Bengaluru South: ತೇಜಸ್ವಿ ಮತ್ತೆ ಸ್ಪರ್ಧಿಸುವರೇ? ತೇಜಸ್ವಿನಿ ಟಿಕೆಟ್‌ ಗಿಟ್ಟಿಸುವರೇ?

ಅಚ್ಚರಿ ಅಭ್ಯರ್ಥಿಗಳಾಗುವರೇ ನಿರ್ಮಲಾ, ಜೈಶಂಕರ್‌ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳಾಗಲು ಹಿಂದೇಟು: ಕಣಕ್ಕಿಳಿಯುವರೇ ಸೌಮ್ಯಾ ರೆಡ್ಡಿ ?

Team Udayavani, Jan 20, 2024, 5:57 AM IST

tejaswi surya

ಬೆಂಗಳೂರು: ಮೂರು ದಶಕಗಳಿಗೂ ಹೆಚ್ಚು ಕಾಲದಿಂದ ಬಿಜೆಪಿಯ ಭದ್ರಕೋಟೆಯಾಗಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಬಿಜೆಪಿಗೆ ಪ್ರತಿಷ್ಠೆಯಾಗಿದ್ದರೆ, ವಿಪಕ್ಷ ಕಾಂಗ್ರೆಸ್‌ಗೆ ದೊಡ್ಡ ಸವಾಲು. ಜೆಡಿಎಸ್‌ನದು ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಾತ್ರ.

ಅಂದಾಜು 32 ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ಕಳೆದುಕೊಂಡ ತನ್ನ ಹಿಡಿತವನ್ನು ಮರಳಿ ಪಡೆಯಲು ಕಾಂಗ್ರೆಸ್‌ ಪ್ರತಿಸಲವೂ ಭಗೀರಥ ಪ್ರಯತ್ನ ಮಾಡುತ್ತಲೇ ಇದೆ. ಮಾಜಿ ಮುಖ್ಯಮಂತ್ರಿ ದಿ| ಗುಂಡೂರಾವ್‌ ಅವರ ಪತ್ನಿ ವರಲಕ್ಷ್ಮಿ ಗುಂಡೂರಾವ್‌, ಐಟಿ ದಿಗ್ಗಜ ನಂದನ್‌ ನಿಲೇಕಣಿ, ಹಿರಿಯ ಕಾಂಗ್ರೆಸ್ಸಿಗ ಬಿ.ಕೆ.ಹರಿಪ್ರಸಾದ್‌, ಮಾಜಿ ಸಚಿವ ಎಂ.ಕೃಷ್ಣಪ್ಪ, ಸಚಿವ ಕೃಷ್ಣಬೈರೇ ಗೌಡರಂತಹ ಘಟಾನುಘಟಿಗಳನ್ನು ಕಣಕ್ಕಿಳಿಸಿದರೂ ಜನ ಕೈಹಿಡಿಯಲಿಲ್ಲ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ 1989 ರಲ್ಲಿ ಒಮ್ಮೆ ಮಾತ್ರ ಗೆದ್ದಿದೆ. ಮಾಜಿ ಮುಖ್ಯಮಂತ್ರಿ ಆರ್‌.ಗುಂಡೂರಾವ್‌ ಅವರು ವಿ.ಎಸ್‌.ಕೃಷ್ಣಯ್ಯರ್‌ ಅವರನ್ನು ಸೋಲಿಸುವ ಮೂಲಕ ಕಾಂಗ್ರೆಸ್‌ಗೆ ಗೆಲುವು ತಂದುಕೊಟ್ಟಿದ್ದರು. ಅದೇ ಮೊದಲು, ಅದೇ ಕೊನೆ. ಬಳಿಕ ಕಾಂಗ್ರೆಸ್‌ ನಿರಂತರ ಸೋತಿದೆ.

