![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 3, 2020, 11:10 AM IST
ನವದೆಹಲಿ:ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ನಡುವೆ ಹಲವು ಸುತ್ತಿನ ಮಾತುಕತೆ ನಡೆಯುತ್ತಿದ್ದರೂ ಯಾವುದೇ ಅಂತಿಮ ನಿರ್ಧಾರ ಇನ್ನೂ ಹೊರಬಿದ್ದಿಲ್ಲ. ಗಡಿಯಲ್ಲಿನ ಉದ್ವಿಗ್ನ ವಾತಾವರಣದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಲಡಾಖ್ ನ ರಾಜಧಾನಿ ಲೇಹ್ ಗೆ ಭೇಟಿ ನೀಡಿದ್ದಾರೆ.
ಇಂದು ಪ್ರಧಾನಿ ಮೋದಿ ಅವರು ಚೀಫ್ ಆಫ್ ಡಿಫೆನ್ಸ್ ಸ್ಟಾಪ್ ಜನರಲ್ ಬಿಪಿನ್ ರಾವತ್ ಅವರ ಜತೆಗೂಡಿ ಲೇಹ್ ಗೆ ಭೇಟಿ ನೀಡಿದ್ದು, ಸೇನಾ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ ಇಂದು ಸಂಜೆ ಸೇನಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ ಎಂದು ವರದಿ ವಿವರಿಸಿದೆ.
ಲೇಹ್ ನಿಂದ ಸುಮಾರು 35 ಕಿಲೋ ಮೀಟರ್ ದೂರದಲ್ಲಿರುವ ಎಲ್ ಎಸಿ ನಿಮೋದಲ್ಲಿನ ಪ್ರಸ್ತುತ ಸ್ಥಿತಿ ಹೇಗಿದೆ ಎಂಬುದನ್ನು ಕಮಾಂಡರ್ ಲೆಫ್ಟಿನೆಂಟ್ ಜನರಲ್ ಹರೀಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ, ಸಿಡಿಎಸ್ ರಾವತ್ ಮತ್ತು ಆರ್ಮಿ ಚೀಫ್ ಜನರಲ್ ಮನೋಜ್ ಮುಕುಂದ್ ನರಾವಣೆ ಅವರಿಗೆ ವಿವರವಾದ ಮಾಹಿತಿ ನೀಡಿದ್ದಾರೆ.
ಜೂನ್ 15ರಂದು ಚೀನಾ ಸೈನಿಕರು ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಮಾತುಕತೆಗೆ ತೆರಳಿದ್ದ ಭಾರತೀಯ ಸೈನಿಕರ ಮೇಳೆ ಏಕಾಏಕಿ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ 20 ಮಂದಿ ಭಾರತೀಯರು ಸೈನಿಕರು ಹುತಾತ್ಮರಾಗಿದ್ದರು. ಈ ಘಟನೆ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನ ವಾತಾವರಣ ತಲೆದೋರಿತ್ತು.
ವಾಯು ಸೇನೆಯ ಹೊಸ ಶಕ್ತಿ ‘ರಫೇಲ್’ ಗೆ ಆಗಸದಲ್ಲೇ ಇಂಧನ ಭರ್ತಿ!
ಭಾರತದ ರಫೇಲ್ v/s ಚೀನದ J-11: ಯಾರದ್ದು ಸ್ಟ್ರಾಂಗ್ – ಇಲ್ಲಿದೆ ಡಿಟೇಲ್ಸ್
ಮತ್ತೆ ಚೀನದ 47 ಆ್ಯಪ್ ನಿಷೇಧಿಸಿದ ಭಾರತ; ಒಟ್ಟು 250 ಆ್ಯಪ್ ನಿಷೇಧವಾಗಲಿದೆಯಾ?
ಗಡಿ ವಿವಾದ: ಯಥಾಸ್ಥಿತಿಯಲ್ಲಿನ ಯಾವುದೇ ಬದಲಾವಣೆ ನಾವು ಒಪ್ಪಲ್ಲ: ಚೀನಾಕ್ಕೆ ಭಾರತ
ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ 2 ದಿನಗಳ ಲಡಾಕ್-ಕಾಶ್ಮೀರ ಪ್ರವಾಸ ಆರಂಭ, ಮಹತ್ವದ ಮಾತುಕತೆ !
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.