Udupi; ಮುಂದಿನ ಎಂಪಿ ಯಾರು? ಚರ್ಚೆ ಬಲು ಜೋರು


Team Udayavani, Apr 21, 2024, 7:30 AM IST

Udupi; ಮುಂದಿನ ಎಂಪಿ ಯಾರು? ಚರ್ಚೆ ಬಲು ಜೋರು

ಉಡುಪಿ: ಇಬ್ಬರೂ ಅಭ್ಯರ್ಥಿಗಳು ಓಕೆ. ಯಾರು ಎಂಪಿ ಹಾಗಾದ್ರೆ? ಈ ಪ್ರಶ್ನೆಯೇ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕೇಳಿಬರುತ್ತಿರುವುದು.

ಬಿಜೆಪಿ ಶಾಸಕರಿದ್ದಾರೆ, ಮೋದಿ ಅಲೆಯೂ ಇದೆ. ರಾಜ್ಯ ಸರಕಾರದ ಗ್ಯಾರಂಟಿ, ಅಭ್ಯರ್ಥಿಗಳ ವೈಯಕ್ತಿಕ ವರ್ಚಸ್ಸು ಇದೆ. ಹೀಗೆಲ್ಲ ಇರುವಾಗ ಗೆಲುವಿಗೆ ಏನು ಕಾರಣವಾದೀತು ಎಂಬುದು ಬಹುತೇಕರ ಪ್ರಶ್ನೆ.

ನಗರಸಭೆ, ಗ್ರಾಮ ಪಂಚಾಯತ್‌ಗಳನ್ನು ಒಳಗೊಂಡ ಕ್ಷೇತ್ರವಿದು. ನಗರಸಭೆ ವ್ಯಾಪ್ತಿಯ 35 ವಾರ್ಡ್‌ ಗಳು ಮತ್ತು ಅದಕ್ಕೆ ಹೊಂದಿ ಕೊಂಡ ಕೆಮ್ಮಣ್ಣು, ಕಲ್ಯಾಣಪುರ, ತೆಂಕನಿಡಿಯೂರು, ಬಡನಿಡಿಯೂರು, ಅಂಬಲಪಾಡಿ, ಕಡೆಕಾರು ಗ್ರಾ.ಪಂ.ಗಳಲ್ಲಿ ನಗರದ ಛಾಯೆ ಹೆಚ್ಚಿದೆ. ಹಾರಾಡಿ-ಬೈಕಾಡಿ, ಚಾಂತಾರು, ವಾರಂಬಳ್ಳಿ, ಹಂದಾಡಿ, ಚೇರ್ಕಾಡಿ, ಕೊಕ್ಕರ್ಣೆ, ಕರ್ಜೆ, ಕಳತ್ತೂರು, ನೀಲಾವರ, ಆರೂರು, ಉಪ್ಪೂರು, ಹಾವಂಜೆ, ನಾಲ್ಕೂರು ಗ್ರಾ.ಪಂ.ಗಳು ಗ್ರಾಮೀಣ ಭಾಗದಲ್ಲಿವೆ. ಕೃಷಿ, ಮೀನುಗಾರಿಕೆ ಪ್ರಮುಖ. ಕೈಗಾರಿಕೆ, ವಿದ್ಯಾಸಂಸ್ಥೆ, ಆಸ್ಪತ್ರೆ ಒಳಗೊಂಡಂತೆ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವ ಹಿಸುವವರ ಪ್ರಮಾಣವೂ ಹೆಚ್ಚಿದೆ.

ಇದೀಗ ಕ್ಷೇತ್ರದ ಚುನಾವಣೆ ಚರ್ಚೆ ಬಿರುಸುಗೊಂಡಿದೆ, ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ಸಾರ್ವಜನಿಕರ ಬಾಯಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳ ಹೆಸರು ಚಾಲ್ತಿಯಲ್ಲಿದೆ. ನಗರ ಪ್ರದೇಶದ ನಿವಾಸಿಗಳ ಅಭಿಪ್ರಾಯ ಒಂದು ರೀತಿ ಯದ್ದಾದರೆ, ಗ್ರಾಮೀಣ ಭಾಗದವರ ಅಭಿಪ್ರಾಯ ಬೇರೆ ಇದೆ.

ದೇಶದಲ್ಲಿ 10 ವರ್ಷದಲ್ಲಿ ಆಗಿರುವ ಅಭಿವೃದ್ಧಿಯನ್ನು ಗಮನಿಸಿ ಓಟು ಹಾಕುವವರು ಹೆಚ್ಚು. ಅಭ್ಯರ್ಥಿಯನ್ನು ನೋಡಿ ಓಟು ಮಾಡುವವರು ತೀರಾ ಕಡಿಮೆ ಎನ್ನುತ್ತಾರೆ ಕಡಿಯಾಳಿಯ ಮಂಜುನಾಥ್‌.