1991ರಲ್ಲಿ ಖ್ಯಾತ ಅರ್ಥಶಾಸ್ತ್ರಜ್ಞ ಪ್ರೊ| ಕೆ. ವೆಂಕಟಗಿರಿ ಗೌಡ ಅವರ ಮೂಲಕ ಗೆಲುವಿನ ಖಾತೆ ತೆರೆದ ಬಿಜೆಪಿ ಅಲ್ಲಿಂದ ಸೋಲು ಕಂಡಿಲ್ಲ. ಈ ಕ್ಷೇತ್ರವನ್ನು ಬಿಜೆಪಿ ತೆಕ್ಕೆಯಿಂದ ಕಸಿದುಕೊಳ್ಳಲು ಕಾಂಗ್ರೆಸ್‌, ಜನತಾದಳ ಎಷ್ಟೇ ಪ್ರಯತ್ನಿಸಿದರೂ ಫ‌ಲ ಸಿಕ್ಕಿಲ್ಲ. ಅನಂತರ ನಡೆದ 7 ಚುನಾವಣೆಗಳಲ್ಲಿ ಸತತವಾಗಿ ಬಿಜೆಪಿ ಗೆಲ್ಲುವ ಮೂಲಕ ಕಮಲದ ಭದ್ರಕೋಟೆಯಾಗಿದೆ. ಈ ಕ್ಷೇತ್ರವನ್ನು ಅನಂತಕುಮಾರ್‌ 6 ಸಲ ಪ್ರತಿನಿಧಿಸಿದ್ದರು. ಸದ್ಯ ತೇಜಸ್ವಿ ಸೂರ್ಯ ಈ ಕ್ಷೇತ್ರದ ಸಂಸದರು.

ಈ ಸಲವೂ ಅಚ್ಚರಿಯೇ?
ಕಳೆದ 2019ರ ಲೋಕಸಭಾ ಚುನಾವಣೆಗೆ ಕೆಲವೇ ಕೆಲವು ತಿಂಗಳು ಬಾಕಿ ಇರುವಾಗ ಅನಂತಕುಮಾರ್‌ ಅಕಾಲಿಕ ನಿಧನ (2018-ನವೆಂಬರ್‌) ಬಿಜೆಪಿ ಪಾಲಿಗೆ ಒಂದು ರೀತಿ ಆಘಾತ ನೀಡಿತ್ತು. ಬಳಿಕ ಸಹಜವಾಗಿಯೇ ಅನಂತ ಕುಮಾರ್‌ ಪತ್ನಿ ತೇಜಸ್ವಿನಿಗೆ ಟಿಕೆಟ್‌ ಸಿಗಬಹುದೆಂಬ ಲೆಕ್ಕಾಚಾರ ಬಿಜೆಪಿಯಲ್ಲಿ ಮಾತ್ರವಲ್ಲದೆ, ರಾಜ್ಯ ರಾಜಕೀಯ ವಲಯದಲ್ಲೂ ದಟ್ಟವಾಗಿತ್ತು. ಚುನಾವಣೆ ಘೋಷಣೆ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸುವ ಮುನ್ನವೇ ಟಿಕೆಟ್‌ ನಿರೀಕ್ಷೆಯಲ್ಲಿದ್ದ ತೇಜಸ್ವಿನಿ ಅನಂತಕುಮಾರ್‌ ಪ್ರಚಾರವನ್ನೂ ಆರಂಭಿಸಿದ್ದರು. ಆದರೆ ದಿಢೀರನೇ ಪ್ರಚಾರಕ್ಕೆ ವರಿಷ್ಠರು ತಡೆ ಹಾಕಿ ಕೆಲವು ದಿನಗಳ ಬಳಿಕ ಅಚ್ಚರಿ ಆಯ್ಕೆ ಎಂಬಂತೆ ಬಸವನಗುಡಿ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಅವರ ಸಹೋದರನ ಪುತ್ರ ತೇಜಸ್ವಿ ಸೂರ್ಯ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿತು. ಇದು ಅನಂತಕುಮಾರ್‌ ಹಿತೈಷಿಗಳು, ಬೆಂಬಲಿಗರಿಗೆ ಮತ್ತೂಂದು ಆಘಾತವಾಯಿತು. ಚುನಾವಣೆಯಲ್ಲಿ ತೇಜಸ್ವಿ ಸೂರ್ಯ ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸುವ ಮೂಲಕ ಬಿಜೆಪಿಯ ಓಟ ಮುಂದುವರಿಸಿದರು.

