ರಾಹುಲ್‌, ಗೇಲ್‌ ಕಮಾಲ್‌


Team Udayavani, Apr 11, 2019, 6:30 AM IST

rahul

ಮುಂಬಯಿ: ಕನ್ನಡಿಗ ಕೆ.ಎಲ್‌. ರಾಹುಲ್‌ ಅವರ ಅಮೋಘ ಹಾಗೂ ಆಜೇಯ ಶತಕದ ನೆರವಿನೊಂದಿಗೆ ಹನ್ನೆರಡನೇ ಆವೃತ್ತಿಯ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ದಾಳಿಯನ್ನು ಬೆಂಡೆತ್ತಿದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ನಾಲ್ಕು ವಿಕೆಟ್‌ಗಳ ನಷ್ಟದಲ್ಲಿ 197 ರನ್‌ಗಳ ಬೃಹತ್‌ ಮೊತ್ತವನ್ನು ಪೇರಿಸಿದೆ.

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಪಂಜಾಬ್‌ ಪರ ಕ್ರಿಸ್‌ ಗೇಲ್‌ ಹಾಗೂ ಕೆ.ಎಲ್‌. ರಾಹುಲ್‌ ಮುಂಬೈ ಬೌಲಿಂಗ್‌ ಮೇಲೆ ಘಾತುಕ ಪ್ರಹಾರ ನಡೆಸಿದರು. ಚೆಂಡನ್ನು ವಾಂಖೇಡೆ ಅಂಗಳದಲ್ಲಿ ಎಲ್ಲ ದಿಕ್ಕುಗಳಿಗೂ ಬಡಿದಟ್ಟತೊಡಗಿದರು. ಗೇಲ್‌ ಅವರಂತೂ ಭಾರಿ ಜೋಶ್‌ನಲ್ಲಿದ್ದರು. ಅವರಿಬ್ಬರು ಸ್ಫೋಟಕ ಆರಂಭವನ್ನು ಒದಗಿಸಿ ಶತಕದ ಜತೆಯಾಟವಾಡಿದರು.

ಮೊದಲ ಎರಡು ಓವರ್‌ಗಳಲ್ಲಿ ನಾಲ್ಕೇ ರನ್‌ಗಳು ಬಂದರೂ ಬಳಿಕ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಯೇ ಆಯಿತು. ಗೇಲ್‌ 63 ರನ್‌ (36 ಎಸೆತ, 3 ಬೌಂಡರಿ, 7 ಸಿಕ್ಸರ್‌) ಬಾರಿಸಿದರು. 10.2 ಓವರ್‌ಗಳಲ್ಲೇ ವಿಕೆಟ್‌ ನಷ್ಟವಿಲ್ಲದೆ ಪಂಜಾಬ್‌ 100 ರನ್‌ಗಳ ಗಡಿ ದಾಟಿತ್ತು. ಆದರೆ, ಗೇಲ್‌ ವಿಕೆಟ್‌ ಪತನದ ಬಳಿಕ ಪಂಜಾಬ್‌ ದಿಢೀರ್‌ ಕುಸಿತ ಕಂಡಿತು.

ಮಿಲ್ಲರ್‌ (7), ಕರುಣ್‌ ನಾಯರ್‌ (5) ಹಾಗೂ ಸ್ಯಾಮ್‌ ಕರನ್‌ (8) ವಿಕೆಟ್‌ಗಳು ಉರುಳಿದ್ದರಿಂದ ತಂಡ 200ರ ಗಡಿ ದಾಟುವ ಅವಕಾಶವನ್ನು ಕೈಚೆಲ್ಲಿತು. ಆದರೂ ಮತ್ತೂಂದು ತುದಿಯಲ್ಲಿ ಕ್ರೀಸ್‌ ಕಚ್ಚಿ ನಿಂತ ರಾಹುಲ್‌ ಪಂಜಾಬ್‌ಗ ಆಸರೆಯಾದರು.

ಹಾರ್ದಿಕ್‌ ಪಾಂಡ್ಯಾ ಎಸೆತ 19ನೇ ಓವರ್‌ನಲ್ಲಿ 25 ರನ್‌ ದೋಚಿದ ರಾಹುಲ್‌, ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಶತಕ ದಾಖಲಿಸಿದರು. 64 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್‌ಗಳೊಂದಿಗೆ ಅವರು ವಿಜೃಂಭಿಸಿದರು.

ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ ಮಾಡಿತು. ಗೇಲ್‌ ವಿಕೆಟ್‌ ಬೀಳುವ ವರೆಗೂ ಈ ನಿರ್ಧಾರ ತಪ್ಪಾಯಿತೆಂದೇ ಭಾವಿಸಲಾಗಿತ್ತು. ಆದರೆ, ಬಳಿಕ ಬೌಲರ್‌ಗಳು ಪಂದ್ಯವನ್ನು ನಿಯಂತ್ರಣಕ್ಕೆ ಪಡೆದರು. ಮುಂಬೈ ಪರ ಹಾರ್ದಿಕ್‌ ಪಾಂಡ್ಯಾ ಎರಡು ವಿಕೆಟ್‌ ಪಡೆದರೂ ನಾಲ್ಕು ಓವರ್‌ಗಳಲ್ಲಿ 57 ರನ್‌ ಬಿಟ್ಟುಕೊಟ್ಟರು. ಬುಮ್ರಾ ಹಾಗೂ ಬೆಹೆÅಂಡಾಫ್ì ತಲಾ ಒಂದು ವಿಕೆಟ್‌ ಉರುಳಿಸಿದರು. ಮೊದಲ ಪಂದ್ಯದಲ್ಲಿ ಬೌಲಿಂಗ್‌ ದಾಖಲೆ ನಿರ್ಮಿಸಿದ ಅಲ್ಜಾರಿ ಜೋಸೆಪ್‌ ಇಲ್ಲಿ 2 ಓವರ್‌ಗಳಲ್ಲಿ 22 ರನ್‌ ನೀಡಿ ದುಬಾರಿಯಾದರು.

ರೋಹಿತ್‌ ಗಾಯಾಳು
ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಕೀರನ್‌ ಪೊಲಾರ್ಡ್‌ ನೇತೃತ್ವದಲ್ಲಿ ಕಣಕ್ಕಿಳಿಯಿತು. ರೋಹಿತ್‌ಶರ್ಮ ಅಭ್ಯಾಸದ ವೇಳೆ ಬಲಗಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಅವರು ಚೇತರಿಸಿಕೊಂಡಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ವಿಶ್ರಾಂತಿ ನೀಡಲಾಯಿತು. ಐಪಿಎಲ್‌ನ 11 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರೋಹಿತ್‌ ಪಂದ್ಯವೊಂದನ್ನು ತಪ್ಪಿಸಿಕೊಂಡರು.

ಸ್ಕೋರ್‌ಪಟ್ಟಿ
ಕಿಂಗ್ಸ್‌ ಇಲೆವೆನ್‌ ಪಂಜಾಬ್‌
ಕೆ. ಎಲ್‌ ರಾಹುಲ್‌ ಔಟಾಗದೆ 100
ಕ್ರಿಸ್‌ ಗೇಲ್‌ ಸಿ ಕೃಣಾಲ್‌ ಬಿ ಬೆಹೆÅಂಡಾಫ್ì 63
ಡೇವಿಡ್‌ ಮಿಲ್ಲರ್‌ ಸಿ ಡಿ ಕಾಕ್‌ ಬಿ ಹಾರ್ದಿಕ್‌ 7
ಕರುಣ್‌ ನಾಯರ್‌ ಸಿ ಚಹರ್‌ ಬಿ ಹಾರ್ದಿಕ್‌ 5
ಸ್ಯಾಮ್‌ ಕರನ್‌ ಸಿ ಡಿ ಕಾಕ್‌ ಬಿ ಬುಮ್ರಾ 8
ಮನ್‌ದೀಪ್‌ ಸಿಂಗ್‌ ಔಟಾಗದೆ 7
ಇತರ 7
ಒಟ್ಟು (4ವಿಕೆಟ್‌ಗೆ) 197
ವಿಕೆಟ್‌ ಪತನ: 1-116, 2-131, 3-141, 4-151
ಬೌಲಿಂಗ್‌
ಜಾಸನ್‌ ಬೆಹೆÅಂಡಾಫ್ì 4-0-35-1
ಜಸ್‌ಪ್ರಿತ್‌ ಬುಮ್ರಾ 4-0-38-1
ಅಲ್ಜಾರಿ ಜೋಸೆಪ್‌ 2-0-22-0
ರಾಹುಲ್‌ ಚಹರ್‌ 4-0-27-0
ಹಾರ್ದಿಕ್‌ ಪಾಂಡ್ಯ 4-0-57-2
ಕೃಣಾಲ್‌ ಪಾಂಡ್ಯ 2-0-17-0

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.