![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 6, 2022, 6:46 AM IST
ಮುಂಬಯಿ: ಈ ಬಾರಿಯ ಐಪಿಎಲ್ನಲ್ಲಿ ಕೋಲ್ಕತಾ ನೈಟ್ರೈಡರ್ ತಂಡವು ಉತ್ತಮ ಆರಂಭ ಪಡೆದಿದೆ. ಇಷ್ಟರವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಎರಡಲ್ಲಿ ಗೆದ್ದಿರುವ ಕೆಕೆಆರ್ ಒಂದರಲ್ಲಿ ಸೋತಿದೆ. ಪೇಸ್ ಬೌಲಿಂಗ್ನಿಂದಾಗಿ ಅದರಲ್ಲಿಯೂ ಪವರ್ಪ್ಲೇ ಹಂತದಲ್ಲಿ ತಂಡದ ಉತ್ತಮ ನಿರ್ವಹಣೆಯಿಂದಾಗಿ ಗೆಲುವು ಸಾಧಿಸುವಂತಾಗಿದೆ.
ಪವರ್ಪ್ಲೇಯಲ್ಲಿ ಉಮೇಶ್ ಯಾದವ್ ನಿಖರ ದಾಳಿ ಸಂಘಟಿಸಿ ತಂಡ ಮೇಲುಗೈ ಸಾಧಿಸಲು
ಕಾರಣರಾಗಿದ್ದರು.
ಉಮೇಶ್ ಅವರ ಸಾಧನೆಯನ್ನು ಗಮನಿಸಿ ಕೆಕೆಆರ್ ತಂಡದ ಮೆಂಟರ್ ಆಗಿರುವ ಡೇವಿಡ್ ಹಸ್ಸಿ ಅವರು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಉಮೇಶ್ ಅವರನ್ನು ಆಯ್ಕೆ ಮಾಡಿರುವುದು ಒಳ್ಳೆಯದಾಗಿದೆ ಎಂದು ಹೇಳಿದ್ದಾರೆ.
ಉಮೇಶ್ ಯಾದವ್ ಅವರನ್ನು ಅವರ ಮೂಲ ಬೆಲೆಯಾದ ಎರಡು ಕೋಟಿ ರೂ. ನೀಡಿ ಕೆಕೆಆರ್ ಖರೀದಿಸಿತ್ತು.
ಆರಂಭದಲ್ಲಿಯೇ ವಿಕೆಟ್ ಉರುಳಿಸಲು ಉಮೇಶ್ ಅದ್ಭುತ ದಾಳಿ ಸಂಯೋಜಿಸುತ್ತಿದ್ದಾರೆ. ಅವರು ಮತ್ತೆ ಬೌಲಿಂಗ್ ಕೋಚ್ ಭರತ್ ಅರುಣ್ ಅವರು ಜತೆಯಾಗಿ ಅಭ್ಯಾಸ ನಡೆಸುತ್ತಿದ್ದಾರೆ.
ಕಳೆದ ಐದಾರು ವರ್ಷಗಳಿಂದ ಒಟ್ಟಿಗೆ ಅಭ್ಯಾಸ ಮಾಡಿ ದಾಳಿಯ ವ್ಯೂಹದ ಬಗ್ಗೆ ಚರ್ಚಿಸುತ್ತಿದ್ದಾರೆ. ಪ್ರತಿಯೊಂದು ಪಂದ್ಯದ ಮೊದಲು ಉಮೇಶ್ ನೆಟ್ನಲ್ಲಿ ಕಠಿನ ಅಭ್ಯಾಸ ಮಾಡುತ್ತಿದ್ದಾರೆ. ಸಿಬಂದಿಗಳ ಪೂರ್ಣ ಬೆಂಬಲ ಸಿಕ್ಕಿರುವುದರಿಂದ ಅವರು ಯಾವುದೇ ಒತ್ತಡವಿಲ್ಲದೇ ಬೌಲಿಂಗ್ ನಡೆಸುತ್ತಾರೆ ಎಂದು ಹಸ್ಸಿ ಹೇಳಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.