![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 17, 2020, 2:20 PM IST
ದುಬಾೖ: ಪಂದ್ಯದಿಂದ ಪಂದ್ಯಕ್ಕೆ ಉತ್ತಮ ಪ್ರದರ್ಶನ ತೋರುತ್ತಿದ್ದ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುರುವಾರ ಪಂಜಾಬ್ ವಿರುದ್ಧ
ಸೋಲನುಭವಿಸಿತ್ತು. ಇದೀಗ ಶನಿವಾರದ ಪಂದ್ಯದಲ್ಲಿ ರಾಜಸ್ಥಾನವನ್ನು ಮಣಿಸುವ ಜಪದಲ್ಲಿದೆ ಆರ್ಸಿಬಿ. ಆದರೆ ರಾಜಸ್ಥಾನ ಕೂಡ ತನ್ನ ಮೊದಲ ಸೋಲಿನ ಸೇಡನ್ನು ಈ ಪಂದ್ಯದಲ್ಲಿ ತೀರಿಸಿಕೊಳ್ಳುವ ಯೋಜನೆಯಲ್ಲಿ ರುವುದರಿಂದ ಈ ಪಂದ್ಯ ಅತ್ಯಂತ ರೋಚಕವಾಗಿರಲಿದೆ ಎನ್ನಲಡ್ಡಿಯಿಲ್ಲ.
ಪ್ರಯೋಗ ಸಲ್ಲದು
ಪಂಜಾಬ್ ವಿರುದ್ಧ ಎಬಿಡಿ ವಿಲಿಯರ್ ಅವರನ್ನು ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗಿಗೆ ಇಳಿಸಿದ ಕಾರಣದಿಂದಲೇ ಪಂದ್ಯ ಸೋಲಬೇಕಾಯಿತು ಎನ್ನುವುದು ಹಲವರ ಅಭಿಪ್ರಾಯವಾಗಿದೆ. ಅದರಂತೆ ಕೊಹ್ಲಿ ಈ ಪಂದ್ಯದಲ್ಲಿಯೂ ಪ್ರಯೋಗಕ್ಕೆ ಮುಂದಾದರೆ ತಂಡಕ್ಕೆ ಹಿನ್ನೆಡೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಾರಿಸ್ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಮಿಂಚಿ ತನ್ನ ಆಲ್ರೌಂಡರ್ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದಾರೆ. ಆದ್ದರಿಂದ ಇವರ ಮೇಲೆ ತಂಡ ಹೆಚ್ಚು ನಿರೀಕ್ಷೆ ಇಟ್ಟಿದೆ.
ಪಡಿಕ್ಕಲ್ ಮತ್ತು ಫಿಂಚ್ ಈ ಪಂದ್ಯದ ಮೂಲಕ ಮತ್ತೆ ಬ್ಯಾಟಿಂಗ್ ಫಾರ್ಮ್ ಗೆ ಮರಳಬೇಕಾದ ಅನಿವಾರ್ಯತೆ ಇದೆ. ನಾಯಕ ವಿರಾಟ್ ಮಾತ್ರ ಏಕಾಂಗಿಯಾಗಿ ಹೋರಾಡುತ್ತಿದ್ದು ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬರುತಿಲ್ಲ. ಕಳೆದ ಪಂದ್ಯದ ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೆ ಗೆಲುವಿನ ಹಳಿ ಏರಲಿ ಎನ್ನುವುದು ಆರ್ಸಿಬಿ ಅಭಿಮಾನಿಗಳ ಆಶಯವಾಗಿದೆ.
ಸ್ಟಾರ್ ಆಟಗಾರರು ಮಿಂಚುತ್ತಿಲ್ಲ
ರಾಜಸ್ಥಾನ ತಂಡ ಸ್ಟಾರ್ ಆಟಗಾರರಿಂದಲೇ ಕೂಡಿದ್ದರೂ ಯಾರೊಬ್ಬರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ ಆರಂಭದಲ್ಲಿ ಸತತ ಗೆಲುವಿನೊಂದಿಗೆ ಅಪಾಯಕಾರಿಯಾಗಿ ಗೊಚರಿಸಿದ ರಾಜಸ್ಥಾನ ನಂತರದಲ್ಲಿ ಇದೇ ಪ್ರದರ್ಶನ ತೋರುವಲ್ಲಿ ಎಡವುತ್ತಿದೆ. ನಾಯಕ ಸ್ಟೀವನ್ ಸ್ಮಿತ್, ಜಾಸ್ ಬಟ್ಲರ್, ಕೇರಳದ ಸ್ಟಂಪರ್ ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ ಪ್ರತೀ ಪಂದ್ಯದಲ್ಲಿಯೂ ಬ್ಯಾಟಿಂಗ್ ಬರ ಅನುಭವಿಸುತ್ತಿರುವುದು ತಂಡದ ಸೋಲಿಗೆ ಪ್ರಮುಖ ಕಾರಣ. ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್, ಆಲ್ರೌಂಡರ್ ರಾಹುಲ್ ತೆವಾತಿಯಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುತ್ತಿರುವುದರಿಂದ ತಂಡ 150ರ ಗಡಿ ದಾಟುವಲ್ಲಿ ಯಶಸ್ವಿಯಾಗುತ್ತಿದೆ. ಬೌಲಿಂಗ್ನಲ್ಲಿ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರತು ಪಡಿಸಿ ಮತ್ತಯಾರು ಘಾತಕ ಸ್ಪೆಲ್ ನಡೆಸುತ್ತಿಲ್ಲ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.