ರಸೆಲ್‌ ತಡೆಗೆ ಚೆನ್ನೈ ಬಳಿ ಅಸ್ತ್ರವಿದೆಯೇ?


Team Udayavani, Apr 9, 2019, 6:30 AM IST

Russel

ಚೆನ್ನೈ: ಐಪಿಎಲ್‌ನ ಬಿಗ್‌ ಮ್ಯಾಚ್‌ ಒಂದಕ್ಕೆ ಮಂಗಳವಾರ ರಾತ್ರಿ “ಎಂ.ಎ. ಚಿದಂಬರಂ ಸ್ಟೇಡಿಯಂ’ ಸಾಕ್ಷಿಯಾಗಲಿದೆ. ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಬಿಗ್‌ ಹಿಟ್ಟರ್‌ಗಳನ್ನು ಒಳಗೊಂಡಿರುವ ಕೋಲ್ಕತಾ ನೈಟ್‌ರೈಡರ್ ತಂಡಗಳು ಮುಖಾಮುಖೀಯಾಗಲಿವೆ.

ಈ ಪಂದ್ಯಕ್ಕೂ ಮುನ್ನ ಉದ್ಭವಿಸಿರುವ ದೊಡ್ಡ ಪ್ರಶ್ನೆಯೆಂದರೆ, “ಆ್ಯಂಡ್ರೆ ರಸೆಲ್‌ ಅವರನ್ನು ತಡೆಯಲು ಚೆನ್ನೈ ಬಳಿ ಅಸ್ತ್ರವಿದೆಯೇ?’ ಎಂಬುದು. ತಂಡ ಎಷ್ಟೇ ಕಠಿನ ಸ್ಥಿತಿಯಲ್ಲಿದ್ದರೂ ತನ್ನ ಪವರ್‌ಫ‌ುಲ್‌ ಸ್ಟ್ರೋಕ್‌ಗಳ ಮೂಲಕ ಎದುರಾಳಿ ಬೌಲರ್‌ಗಳನ್ನು ಪುಡಿಗೈದು, ಒಂದೆರಡು ಓವರ್‌ಗಳಲ್ಲೇ ಪಂದ್ಯದ ಗತಿಯನ್ನು ಬದಲಿಸಬಲ್ಲ ಸಮರ್ಥ ಆಟಗಾರನಾಗಿ ಹೊರಹೊಮ್ಮಿದ್ದಾರೆ ಆ್ಯಂಡ್ರೆ ರಸೆಲ್‌. ಈ ಐಪಿಎಲ್‌ನ ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್‌ ಎಂಬುದು ಈ ಕೆರಿಬಿಯನ್‌ ದೈತ್ಯನ ಪಾಲಿನ ಹೆಗ್ಗಳಿಕೆ. ಸದ್ಯ ರಸೆಲ್‌ ಅಬ್ಬರದ ಮುಂದೆ ಗೇಲ್‌ ಸಹಿತ ಉಳಿದೆಲ್ಲ ಬ್ಯಾಟ್ಸ್‌ಮನ್‌ಗಳೂ ಮಂಕಾಗಿದ್ದಾರೆ.
ರಸೆಲ್‌ ಕಳೆದ ಶುಕ್ರವಾರ ಬೆಂಗಳೂರಿ ನಲ್ಲೇ ಆರ್‌ಸಿಬಿಯನ್ನು ಚೆಂಡಾಡಿದ ದೃಶ್ಯಾವಳಿ ಈಗಲೂ ಕಣ್ಮುಂದೆ ಸುಳಿಯುತ್ತಿದೆ!

