ಕರಾವಳಿಯಲ್ಲಿ ವರ್ಷವಿಡೀ ಮಳೆಗಾಲ !

ಜನವರಿಯಿಂದ ಡಿಸೆಂಬರ್‌ವರೆಗೆ ಪ್ರತೀ ತಿಂಗಳು ವರ್ಷಧಾರೆ

Team Udayavani, Dec 16, 2021, 5:20 AM IST

ಕರಾವಳಿಯಲ್ಲಿ ವರ್ಷವಿಡೀ ಮಳೆಗಾಲ !

ಮಂಗಳೂರು: ರಾಜ್ಯಕ್ಕೆ ಹೋಲಿಕೆ ಮಾಡಿದರೆ ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗುವುದು ಸಾಮಾನ್ಯ. 2021ರಲ್ಲಿ ವರ್ಷ ವಿಡೀ ಮಳೆಯಾಗಿದ್ದು ವಿಶೇಷ !

ಕರಾವಳಿ ಭಾಗದಲ್ಲಿ ಈ ವರ್ಷ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರತೀ ತಿಂಗಳು ಮಳೆಯಾಗಿತ್ತು. ಹವಾಮಾನ ಇಲಾಖೆಯ ವಾಡಿಕೆ ಯಂತೆ ಮಾರ್ಚ್‌ ತಿಂಗಳಿನಿಂದ ಮೇ ತಿಂಗಳವರೆಗೆ ಪೂರ್ವ ಮುಂಗಾರು, ಜೂನ್‌ ತಿಂಗಳಿನನಿಂದ ಸೆಪ್ಟಂಬರ್‌ವರೆಗೆ ಮುಂಗಾರು ಮತ್ತು ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಹಿಂಗಾರು ಋತು ಇರುತ್ತದೆ. ಈ ವೇಳೆ ಸಾಮಾನ್ಯವಾಗಿ ಮಳೆಯಾ ಗುತ್ತದೆ. ಆದರೆ ಜನವರಿ ತಿಂಗಳಿನಿಂದ ಮಾರ್ಚ್‌ ತಿಂಗಳವರೆಗೆ ಅಷ್ಟಾಗಿ ಮಳೆಯಾಗುವುದಿಲ್ಲ. ಆದರೆ ಈ ಬಾರಿ ಈ ಮೂರೂ ತಿಂಗಳು ಸೇರಿ ವರ್ಷವಿಡೀ ಕರಾವಳಿ ಭಾಗದಲ್ಲಿ ಉತ್ತಮ ವರ್ಷ ಧಾರೆ ಸುರಿ ದಿದೆ. ಕಳೆದ ವರ್ಷ ಮಾರ್ಚ್‌ ಆರಂಭಗೊಂಡು ವರ್ಷಾಂತ್ಯದವರೆಗೆ ಮಳೆಯಾಗಿತ್ತು. ಅದಕ್ಕಿಂತ ಮೊದಲು ಈ ರೀತಿ ಮಳೆ ಸುರಿದಿರುವ ಮಾಹಿತಿ ಲಭ್ಯವಿಲ್ಲ.

ಕರಾವಳಿಯಲ್ಲಿ ಈ ಬಾರಿ ಪೂರ್ವ
ಮುಂಗಾರಿನಲ್ಲಿ 131.2 ಮಿ.ಮೀ. ವಾಡಿಕೆ ಮಳೆಯಾಗ ಬೇಕಿತ್ತು. ಆದರೆ 394 ಮಿ.ಮೀ. ಮಳೆಯಾಗಿತ್ತು. ಅನಂತರ ಮುಂಗಾರು ವೇಳೆ ಮಾತ್ರ ವಾಡಿಕೆಯಂತೆ ಮಳೆ ಸುರಿದಿರಲಿಲ್ಲ. 3 ವರ್ಷದ ಬಳಿಕ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಮುಂಗಾರು ಪೂರ್ಣಗೊಳ್ಳುವ ವೇಳೆ ರಾಜ್ಯ ಕರಾವಳಿ ಭಾಗದಲ್ಲಿ ಶೇ.13 ಮತ್ತು ಮಲೆನಾಡಿನಲ್ಲಿ ಶೇ.18ರಷ್ಟು ಮಳೆ ಕೊರತೆ ಉಂಟಾಗಿತ್ತು. ಇದೀಗ ಹಿಂಗಾರು ಅವಧಿ ಋತು ಕರಾವಳಿ ಪಾಲಿಗೆ ಉತ್ತಮವಾಗಿದೆ.

