![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 18, 2023, 12:46 AM IST
ಮಲ್ಪೆ: ವಿಂಚ್ ಬೋಟ್ ಪ್ಯಾರಾ ಸೈಲಿಂಗ್ ಮಾಡುತ್ತಿದ್ದ ಪ್ರವಾಸಿಗ ಬಾಲಕನೋರ್ವ ಕೆಳಗೆ ಬಿದ್ದು ಗಾಯಗೊಂಡಿರುವ ಘಟನೆ ಶುಕ್ರವಾರ ಮಲ್ಪೆ ಬೀಚ್ನಲ್ಲಿ ಸಂಭವಿಸಿದೆ.
ಬೆಂಗಳೂರು ಮೂಲದ ಇಕ್ಷ್ಯಾನ್ ಚೌಧರಿ (12) ಎಂಬ ಬಾಲಕ ಗಾಯಗೊಂಡಿದ್ದಾನೆ. 10 ಮೀಟರ್ ಎತ್ತರದಿಂದ ಬೋಟಿಗೆ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿದೆ. ಸರಿಯಾದ ಸುರಕ್ಷತ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಬಾಲಕನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗುಣಮುಖರಾಗಿದ್ದಾರೆ.
ಮಲ್ಪೆ ಬೀಚ್ನಲ್ಲಿ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ಅವಕಾಶ ನೀಡಲಾಗಿತ್ತು. ಅಡ್ವೆಂಚರ್ ಚಟುವಟಿಕೆ, ದೋಣಿ ವಿಹಾರ ಆರಂಭವಾಗಿತ್ತು. ಆದರೆ ಈ ಕುರಿತು ಟೆಂಡರ್ ಪಡೆದಿರುವವರು ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿಲ್ಲ. ಬೋಟಿಂಗ್ ವೇಳೆಯಲ್ಲಿ ದೋಣಿಯ ಸಾಮರ್ಥ್ಯಕ್ಕಿಂತ ಅಧಿಕ ಜನರನ್ನು ಹತ್ತಿಸಿಕೊಳ್ಳಲಾಗುತ್ತದೆ. ನಿಯಮ ಮೀರಿ ಇಂತಹ ಚಟುವಟಿಕೆಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಭಾಷ್ ನಾಯ್ಕ ಅವರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಪ್ರವಾಸಿಗರಿಗೆ ರಕ್ಷಣೆ ನೀಡದೇ ಇರುವ ಕುರಿತು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಲ್ಪೆ ಅಭಿವೃದ್ದಿ ಸಮಿತಿಯ ಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದರು ಎನ್ನಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.