ಸಿಬಂದಿ ಉಡಾಫೆಗೆ ಮಹಿಳೆಯಿಂದ ಹೋರಾಟ; ಎಟಿಎಂನಲ್ಲಿ ಹಣ ಹಾಕಿದರೂ ರಸೀದಿ ಬಾರದೆ ಕಂಗಾಲು
Team Udayavani, Jun 8, 2022, 6:15 AM IST
ಸುರತ್ಕಲ್: ತುರ್ತಾಗಿ ಚಿಕಿತ್ಸೆಗೆಂದು ಬ್ಯಾಂಕ್ಗೆ ಹಣ ಹಾಕಲು ಬಂದ ಮಹಿಳೆಗೆ ಬ್ಯಾಂಕ್ ಸಿಬಂದಿ ತೋರಿದ ಉಡಾಫೆ ವರ್ತನೆಯಿಂದ ತೀವ್ರ ಆಕ್ರೋಶಗೊಂಡು ಹೋರಾಟಕ್ಕಿಳಿದು ಹಣ ಪಡೆದುಕೊಂಡ ಘಟನೆ ಸುರತ್ಕಲ್ನಲ್ಲಿ ನಡೆದಿದೆ.
ಚಿಕಿತ್ಸೆಗೆ ದಾಖಲಾಗಿದ್ದ ಕುಟುಂಬವೊಂದಕ್ಕೆ ನೆರವಾಗುವ ಸಲುವಾಗಿ ಅವರು ನೀಡಿದ ಹಣವನ್ನು ತನ್ನ ಖಾತೆಯ ಮೂಲಕ ಅವರಿಗೆ ಹಾಕಲು ಸುರತ್ಕಲ್ ರಾಷ್ಟ್ರೀಯ ಬ್ಯಾಂಕ್ನ ಶಾಖೆಯೊಂದಕ್ಕೆ ಹೋದ ಸಂದರ್ಭ ಸಿಬಂದಿ ಹಣವನ್ನು ಎಟಿಎಂ ಯಂತ್ರದ ಮೂಲಕ ಪಾವತಿಸುವಂತೆ ಸೂಚಿಸಿದರು.
ಮಹಿಳೆ ಎಟಿಎಂ ಬಳಿಯ ಯಂತ್ರದಲ್ಲಿ ಹಣ ಹಾಕಿ ರಶೀದಿಗಾಗಿ ಕಾಯುತ್ತಾ ನಿಂತರೂ ಪ್ರೊಸೆಸ್ ಎಂಬುದಷ್ಟೇ ಬಂದಿತ್ತು. ಖಾತೆಗೆ ಹಣ ವರ್ಗಾವಣೆ ಆಗದೆ ಯಂತ್ರ ಕೈಕೊಟ್ಟಿತ್ತು. ಇದನ್ನು ತಿಳಿದು ಗಾಬರಿಯಾದ ಮಹಿಳೆ ಹಣದ ಅಗತ್ಯವಿದ್ದು ತತ್ಕ್ಷಣ ಹಣ ಖಾತೆಗೆ ಹಾಕುವಂತೆ ಮನವಿ ಮಾಡಿದರು. ಇದಕ್ಕೆ ಸರಿಯಾಗಿ ಸ್ಪಂದಿಸದ ಸಿಬಂದಿ ಮ್ಯಾನೇಜರ್ ಇಲ್ಲ, ಇದರ ಬಗ್ಗೆ ಮುಖ್ಯ ಕಚೇರಿಗೆ ಹೋಗಿ ತಿಳಿಸಿ. ಈ ಸಮಸ್ಯೆ ಬಗೆಹರಿಸಲು ಎರಡು ಮೂರು ದಿನ ತಗಲುತ್ತದೆ ಎಂದಾಗ ಮಹಿಳೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆಗೆ ಹಣ ಕಟ್ಟಲೆಂದು ಬಂದಿದ್ದೆ.
ನೇರವಾಗಿ ನಗದು ಪಡೆದುಕೊಂಡು ಖಾತೆಗೆ ಹಾಕಬಹುದಿತ್ತು. ನಿಮ್ಮ ನಿರ್ಲಕ್ಷéದಿಂದ ಸಮಸ್ಯೆ ಆಗಿದೆ. ಹಣ ವರ್ಗಾವಣೆ ಮಾಡಲೇಬೇಕೆಂದು ಪಟ್ಟು ಹಿಡಿದು ಕುಳಿತರು. ಸ್ಥಳೀಯರು ಜಮಾಯಿಸಿ ಮಹಿಳೆಗೆ ಬೆಂಬಲ ಸೂಚಿಸಿ ಈ ಶಾಖೆಯಲ್ಲಿ ಗ್ರಾಹಕರಿಗೆ ಸ್ಪಂದನೆಯೇ ದೊರಕುತ್ತಿಲ್ಲ ಎಂದು ಕಿಡಿಕಾರಿದರು.
ಸಿಬಂದಿ ಕಂಪ್ಯೂಟರ್ನಲ್ಲಿ ಪರಿಶೀಲಿಸಿದಾಗ ಹಣ ಹಾಕಿರುವುದು ರುಜುವಾಗಿತ್ತು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಬ್ಯಾಂಕ್ನಿಂದ ಹಣ ದೊರಕಿಸಿ, ತಾಂತ್ರಿಕವಾಗಿ ಹಣ ವಿಳಂಬವಾಗಿ ಬಂದರೆ ಮರುಕಳಿಸಲಾಗುವುದು ಎಂದು ಮಹಿಳೆಯಿಂದ ಮುಚ್ಚಳಿಕೆ ಪತ್ರ ಕೊಡಿಸಿ ಪ್ರಕರಣ ಸುಖಾಂತ್ಯಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.