ಸೋತು ಕಂಗೆಟ್ಟವರ ಕದನ: ಪಂಜಾಬ್ ವಿರುದ್ಧವಾದರೂ ಗೆಲುವಿನ ಖಾತೆ ತೆರೆದೀತೇ ಹೈದರಾಬಾದ್‌?


Team Udayavani, Apr 21, 2021, 12:33 PM IST

punjab kings vs sunrisers hyderabad

ಚೆನ್ನೈ: ಮೊದಲ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿ ಬೀಗಿದ ಬೆನ್ನಲ್ಲೇ ಸತತ ಎರಡು ಪಂದ್ಯ ಸೋತು ಆಘಾತಕ್ಕೊಳಗಾದ ಪಂಜಾಬ್‌ ಕಿಂಗ್ಸ್‌ ಮತ್ತು ಹ್ಯಾಟ್ರಿಕ್‌ ಸೋಲಿನಿಂದ ಕಂಗೆಟ್ಟಿರುವ ಡೇವಿಡ್‌ ವಾರ್ನರ್‌ ಸಾರಥ್ಯದ ಹೈದರಾಬಾದ್  ಬುಧವಾರದ ಹಗಲು ಪಂದ್ಯದಲ್ಲಿ ಮುಖಾಮುಖೀಯಾಗಲಿದೆ. ಇನ್ನೊಂದು ಪಂದ್ಯ ಚೆನ್ನೈ-ಕೆಕೆಆರ್‌ ನಡುವೆ ಸಾಗಲಿದೆ.

ಸಾಮಾನ್ಯವಾಗಿ ವಾರಂತ್ಯ ಹಾಗೂ ಭಾನುವಾರ ಎರಡು ಪಂದ್ಯಗಳನ್ನು ನಡೆಸುವುದು ಸಂಪ್ರದಾಯ. ಆದರೆ ಈ ಬಾರಿ ವಾರದ ನಡುವೆ ಎರಡು ಪಂದ್ಯ ಆಡಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಕಳೆದ ಶನಿವಾರ ಒಂದೇ ಪಂದ್ಯ ನಡೆದಿತ್ತು. ಇದನ್ನು ಸರಿದೂಗಿಸಲು ಹೀಗೆ ಮಾಡಿರುವ ಸಾಧ್ಯತೆ ಇದೆ.

ಹನ್ನೊಂದರ ಬಳಗದ ಗೊಂದಲ!: ಸತತ ಮೂರು ಸೋಲು ಕಂಡಿರುವ ಹೈದರಾಬಾದ್‌ ತಂಡಕ್ಕೆ ಹನ್ನೊಂದರ ಬಳಗದ ಆಯ್ಕೆಯೇ ದೊಡ್ಡ ಗೊಂದಲವಾಗಿದೆ. ಮುಖ್ಯವಾಗಿ ಇಲ್ಲಿ ವಿದೇಶಿ ಕ್ರಿಕೆಟಿಗರ ಆಯ್ಕೆಯಲ್ಲಿ ತಂಡ ಎಡವಟ್ಟು ಮಾಡಿಕೊಳ್ಳುತ್ತಿದೆ. ತಂಡದ ಫಾರಿನ್‌ ಕ್ರಿಕೆಟಿಗರೆಲ್ಲ ಸ್ಟಾರ್‌ ಆಟಗಾರರೇ ಆಗಿರುವುದರಿಂದ ಯಾರಿಗೆ ಅವಕಾಶ ನೀಡುವುದು ಎನ್ನುವುದೇ ಯಕ್ಷಪ್ರಶ್ನೆಯಾಗುತ್ತಿದೆ!

ಇದನ್ನೂ ಓದಿ:ಮಹೇಂದ್ರ ಸಿಂಗ್ ಧೋನಿ ತಂದೆ- ತಾಯಿಗೆ ಕೋವಿಡ್ ಸೋಂಕು ದೃಢ

ಗೆಲುವಿನ ಸಮೀಪ ಪಲ್ಟಿ!: ಉತ್ತಮ ಆರಂಭ ಪಡೆದು ಇನ್ನೇನು ತಂಡ ಗೆಲುವು ಸಮೀಪಿಸಿತು ಎನ್ನುವಾಗಲೇ ನಾಟಕೀಯ ಕುಸಿತ ಕಂಡು ಪಂದ್ಯವನ್ನು ಕೈಚೆಲ್ಲುತ್ತಿರುವುದು ಹೈದರಾಬಾದ್‌ಗೆ ಎದುರಾಗಿರುವ ದೊಡ್ಡ ಕಂಟಕ. ನಾಯಕ ವಾರ್ನರ್‌ ಮತ್ತು ಜಾನಿ ಬೇರ್‌ಸ್ಟೊ ಹೊರತುಪಡಿಸಿ ಬೇರೆ ಆಟಗಾರರು ಕ್ರೀಸ್‌ ಆಕ್ರಮಿಸಿಕೊಳ್ಳುವಲ್ಲಿ ವಿಫ‌ಲ ರಾಗುತ್ತಿದ್ದಾರೆ. ಮನೀಷ್‌ ಪಾಂಡೆ ಬ್ಯಾಟಿಂಗ್‌ ವಿಸ್ತರಿಸಿದರೂ ಇದರಲ್ಲಿ ಟಿ20 ಜೋಶ್‌ ಕಂಡುಬರುತ್ತಿಲ್ಲ. ಅವರ ನಿಧಾನ ಗತಿಯ ಆಟದಿಂದ ತಂಡಕ್ಕೆ ಹೆಚ್ಚು ಹಾನಿ ಆಗುತ್ತಿರುವುದು ಸುಳ್ಳಲ್ಲ. ಕೆಳ ಸರದಿಯಲ್ಲಿ ಅಬ್ದುಲ್‌ ಸಮದ್‌, ವಿಜಯ್‌ ಶಂಕರ್‌ ಕೂಡ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ.

