ಕೈನಲ್ಲಿ ನಿಲ್ಲದ ಮನಸ್ತಾಪದ ಮಾತುಗಳು
-ಎಲ್ಲರನ್ನೂ ಸಮಾಧಾನಪಡಿಸಲು ಸಾಧ್ಯವಿಲ್ಲ-ಖರ್ಗೆ
Team Udayavani, Jul 29, 2023, 7:03 AM IST
ಬೆಂಗಳೂರು: ಸಚಿವರು-ಶಾಸಕರ ನಡುವೆ ಸಮನ್ವಯ ಸಾಧಿಸಲೆಂದೇ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ಪಿ)ದ ಸಭೆ ನಡೆಸಿ, ನಾಯಕರಿಂದ “ಅಸಮಾಧಾನದ ಹೊಗೆ’ಯಾಡದಂತೆ ತೇಪೆ ಹಚ್ಚುವ ಕೆಲಸ ನಡೆದಿದೆ. ಆದರೆ, ಸಭೆಯ ಮರುದಿನವೂ ನಡೆಯುತ್ತಿರುವ ಬೆಳವಣಿಗೆಗಳು, ಅಸಮಾಧಾನ ಇನ್ನೂ ಸಂಪೂರ್ಣ ಶಮನಗೊಂಡಿಲ್ಲ ಎಂಬುದನ್ನು ಸೂಚಿಸುತ್ತಿವೆ.
ಸಚಿವರಾದ ಪ್ರಿಯಾಂಕ ಖರ್ಗೆ, ಸತೀಶ ಜಾರಕಿಹೊಳಿ ಒಳಗೊಂಡಂತೆ ಕೆಲ ಶಾಸಕರು ಸ್ಥಳೀಯವಾಗಿ ಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ. ವಿಶೇಷವಾಗಿ ವರ್ಗಾವಣೆ ವಿಷಯದಲ್ಲಿ ಉಂಟಾದ ಮನಸ್ತಾಪಕ್ಕೆ ಗುರುವಾರ ನಡೆದ ಸಿಎಲ್ಪಿ ಸಭೆಯಲ್ಲಿ “ಮದ್ದು’ ದೊರೆತಂತಿಲ್ಲ. ಸಚಿವರಂತೂ ಈ ವಿಚಾರದಲ್ಲಿ “ಸಿಎಂ ವಿವೇಚನೆ’ಗೆ ಬಿಟ್ಟಿದ್ದು ಎಂದು ಮುಖ್ಯಮಂತ್ರಿಯತ್ತ ಬೊಟ್ಟು ಮಾಡುತ್ತಿದ್ದಾರೆ.
ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ, “ಎಲ್ಲರನ್ನೂ ನಾವು ಸಮಾಧಾನಪಡಿಸಲು ಆಗುವುದಿಲ್ಲ. ಎಲ್ಲವೂ ಪಾರದರ್ಶಕವಾಗಿ ನಡೆಯಬೇಕು. ರೂಲ್ಸ್ ಬ್ರೇಕ್ ಮಾಡಿದ್ರೆ ನೀವೇ (ಮಾಧ್ಯಮದವರಿಗೆ) ಬಿಡ್ತೀರಾ? ಬಂದು ನಮ್ಮನ್ನು ಕೇಳುತ್ತೀರಾ. ಎಲ್ಲವೂ ಪಾರದರ್ಶಕವಾಗಿ ನಡೆಯಬೇಕಲ್ಲವೇ? ಯಾವುದೇ ಇಲಾಖೆಗಳಾಗಲಿ ನಿಯಮಗಳಂತೆ ನಡೆಯಬೇಕಾಗುತ್ತದೆ’ ಎಂದು ಸೂಚ್ಯವಾಗಿ ಹೇಳಿದರು.
