![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 6, 2024, 11:31 PM IST
ಕಾರ್ಕಳ: ಬಾಣಂತಿ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕು ಇರ್ವತ್ತೂರಿನ ಜಂಗರಬೆಟ್ಟುವಿನಲ್ಲಿ ಸಂಭವಿಸಿದೆ. ಇರ್ವತ್ತೂರಿನ ಸಂಪ್ರೀತಾ (34) ಸಾವಿಗೀಡಾದ ಮಹಿಳೆ.
ಸಂಪ್ರೀತಾ ಅವರು ಮೇ 30ರಂದು ತಮ್ಮ 2ನೇ ಮಗುವಿಗೆ ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಜನ್ಮ ನೀಡಿದ್ದು, ಬಳಿಕ ಮಗುವಿನ ಜತೆಯಲ್ಲಿ ತವರು ಮನೆಯಾದ ಇರ್ವತ್ತೂರು ಗ್ರಾಮದ ಜಂಗರಬೆಟ್ಟುವಿನಲ್ಲಿದ್ದು, ಜೂ. 6ರಂದು ಸಂಜೆ ಮನೆಯಲ್ಲಿದ್ದಾಗ ಅಸ್ವಸ್ಥಗೊಂಡ ಅವರನ್ನು ಅವರ ತಾಯಿ ಕುಶಲಾ ಮತ್ತು ಗಂಡ ಹರೀಶ್ ಅವರು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಸಹೋದರ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.