ಆದರೆ ರಸೆಲ್‌ ಮಾತ್ರ ಕೆಕೆಆರ್‌ನ ಬ್ಯಾಟಿಂಗ್‌ ಅಸ್ತ್ರ ವಲ್ಲ. ಅಲ್ಲಿ ಕ್ರಿಸ್‌ ಲಿನ್‌, ಸುನೀಲ್‌ ನಾರಾಯಣ್‌, ನಿತೀಶ್‌ ರಾಣಾ, ದಿನೇಶ್‌ ಕಾರ್ತಿಕ್‌ ಕೂಡ ಮುನ್ನುಗ್ಗಿ ಬೀಸುವವರೇ ಆಗಿದ್ದಾರೆ. ಹೀಗಾಗಿ ಕೆಕೆಆರ್‌ ಬ್ಯಾಟಿಂಗಿಗೆ ಹೋಲಿಸಿದರೆ ಚೆನ್ನೈ ಬ್ಯಾಟಿಂಗ್‌ “ತುಸು ಹಿಂದೆ’ ಎಂದೇ ಹೇಳಬೇಕಾಗುತ್ತದೆ. ಶೇನ್‌ ವಾಟ್ಸನ್‌, ಅಂಬಾಟಿ ರಾಯುಡು ಈ ವರೆಗೆ ಕ್ಲಿಕ್‌ ಆಗಿಲ್ಲ. ಹೀಗಾಗಿ ಡು ಪ್ಲೆಸಿಸ್‌, ರೈನಾ, ಧೋನಿ, ಜಾಧವ್‌ ಅವರನ್ನೇ ಹೆಚ್ಚು ಅವಲಂಬಿಸಬೇಕಿದೆ.

ಸ್ಪಿನ್ನರ್‌ಗಳೇ ನಿರ್ಣಾಯಕ
ಎರಡೂ ತಂಡಗಳು ಕ್ವಾಲಿಟಿ ಸ್ಪಿನ್ನರ್‌ಗಳನ್ನು ಹೊಂದಿರುವುದು ವಿಶೇಷ. ಚೆನ್ನೈ ಬಳಿ ಹರ್ಭಜನ್‌, ಜಡೇಜ, ತಾಹಿರ್‌ ಇದ್ದಾರೆ. ಸುನೀಲ್‌ ನಾರಾಯಣ್‌, ಪೀಯೂಷ್‌ ಚಾವ್ಲಾ, ಕುಲದೀಪ್‌ ಯಾದವ್‌ ಕೋಲ್ಕತಾದ ಸ್ಪಿನ್‌ ಅಸ್ತ್ರಗಳು. ಯಾರು ಸ್ಪಿನ್ನನ್ನು ಸಮರ್ಥವಾಗಿ ನಿಭಾಯಿಸುವರೋ, ಅವರಿಗೆ ಗೆಲುವಿನ ಅವಕಾಶ ಹೆಚ್ಚು.

ದೊಡ್ಡ ಸ್ಕೋರ್‌ ಸಾಧ್ಯವೇ?
ಚೆನ್ನೈ ಟ್ರ್ಯಾಕ್‌ ತುಸು ನಿಧಾನ ಗತಿಯಿಂದ ಕೂಡಿರುವುದರಿಂದ ಇಲ್ಲಿ ಈ ವರೆಗೆ ದೊಡ್ಡ ಸ್ಕೋರ್‌ ದಾಖಲಾಗಿಲ್ಲ. ಆದರೆ ಇದನ್ನು ಸುಳ್ಳು ಮಾಡುವ ಸಾಮರ್ಥ್ಯ ಕೆಕೆಆರ್‌ಗೆ ಇದೆ. ಧೋನಿ ಪಡೆ ತವರಿನಲ್ಲಿ ಆಡುತ್ತಿದೆ ಎಂಬುದಷ್ಟೇ ಪ್ಲಸ್‌ ಪಾಯಿಂಟ್‌. ತವರಿನ ಎಲ್ಲ 3 ಪಂದ್ಯಗಳಲ್ಲೂ ಚೆನ್ನೈ ಜಯ ಸಾಧಿಸಿದೆ. ಆದರೆ ಕೆಕೆಆರ್‌ ನಾಯಕ ದಿನೇಶ್‌ ಕಾರ್ತಿಕ್‌ ಪಾಲಿಗೆ ಚೆನ್ನೈ ತವರೂರು ಎಂಬುದನ್ನು ಮರೆಯುವಂತಿಲ್ಲ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.