“ಇನ್ನು ಅವಧಿಪೂರ್ಣ ವರ್ಗಾವಣೆಗಳಿದ್ದರೆ, ಅದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು. ಎಲ್ಲರನ್ನೂ ನಾವು ಸಮಾಧಾನಪಡಿಸಲು ಆಗಲ್ಲ’ ಎಂದ ಅವರು, “ಅಷ್ಟಕ್ಕೂ ಪತ್ರ ಬರೆಯುವುದು ತಪ್ಪಲ್ಲ; ಅದು ಶಾಸಕರ ಹಕ್ಕು. ಆದರೆ, ಅದಕ್ಕಿಂತ ನೇರವಾಗಿಯೇ ಹೇಳಬಹುದಿತ್ತು. ಯಾಕೆಂದರೆ ಆ ಪತ್ರವನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಸಿಎಲ್ಪಿ ಸಭೆಯಲ್ಲಿ ಮುಖ್ಯವಾಗಿ ಎರಡು ಪತ್ರಗಳ ಬಗ್ಗೆ ಚರ್ಚೆಯಾಗಿದೆ. ಒಂದು ಬಿಜೆಪಿಯ ನಕಲಿ ಪತ್ರ, ಮತ್ತೂಂದು ನಮ್ಮ ಶಾಸಕರು ಸಭೆ ಕರೆಯುವಂತೆ ಸಿಎಂಗೆ ಬರೆದ ಪತ್ರ. ಇದರೊಂದಿಗೆ ಸ್ಥಳೀಯ ಸಮಸ್ಯೆಗಳು ಇದ್ದೇ ಇರುತ್ತವೆ’ ಎಂದು ಮಾಹಿತಿ ನೀಡಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿದೇಶಿ ಪ್ರವಾಸದ ಬಗ್ಗೆ ಕೇಳಿದಾಗ, “ಇನ್ನು ಐದು ವರ್ಷ ಕಾಲ ಏನು ಮಾಡ್ತಾರೆ? ಕರ್ನಾಟಕದ ಪ್ರವಾಸೋದ್ಯಮ ಚೆನ್ನಾಗಿ ಮಾಡಿದ್ದೇವೆ. ವಿದೇಶವನ್ನೂ ನೋಡಲಿ ಜತೆಗೆ ಕರ್ನಾಟಕವನ್ನೂ ನೋಡಲಿ’ ಎಂದು ವ್ಯಂಗ್ಯವಾಡಿದರು.
”
ನಮಗೂ ಇತಿಮಿತಿಗಳಿವೆ’: ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, “ವರ್ಗಾವಣೆಗೆ ನಮಗೂ ಇತಿಮಿತಿಗಳಿವೆ. ಶೇ. 6ರಷ್ಟು ವರ್ಗಾವಣೆ ಮಾಡಲು ನಮಗೆ ಅವಕಾಶ ಇದೆ. ಉಳಿದಿದ್ದು ಮುಖ್ಯಮಂತ್ರಿ ಮಾಡುತ್ತಾರೆ. ಕೆಲವೊಂದಕ್ಕೆ ಶಾಸಕರು ಕನ್ವಿನ್ಸ್ ಆಗುವುದಿಲ್ಲ. ನೌಕರರನ್ನು ಏಕಾಏಕಿ ತೆಗೆದುಹಾಕಲು ಆಗುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
“ನಾವು (ಸಚಿವರು) ಶಾಸಕರ ಕೈಗೆ ಸಿಗುತ್ತೇವೆ. ಕೆಲವು ಶಾಸಕರು, ಸಚಿವರು ವರ್ಗಾವಣೆ ಪತ್ರಗಳನ್ನು ಕೊಟ್ಟಿದ್ದಾರೆ. ಪ್ರಕ್ರಿಯೆ ನಡೆಯುತ್ತಿದೆ. ಶಾಸಕರ ಪತ್ರ ವಿಚಾರವನ್ನು ಮುಖ್ಯಮಂತ್ರಿ ನೋಡುತ್ತಾರೆ. ಕೆಲವು ಸಮಸ್ಯೆಗಳು ಇದ್ದೇ ಇರುತ್ತವೆ. ಇಲ್ಲ ಎನ್ನಲಾಗುವುದಿಲ್ಲ’ ಎಂದು ಒಪ್ಪಿಕೊಂಡ ಸಚಿವ ಜಾರಕಿಹೊಳಿ, “ಮುಖ್ಯಮಂತ್ರಿ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಪಕ್ಷದ ಭಾಗವಾಗಿದ್ದಾರೆ. ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ನಾನು ಈ ಅವಧಿಯಲ್ಲಿ ಸಿಎಂ ರೇಸ್ನಲ್ಲಿ ಇಲ್ಲ. ಮುಂದಿನ ಅವಧಿಯಲ್ಲಿ ಇರುತ್ತೇನೆ ಎಂದು ಈ ಮೊದಲೇ ಹೇಳಿದ್ದೇನೆ’ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.