ಇದನ್ನೂ ಓದಿ:2022ರೊಳಗೆ 11 ಲಕ್ಷ ಮನೆ ನಿರ್ಮಾಣ ಪೂರ್ಣ: ಸಚಿವ ವಿ.ಸೋಮಣ್ಣ

ವಾಡಿಕೆಗಿಂತ ಹೆಚ್ಚಿನ ಮಳೆ
ಕರಾವಳಿಯಾದ್ಯಂತ ಈ ಬಾರಿ ಉತ್ತಮವಾಗಿ ಹಿಂಗಾರು ಮಳೆ ಸುರಿಯುತ್ತಿದೆ. ವಾಡಿಕೆಯಂತೆ ಅಕ್ಟೋ ಬರ್‌ 1ರಿಂದ ಡಿಸೆಂಬರ್‌ ವರೆಗೆ ಹಿಂಗಾರು ಇರುತ್ತದೆ. ಈ ವೇಳೆ ಕರಾವಳಿಯಲ್ಲಿ 259 ಮಿ.ಮೀ. ಮಳೆಸುರಿಯಬೇಕು. ಈ ಅವಧಿ ಪೂರ್ಣ ಗೊಳ್ಳಲು ಇನ್ನೂ ಮೂರು ವಾರ ಇರುವಾಗಲೇ 576 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ.125 ಮಿ.
ಮೀ. ಹೆಚ್ಚಳವಾಗಿದೆ. ದ.ಕ. ಜಿಲ್ಲೆ ಯಲ್ಲಿ 371 ಮಿ.ಮೀ. ವಾಡಿಕೆ ಮಳೆಯಲ್ಲಿ 817 ಮಿ.ಮೀ., ಉಡುಪಿ ಜಿಲ್ಲೆಯಲ್ಲಿ 308 ಮಿ.ಮೀ. ವಾಡಿಕೆ ಯಲ್ಲಿ 736 ಮಿ.ಮೀ. ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ 185 ಮಿ.ಮೀ. ವಾಡಿಕೆ ಮಳೆಯಾಗುವಲ್ಲಿ 406 ಮಿ.ಮೀ. ಮಳೆ ಸುರಿದಿದೆ. ಹಿಂಗಾರು ಪೂರ್ಣ ಗೊಳ್ಳಲು ಇನ್ನೂ 15 ದಿನಗಳಿದ್ದು, ಮತ್ತಷ್ಟು ಮಳೆ ಯಾಗುವ ನಿರೀಕ್ಷೆ ಇದೆ.

ಹವಾಮಾನ ವೈಪರೀತ್ಯ
ಹವಾಮಾನ ವೈಪರಿತ್ಯದ ಪರಿಣಾಮಾವಾಗಿ ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದೆ. ರಾಜ್ಯದಲ್ಲಿ 2020ನೇ ವರ್ಷದಿಂದ 2100ನೇ ವರ್ಷದವರೆಗೆ ಮಳೆ ಪ್ರಮಾಣ ಹೇಗಿರಬಹುದು ಎಂದು ತಿಳಿಯಲು “ಗ್ಲೋಬಲ್ ಸರ್ಕುಲೇಶನ್‌ ಮಾಡೆಲ್‌’ ಸಹಾಯದಿಂದ ಈಗಾಗಲೇ ಸಂಶೋಧನೆ ನಡೆಸಲಾಗಿದೆ. ಅದರಲ್ಲಿ ಕಂಡುಬಂದಂತೆ ಮುಂದಿನ ವರ್ಷಗಳಲ್ಲಿ ಒಟ್ಟಾರೆ ಮಳೆ ಪ್ರಮಾಣ ಹೆಚ್ಚಾದರೂ ಮುಂಗಾರು ಅವಧಿಯ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ. ಆ ಸಮಯದ ಉಳಿಕೆ ಮಳೆಯು ಹಿಂಗಾರು, ಪೂರ್ವ ಮುಂಗಾರು ಅವಧಿಯಲ್ಲಿ ಸುರಿಯಲಿದೆ. ಈ ಅಸಮರ್ಪಕತೆಯ ನೇರ ಪೆಟ್ಟು ಕೃಷಿಕರಿಗೆ ಬೀಳಲಿದ್ದು, ಆ ವೇಳೆ ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಬೆಳೆ ಆರಿಸುವುದು ಅನಿವಾರ್ಯವಾಗುತ್ತದೆ.
– ಡಾ| ರಾಜೇಗೌಡ, ಕೃಷಿ ವಿ.ವಿ. ಹವಾಮಾನ ವಿಜ್ಞಾನಿ

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.