ಡಬ್ಬಿಂಗ್‌ನಲ್ಲಿ ಯುವರತ್ನ


Team Udayavani, May 29, 2020, 4:33 AM IST

dubbing-yuva

ಪುನೀತ್‌ ರಾಜ್‌ಕುಮಾರ್‌ ಅಭಿನಯದ ಯುವರತ್ನ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಅವರ ಅಭಿಮಾನಿಗಳಿಗಿದೆ. ಅದಕ್ಕಿಂತ ಹೆಚ್ಚಾಗಿ ಆ ಚಿತ್ರದ ಬಾಕಿ ಇರುವ ಎರಡು ಹಾಡುಗಳನ್ನು ಎಲ್ಲಿ  ಚಿತ್ರೀಕರಿಸುತ್ತಾರೆ  ಎಂಬ ಬಗ್ಗೆಯೂ ಚರ್ಚೆಯಾಗುತ್ತಿದೆ. ಆರಂಭದಲ್ಲಿ ಈ ಹಾಡನ್ನು ವಿದೇಶದಲ್ಲಿ ಚಿತ್ರೀಕರಿಸಲು ಚಿತ್ರತಂಡ ತಯಾರಿ ಮಾಡಿತ್ತು. ಆದರೆ ಈಗ ಕೊರೊನಾದಿಂದಾಗಿ ವಿದೇಶ ಪ್ರವಾಸವನ್ನು ಚಿತ್ರತಂಡ ಕೈ ಬಿಟ್ಟಿದೆ.

ಹಾಗಾಗಿ ಚಿತ್ರದ ಎರಡು  ಹಾಡುಗಳನ್ನು ದೇಶದಲ್ಲೇ ಚಿತ್ರೀಕರಿಸಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ. ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ಬೆನ್ನಲ್ಲೇ ಈ ಹಾಡನ್ನು ಚಿತ್ರೀಕರಿಸಲಿದೆ. ಒಂದು ಹಾಡನ್ನು ಗೋವಾದಲ್ಲಿ ಚಿತ್ರೀಕರಿಸುವ ಯೋಚನೆ ಚಿತ್ರತಂಡಕ್ಕಿದೆ.  ಮಿಕ್ಕ ಒಂದು ಹಾಡನ್ನು ಎಲ್ಲಿ ಚಿತ್ರೀಕರಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಹಾಡುಗಳ ಚಿತ್ರೀಕರಣವಾದ ಬೆನ್ನಿಗೆ ಸಿನಿಮಾ ಬಿಡುಗಡೆ ಮಾಡುವ ಯೋಚನೆ ಕೂಡಾ ಚಿತ್ರತಂಡಕ್ಕಿದೆ.

ಹಾಗಾದರೆ ಯಾವಾಗ ಚಿತ್ರ ಬಿಡುಗಡೆ  ಎಂದು ನೀವು ಕೇಳಬಹುದು. ಇದಕ್ಕೆ ಉತ್ತರ ಆಗಸ್ಟ್‌ ಅಥವಾ ಸೆಪ್ಟೆಂಬರ್‌. ಸಿನಿಮಾ ಬಿಡುಗಡೆಗೆ ಅನುಮತಿ ಸಿಕ್ಕ ನಂತರ ಆಗಸ್ಟ್‌ ಅಥವಾ ಸೆಪ್ಟೆಂಬರ್‌ನಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲಿದೆ ಚಿತ್ರತಂಡ. ಇನ್ನು ಈಗಾಗಲೇ ಚಿತ್ರದ ಡಬ್ಬಿಂಗ್‌  ಕೆಲಸ ಆರಂಭವಾಗಿದ್ದು, ಮೊದಲ ಭಾಗದ ಡಬ್ಬಿಂಗ್‌ ಪೂರ್ಣಗೊಂಡಿದೆ. ಪುನೀತ್‌ ರಾಜ್‌ ಕುಮಾರ್‌ ಡಬ್ಬಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ಈ ಹಿಂದೆ ರಾಜ್‌ಕುಮಾರ ಎಂಬ ಸೂಪರ್‌ ಹಿಟ್‌ ಸಿನಿಮಾ ನೀಡಿದ ಸಂತೋಷ್‌ ಆನಂದ ರಾಮ್‌ ಈ  ಸಿನಿಮಾದ ನಿರ್ದೇಶಕರು. ಹೊಂಬಾಳೆ ಪೊಡಕ್ಷನ್ಸ್‌ನಡಿ ಈ ಚಿತ್ರ ನಿರ್ಮಾಣವಾಗಿದೆ.

ಈಗಾಗಲೇ ಚಿತ್ರದ ಡೈಲಾಗ್‌ ಟೀಸರ್‌ ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದೆ. ಮಾಸ್‌ ಪ್ರಿಯರು ಟೀಸರ್‌ಗೆ ಫಿದಾ ಆಗಿದ್ದು, ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ.  ಈ ಚಿತ್ರದಲ್ಲಿ ಸಯೇಷಾ ನಾಯಕಿಯಾಗಿ ನಟಿಸಿದ್ದಾರೆ. ಟಗರು ಚಿತ್ರದಲ್ಲಿ  ಡಾಲಿಯಾಗಿ ಮಿಂಚಿದ ಧನಂಜಯ್‌ ಅವರಿಗೂ ಇಲ್ಲಿ ಪ್ರಮುಖ ಪಾತ್ರವಿದೆ. ಯುವರತ್ನ ಬಳಿಕ ಪುನೀತ್‌ ಜೇಮ್ಸ್‌ ಚಿತ್ರದಲ್ಲಿ ನಟಿಸಲಿದ್ದಾರೆ. ಈಗಾಗಲೇ ಚಿತ್ರದ  ಮುಹೂರ್ತ ವಾಗಿದ್ದು, ಕೆಲವು ದಿನಗಳ ಚಿತ್ರೀಕರಣ ಕೂಡಾ ನಡೆದಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.