ಈಗ ಚುನಾವಣೆ ಘೋಷಣೆಗೆ ಕೆಲವು ತಿಂಗಳಷ್ಟೇ ಬಾಕಿ ಇರುವಾಗ ಬಿಜೆಪಿ ವಲಯದಲ್ಲಿ ಹಲವು ಹೆಸರು ಗಳು ಮುಂಚೂಣಿಗೆ ಬಂದಿವೆ. ಈ ಸಲವಾದರೂ ತೇಜಸ್ವಿನಿಗೆ ಟಿಕೆಟ್‌ ಕೊಡ
ಬೇಕೆಂಬ ಕೂಗು ಮತ್ತೆ ಎದ್ದಿದೆ. ಅಲ್ಲದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ವಿದೇಶಾಂಗ ಸಚಿವ ಜೈಶಂಕರ್‌ ಇಲ್ಲಿಂದ ಸ್ಪರ್ಧಿಸಬಹುದೆಂಬ ಮಾತುಗಳೂ ಹರಿದಾಡುತ್ತಿವೆ. ಹೀಗಾಗಿ ಹಾಲಿ ಸಂಸದರಾಗಿದ್ದರೂ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್‌ ಇನ್ನೂ ಖಾತರಿ ಇಲ್ಲದಂತಾಗಿದೆ. ಆದರೆ ಅವರು ಈಗಾಗಲೇ ಕ್ಷೇತ್ರಗಳಲ್ಲಿ ಪ್ರಚಾರದ ತಾಲೀಮು ಆರಂಭಿಸಿದ್ದಾರೆ. ತಮ್ಮ ಸೀಟನ್ನು ಉಳಿಸಿಕೊಳ್ಳುತ್ತಾರೋ ಅಥವಾ ಬೇರೆಯವರಿಗೆ ತ್ಯಾಗ ಮಾಡುತ್ತಾರೋ ಎಂಬುದಕ್ಕೆ ಬಿಜೆಪಿ ವರಿಷ್ಠರಲ್ಲಿ ಉತ್ತರವಿದೆ. ಬಿಜೆಪಿ-ಜೆಡಿಎಸ್‌ ಚುನಾವಣೆ ಮೈತ್ರಿ ಏರ್ಪಡುವ ಸಾಧ್ಯತೆಗಳಿಂದಾಗಿ ಇಲ್ಲಿ ಈ ಸಲ ಜೆಡಿಎಸ್‌ ಅಭ್ಯರ್ಥಿ ಕಣದಲ್ಲಿ ಇರುವುದಿಲ್ಲವೆಂಬುದು ಈ ಸಲದ ವಿಶೇಷ.

ಪ್ರತಿ ಸಲವೂ ಕಾಂಗ್ರೆಸ್‌ನಿಂದ ಹೊಸ ಅಭ್ಯರ್ಥಿ ಪ್ರತಿ ಚುನಾವಣೆಯಲ್ಲೂ ಕಾಂಗ್ರೆಸ್‌ ಹೊಸ ಅಭ್ಯರ್ಥಿಗಳ ಮೂಲಕ ಏನೇನೋ ಪ್ರಯೋಗ ನಡೆಸುತ್ತಿದೆ. ಬಿ.ಕೆ.ಹರಿಪ್ರಸಾದ್‌ ಮಾತ್ರ ಎರಡು ಸಲ (1999 ಹಾಗೂ 2019) ಸ್ಪರ್ಧಿಸಿದ್ದರೆ ಉಳಿದಂತೆ ಹೊಸ ಅಭ್ಯರ್ಥಿಗಳೇ. ಈ ಸಲವೂ ಕಾಂಗ್ರೆಸ್‌ ತನ್ನ ಅಭ್ಯರ್ಥಿಗೆ ಶೋಧ ನಡೆಸುತ್ತಿದೆ. ಜಯನಗರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ) ಅವರ ಹೆಸರು ಚಲಾವಣೆಯಲ್ಲಿದ್ದರೂ ಸ್ವತಃ ಅವರಿಗೆ ಸ್ಪರ್ಧಿಸುವ ಆಸಕ್ತಿ ಇಲ್ಲವೆಂದು ಹೇಳಲಾಗುತ್ತಿದೆ. ಹೀಗಾಗಿ ಇಲ್ಲಿ ಯಾರೆಂಬ ಪ್ರಶ್ನೆ ಉದ್ಭವವಾಗಿದೆ. ಶ್ರೀನಿವಾಸಪುರದ ಮಾಜಿ ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಹೆಸರನ್ನು ಬ್ರಾಹ್ಮಣರೆಂಬ ಜಾತಿ ಕಾರಣಕ್ಕೆ ಕೆಲವರು ತೇಲಿ ಬಿಟ್ಟಿದ್ದಾರೆ. ಅವರು ಕೂಡ ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದಾರೆ. ದಕ್ಷಿಣದಲ್ಲಿ ಅಕ್ಷರಶಃ ಕಾಂಗ್ರೆಸ್‌ಗೆ ಅಭ್ಯರ್ಥಿಗಳದ್ದೇ ಕೊರತೆ. ಅಂತಿಮವಾಗಿ ಸೌಮ್ಯಾ ರೆಡ್ಡಿ ಪಕ್ಷದ ಸೂಚನೆಗೆ ತಲೆಬಾಗಿ ಕಣಕ್ಕಿಳಿ ಯುವರೇ – ಕಾದು ನೋಡಬೇಕಿದೆ.

 ಎಂ.ಎನ್‌.ಗುರುಮೂರ್ತಿ

ಟಾಪ್ ನ್ಯೂಸ್

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.