಯಾರು. ಕೈಗೆ ಬಂದದ್ದು ಬಾಯಿಗೆ ಬಾರದೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಬೆಂಕಿ ಬಿದ್ದದ್ದು ಯಾರ ಹೊಟ್ಟೆಗೆ ಎಂದು ಪ್ರಶ್ನಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಿತ್ಯ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆಗೈಯ್ದರೂ ಅವಹೇಳನಕಾರಿಯಾಗಿ ಮಾತನಾಡಿದರೂ ಕ್ರಮ ಕೈಗೊಳ್ಳದಂತೆ ತಡೆಯುತ್ತಿದ್ದ ಕೈಗಳು ಯಾರದ್ದು ಪ್ರಹ್ಲಾದ್‌ ಜೋಶಿಯವರೇ ಎಂದಿದ್ದಾರೆ.

ಲಿಂಗಾಯಿತರನ್ನು ಲಿಂಗಾಯಿತ ಮಠದ ಸ್ವಾಮಿಗಳನ್ನು ಓಲೈಸುತ್ತಾ ಪಕ್ಷ ಕಟ್ಟಿ ಈಗ ಪಕ್ಷದಲ್ಲಿರುವ ಒಬ್ಬೊಬ್ಬ ಲಿಂಗಾಯಿತರನ್ನು ಮೂಲೆಗುಂಪು ಮಾಡುತ್ತಿರುವುದು ಯಾರ ಕಾರಸ್ತಾನ, ಮುಖ್ಯಮಂತ್ರಿ ಸ್ಥಾನದ ಕನಸಿನಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮತ್ತು ಶಾಸಕರ ಅರವಿಂದ ಬೆಲ್ಲದ ಅವರ ಆಸೆಗೆ ತಣ್ಣೀರೆರಚಿದ್ದು ಯಾರು ಎಂದು ಕೇಳಿದ್ದಾರೆ.

ವಿಜಯೇಂದ್ರಗೆ ಸಚಿವ ಸ್ಥಾನ ತಪ್ಪಿದ್ದು ಹೇಗೆ?
ಬಿಎಸ್‌ ವೈ  ಪುತ್ರ ವಿಜಯೇಂದ್ರಗೆ ಸಚಿವ ಸ್ಥಾನ ಸಿಗದಂತೆ ಮಾಡಲು ಪಂಚೆ ಎತ್ತಿಕಟ್ಟಿ ನಿಂತು ಸಂತೋಷ ಪಡುತ್ತಿರುವವರು ಯಾರು, ಆ ಸಂತೋಷದಲ್ಲಿ ಭಾಗಿಯಾಗಿ ರುವವರು ಯಾರು, ಹಗರಣದಲ್ಲಿ ಅವರ ಹೆಸರನ್ನು ಸೋರಿಬಿಡುತ್ತಿರುವ ಸಂಚು ಯಾರದ್ದು ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.