ಇದು ದೇಶದ ಅಧಿಕಾರ ಚುಕ್ಕಾಣಿ ಹಿಡಿಯುವ ಚುನಾವಣೆಯಾದರೂ ನಮ್ಮ ಅಭ್ಯರ್ಥಿ ಸಂಸತ್ತಿನಲ್ಲಿ ಸ್ಥಳೀಯ ಸಮಸ್ಯೆಗಳ ಮೇಲೆ ಹೆಚ್ಚು ಬೆಳಕು ಚೆಲ್ಲುವಂತಿರಬೇಕು. ಹತ್ತು ವರ್ಷಗಳಲ್ಲಿ ಸಂಸದರು ಸ್ಥಳೀಯರಿಗೆ ಸಿಗುತ್ತಲೇ ಇರಲಿಲ್ಲ ಎಂಬುದು ಕೆಮ್ಮಣ್ಣು ನಿವಾಸಿ ಶ್ರೀನಿವಾಸ್‌ ಅವರ ಅಭಿಪ್ರಾಯ.

ಕರ್ಜೆಯ ಗೋಪಾಲರು ಹೇಳು ವಂತೆ, ಕೇಂದ್ರ ಸರಕಾರದಿಂದ ಕೃಷಿ ಸಮ್ಮಾನ ಸಹಿತ ಹಲವು ಯೋಜನೆ ಫ‌ಲ ನಮಗೂ ಸಿಕ್ಕಿದೆ. ಕಾಂಗ್ರೆಸ್‌ ಬಂದ ಅನಂತರ ಗ್ಯಾರಂಟಿಗಳು ಉಪ ಯೋಗವಾಗಿದೆ. ಮನೆಯವರಿಗೆ 2 ಸಾವಿರ ರೂ. ಬರುತ್ತಿದೆ. ವಿದ್ಯುತ್‌ ಬಿಲ್‌ ಒಮ್ಮೊಮ್ಮೆ ಬರದು, ಒಮ್ಮೆಮ್ಮೆ ಬರುತ್ತದೆ. ಉಚಿತ ಬಸ್‌ ಪ್ರಯೋಜನವಾಗುತ್ತಿಲ್ಲ. ಆದರೂ ಈ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ನೋಡಿ ಮತದಾನ ಮಾಡಲಿದ್ದೇವೆ. ಪಕ್ಷವು ಜಾತಿ ಆಧಾರದಲ್ಲಿ ಟಿಕೆಟ್‌ ನೀಡುವಾಗ ಮತದಾರ ಜಾತಿ ನೋಡಿಯೇ ಮತದಾನ ಮಾಡುತ್ತಾನೆ. ಸಣ್ಣ ಸಣ್ಣ ಜಾತಿಗಳಿಗೆ ಯಾವುದೇ ಪಕ್ಷ ಮನ್ನಣೆ ನೀಡುವುದಿಲ್ಲ ಎಂಬುದು ಬ್ರಹ್ಮಾವರದ ಸಂತೋಷ್‌ ಅವರ ಅನಿಸಿಕೆ.

ಕೇಂದ್ರದಲ್ಲಿ ಮೋದಿಯೇ ಅಧಿಕಾರಕ್ಕೆ ಬರಬೇಕು. ಸ್ಥಳೀಯ ಸಮಸ್ಯೆಗಳು ಸಾಕಷ್ಟು ಇರುತ್ತವೆ. ಹಾಗೆಂದ ಮಾತ್ರಕ್ಕೆ ಬೇರೆ ಪಕ್ಷ ಅಧಿಕಾರಕ್ಕೆ ಬಂದ ತತ್‌ಕ್ಷಣ ಸಮಸ್ಯೆ ಬಗೆಹರಿಯದು. ದೇಶದ ರಕ್ಷಣೆ ಮುಖ್ಯ ಎನ್ನುತ್ತಾರೆ ಮಲ್ಪೆಯ ಭುವನ್‌.

ಹೀಗಾಗಿ ಇಡೀ ಕ್ಷೇತ್ರದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಭಿನ್ನ ಅಭಿಪ್ರಾಯಗಳು ಕಂಡು ಬರುತ್ತಿವೆ. ಆದರೂ, ಎರಡೂ ಪಕ್ಷದ ಅಭ್ಯರ್ಥಿ ಸಮರ್ಥರಿದ್ದಾರೆ. ಕರಾವಳಿಯಾದ ನೆಲೆಯಲ್ಲಿ ಮೋದಿ ಅಲೆ ಖಂಡಿತ ಕೆಲಸ ಮಾಡುತ್ತದೆ ಎಂಬ ಅಭಿಪ್ರಾಯ ದಟ್ಟವಾಗಿ ಕೇಳಿಬರುತ್ತಿದೆ.

ರಾಜ್ಯ ಸರಕಾರ ನೀಡಿರುವ ಗ್ಯಾರಂಟಿ ಮಹಿಳೆಯರ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದು ಒಳಸುರಿಯಾಗಿ ಕೆಲಸ ಮಾಡಬಹುದು. ಹಿಂದುತ್ವ, ಜಾತಿ ಲೆಕ್ಕಚಾರ ಎಲ್ಲವೂ ಕ್ಷೇತ್ರದಲ್ಲಿ ಮತದಾನದ ದಿನ ಪ್ರಮುಖವಾಗುತ್ತದೆ ಎನ್ನುವುದು ಬಹುತೇಕರ ಅನಿಸಿಕೆ.

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.