![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 9, 2019, 6:00 AM IST
ಮುಂಬಯಿ: ಮುಂಬರುವ ವಿಶ್ವಕಪ್ನಲ್ಲಿ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು 2011ರ ಹೀರೋ ಯುವರಾಜ್ ಸಿಂಗ್ ಹೇಳಿದ್ದಾರೆ.
50 ಓವರ್ಗಳ ಪಂದ್ಯದಲ್ಲಿ ಆಲ್ರೌಂಡರ್ಗಳ ಪಾತ್ರ ನಿರ್ಣಾಯಕ. ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಸಮರ್ಥ ಪ್ರದರ್ಶನ ನೀಡುವ ಕೌಶಲ ಹೊಂದಿರಬೇಕು. ಈ ಎರಡೂ ಸಾಮರ್ಥ್ಯ ಹಾರ್ದಿಕ್ ಪಾಂಡ್ಯ ಅವರಲ್ಲಿದೆ. ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಪಾಂಡ್ಯ ಉತ್ತಮ ಪ್ರದರ್ಶನ ನೀಡುತ್ತ ಬಂದಿದ್ದಾರೆ. ತಂಡ ಫೈನಲ್ ತಲುಪುವಲ್ಲಿ ಪಾಂಡ್ಯ ಪಾತ್ರವೂ ಮುಖ್ಯವಾಗಿತ್ತು ಎಂದು ಯುವರಾಜ್ ಹೇಳಿದರು.
2011ರಲ್ಲಿ ಭಾರತ ವಿಶ್ವಕಪ್ ಗೆಲ್ಲುವಲ್ಲಿ ಯುವರಾಜ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. 362 ರನ್ ಜತೆಗೆ 15 ವಿಕೆಟ್ ಸಂಪಾದಿಸಿ ಆಲ್ರೌಂಡರ್ ಪ್ರದರ್ಶನ ನೀಡಿದ್ದನ್ನು ಮರೆಯುವಂತಿಲ್ಲ.
You seem to have an Ad Blocker on.
To continue reading, please turn it off or whitelist Udayavani.