![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 20, 2020, 9:43 PM IST
ಬಂಟ್ವಾಳ: ಮನೆಯಲ್ಲಿ ತಿಂಡಿ ಮಾಡುತ್ತಿದ್ದ ವೇಳೆ ಬಟ್ಟೆಗೆ ಬೆಂಕಿ ತಗಲಿ ತೀವ್ರ ಸುಟ್ಟ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19ರಂದು ನಡೆದಿದೆ.
ಕಡೇಶ್ವಾಲ್ಯ ಗ್ರಾಮದ ನೆತ್ತರಮನೆ ನಿವಾಸಿ ಹರಿಣಾಕ್ಷಿ (35) ಮೃತಪಟ್ಟ ಮಹಿಳೆ. ಜೂ. 2ರಂದು ಮನೆಯಲ್ಲಿ ಗ್ಯಾಸ್ ಖಾಲಿಯಾದ ಹಿನ್ನೆಲೆಯಲ್ಲಿ ಕಟ್ಟಿಗೆಯ ಒಲೆಯಲ್ಲಿ ತಿಂಡಿ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರು ಧರಿಸಿದ್ದ ಪಾಲಿಸ್ಟರ್ ನೈಟಿಯ ಹಿಂಬದಿಗೆ ಬೆಂಕಿ ತಗಲಿ ಅವರ ದೇಹಕ್ಕೆ ತೀವ್ರ ಸುಟ್ಟಗಾಯಗಳಾಗಿತ್ತು.
ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದು, ಆದರೆ ಜೂ. 17ರಂದು ಮತ್ತೆ ಗಾಯ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಜೂ. 19ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.