ಫರ್ಗ್ಯುಸನ್ ದಾಳಿಗೆ ಬೆದರಿದ ಡೆಲ್ಲಿ; ಹಾರ್ದಿಕ್ ಪಡೆಗೆ ಸತತ ಎರಡನೇ ಜಯ
Team Udayavani, Apr 3, 2022, 8:13 AM IST
ಪುಣೆ: ಐಪಿಎಲ್ ನ ಹೊಸ ತಂಡವಾದ ಗುಜರಾತ್ ಟೈಟಾನ್ಸ್ ತಂಡ ತಾನಾಡಿದ ಎರಡನೇ ಪಂದ್ಯದಲ್ಲೂ ಜಯ ಸಾಧಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಪಡೆ 14 ರನ್ ಅಂತರದ ವಿಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ಶುಭ್ಮನ್ ಗಿಲ್ ಬ್ಯಾಟಿಂಗ್ ನೆರವಿನಿಂದ 171 ರನ್ ಗಳಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ಕಳೆದುಕೊಂಡು 157 ರನ್ ಗಳಷ್ಟೇ ಗಳಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೈಟಾನ್ಸ್ ಗೆ ಗಿಲ್ ಬಲ ತುಂಬಿದರು. 46 ಎಸೆತ ಎದುರಿಸಿದ ಗಿಲ್ 4 ಸಿಕ್ಸರ್ ಮತ್ತು 6 ಬೌಂಡರಿ ನೆರವಿನಿಂದ 84 ರನ್ ಗಳಿಸಿದರು. ಉಳಿದಂತೆ ನಾಯಕ ಹಾರ್ದಿಕ್ ಪಾಂಡ್ಯ 31 ರನ್, ಮಿಲ್ಲರ್ ಅಜೇಯ 20 ರನ್ ಗಳಿಸಿದರು. ಡೆಲ್ಲಿ ಪರ ಮುಸ್ತಫಿಜುರ್ ರಹಮಾನ್ ಮೂರು ವಿಕೆಟ್ ಕಿತ್ತರೆ, ಎರಡು ವಿಕೆಟ್ ಖಲೀಲ್ ಅಹಮದ್ ಪಾಲಾಯಿತು.
ಗುರಿ ಬೆನ್ನಟ್ಟಿದ ಡೆಲ್ಲಿ ಆರಂಭದಿಂದಲೇ ವಿಕೆಟ್ ಕಳೆದುಕೊಂಡಿತು. 34 ರನ್ ಆಗುವಷ್ಟರಲ್ಲಿ ಮೂರು ವಿಕೆಟ್ ಉರುಳಿತ್ತು. ನಾಯಕ ಪಂತ್ 43 ರನ್, ಲಲಿತ್ ಯಾದವ್ 25 ರನ್, ಮತ್ತು ರೋಮನ್ ಪೊವೆಲ್ 20 ರನ್ ಗಳಿಸಿದರು. ಆದರೆ ಯಾವೊಬ್ಬ ಬ್ಯಾಟರ್ ಕೂಡಾ ದೊಡ್ಡ ಇನ್ನಿಂಗ್ಸ್ ಆಡದೇ ಇದ್ದಿದ್ದು ಡೆಲ್ಲಿಗೆ ಮುಳುವಾಯಿತು.
ಗುಜರಾತ್ ಪರ ಬಿಗು ದಾಳಿ ನಡೆಸಿದ ಫರ್ಗ್ಯುಸನ್ ನಾಲ್ಕು ವಿಕೆಟ್ ಕಿತ್ತರೆ, ಶಮಿ ಎರಡು ವಿಕೆಟ್ ಪಡೆದರು. ನಾಯಕ ಹಾರ್ದಿಕ್ ಮತ್ತು ರಶೀದ್ ಖಾನ್ ತಲಾ ಒಂದು ವಿಕೆಟ್ ಕಬಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.