ಈ ಬಾರಿ ಏನು ಪ್ರಯೋಗ?: ಮೊದಲೆರಡು ಪಂದ್ಯಗಳ ಸೋಲಿನ ಬೆನ್ನಲ್ಲೆ 3ನೇ ಪಂದ್ಯಕ್ಕೆ ನಾಲ್ವರು ಆಟಗಾರರನ್ನು ಬದಲಾಯಿಸಿಯೂ ಯಶಸ್ಸು ಕಾಣದ ಹೈದರಾಬಾದ್‌ ಈ ಪಂದ್ಯಕ್ಕೆ ಯಾವ ಪ್ರಯೋಗ ನಡೆಸಲಿದೆ ಎನ್ನುವ ಕುತೂಹಲವಿದೆ. ಹೈದರಾಬಾದ್‌ ಬೌಲಿಂಗ್‌ ಬಹಳ ವೈವಿಧ್ಯಮಯ. ರಶೀದ್‌ ಖಾನ್‌, ಭುವನೇಶ್ವರ್‌, ಖಲೀಲ್‌ ಅಹ್ಮದ್‌, ನಟರಾಜನ್‌ ಅವರೆಲ್ಲ ಎದುರಾಳಿಗೆ ನಿಯಂತ್ರಣ ಹೇರಲು ಸಮರ್ಥರಾಗಿದ್ದಾರೆ. ಈ ವರೆಗೆ ಆಡಿದ ಎಲ್ಲ ಪಂದ್ಯಗಳಲ್ಲೂ ಚೇಸಿಂಗ್‌ ನಡೆಸಿ ಸೋತ ಹೈದರಾಬಾದ್‌ಗೆ ಮೊದಲು ಬ್ಯಾಟಿಂಗ್‌ ನಡೆಸುವ ಅವಕಾಶವೊಂದು ದೊರೆತರೆ ಬೌಲರ್‌ಗಳು ತಂಡಕ್ಕೆ ಗೆಲುವು ತಂದುಕೊಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಯಾರಿಂದಲೂ ತಾನು “ಅಸಮರ್ಥ ಎನಿಸಿಕೊಳ್ಳಲು ಇಚ್ಛಿಸುವುದಿಲ್ಲ’ : ಧೋನಿ

ಪಂಜಾಬ್‌ಗ ಬೌಲಿಂಗ್‌ ಚಿಂತೆ: ಪಂಜಾಬ್‌ನದ್ದು ಹೈದರಾಬಾದ್‌ಗೆ ತದ್ವಿರುದ್ಧವಾದ ಸಮಸ್ಯೆ. ಶ್ರೇಷ್ಠ ಮಟ್ಟದ ಬ್ಯಾಟಿಂಗ್‌ ಮೂಲಕ ಇನ್ನೂರರ ಸನಿಹಕ್ಕೆ ತಲುಪಿದರೂ ಕಳಪೆ ಬೌಲಿಂಗ್‌ನಿಂದ ಪಂದ್ಯವನ್ನು ಉಳಿಸಿಕೊಳ್ಳುವಲ್ಲಿ ಪಂಜಾಬ್‌ ವಿಫ‌ಲವಾಗುತ್ತಿದೆ. ಪ್ರಧಾನ ವೇಗಿ ಮೊಹಮ್ಮದ್‌ ಶಮಿ, ರಿಲೀ ಮೆರೆಡಿತ್‌, ಜೇ ರಿಚರ್ಡ್‌ಸನ್‌ ದುಬಾರಿಯಾಗುತ್ತಿದ್ದಾರೆ. ಸ್ಪಿನ್‌ ವಿಭಾಗವೂ ಘಾತಕವಾಗಿ ಪರಿಣಮಿಸುತ್ತಿಲ್ಲ.

ಈ ಪಂದ್ಯದಲ್ಲಿ ಪಂಜಾಬ್‌ ಬೌಲಿಂಗ್‌ ವಿಭಾಗದಲ್ಲಿ ಕೆಲವು ಬದಲಾವಣೆ ಸಂಭವಿಸಿದರೂ ಅಚ್ಚರಿಯಿಲ್ಲ. ಮೆರೆಡಿತ್‌ ಮತ್ತು ರಿಚರ್ಡ್‌ಸನ್‌ ಬದಲು ಆಲ್‌ ರೌಂಡರ್‌ ಮೊಸಸ್‌ ಹೆನ್ರಿಕ್ಸ್‌ ಮತ್ತು ಕ್ರಿಸ್‌ ಜೋರ್ಡನ್‌ ಸ್ಥಾನ ಪಡೆಯಬಹುದು. ಜತೆಗೆ ನಿಕೋಲಸ್‌ ಪೂರಣ್‌ ಬದಲು ಮತ್ತೋರ್ವ ವಿಂಡೀಸ್‌ ಆಟಗಾರ ಫ್ಯಾಬಿಯನ್‌ ಅಲನ್‌ಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.