Bengaluru kambala: ಕಾಂತಾರದ ಕಂಬಳದ ಜೋಡಿಗೆ ಚಿನ್ನದ ಗರಿ


Team Udayavani, Nov 27, 2023, 10:47 AM IST

Bengaluru kambala: ಕಾಂತಾರದ ಕಂಬಳದ ಜೋಡಿಗೆ ಚಿನ್ನದ ಗರಿ

ಬೆಂಗಳೂರು: ಅರಮನೆ ಮೈದಾನದಲ್ಲಿ ಎರಡು ದಿನ ನಡೆದ ಬೆಂಗಳೂರು ಕಂಬಳಕ್ಕೆ ನಿರೀಕ್ಷೆಗೂ ಮೀರಿದ ಯಶಸ್ಸು ದೊರಕಿದೆ. ಕೋಣಗಳ ಓಟದ ಮಾಯೆಗೆ ಐಟಿ ಸಿಟಿ ಶರಣಾಯಿತು. ಭಾನುವಾರ ತಡ ರಾತ್ರಿವರೆಗೂ ನಡೆದ ಸ್ಪರ್ಧೆಯಲ್ಲಿ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಓಡಿದ್ದ ಕೋಣಗಳು(ಕಿಟ್ಟು ಪಟ್ಟು) ಚಿನ್ನದ ಪದಕ ಪಡೆದುಕೊಂಡಿವೆ.

ಬೊಳಂಬಳ್ಳಿ ಪರಮೇಶ್ವರ್‌ ಭಟ್ಟ ಅವರ ಅಪ್ಪು ಕುಟ್ಟಿ 6.5 ಕೋಲು ನೀರು ಚಿಮ್ಮಿಸಿ ಕೆನೆಹಲಗೆ ವಿಭಾಗದಲ್ಲಿ ಮೊದಲ ಚಿನ್ನದ ಪದಕ ಪಡೆದಿದೆ. ಈ ಕೋಣಗಳ ಓಟವನ್ನು ಅಲ್ಲಿ ನೆರೆದಿದ್ದವರು ಕಣ್ತುಂಬಿಕೊಂಡರು. ಕೇವಲ ಕರಾವಳಿ ಭಾಗಕ್ಕೆ ಸೀಮಿತವಾಗಿದ್ದ ಕಂಬಳ ಸಿಲಿಕಾನ್‌ ಸಿಟಿಗೂ ತಲುಪಿದೆ. ಇನ್ಮುಂದೆ ಶೀಘ್ರದಲ್ಲಿ ರಾಜ್ಯದ ಗಡಿ ದಾಟಿ ದೂರ ಮುಂಬಯಿನಲ್ಲೂ ಆಯೋಜಿಸುವ ಚಿಂತನೆಯು ವ್ಯಕ್ತವಾಗಿದೆ.

ಜತೆಗೆ ಪ್ರೀಮಿಯರ್‌ ಲೀಗ್‌ ನಂತೆ ಕಂಬಳದ ಲೀಗ್‌ ನಡೆಸುವ ಮುನ್ಸೂಚನೆ ಮೇಲ್ಮೋಟಕ್ಕೆ ಕಂಡ ಬರುತ್ತಿದೆ. ಕಂಬಳ ಆಯೋಜನೆ ಬಗ್ಗೆ ಮಾಹಿತಿಯನ್ನು ಸಂಬಂಧಪಟ್ಟವರು ಪಡೆದುಕೊಂಡಿದ್ದಾರೆ. ಕಂಬಳವನ್ನು ರಜಾ ದಿನಗಳಲ್ಲಿ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ 8 ಲಕ್ಷಕ್ಕೂ ಅಧಿಕ ಮಂದಿ ಕಂಬಳಕ್ಕೆ ಭೇಟಿ ಕೊಟ್ಟು ಸಂಭ್ರಮಿಸಿದರು. ಕೊನೆಯ ದಿನದ ಕಂಬಳದಲ್ಲಿ ಎಲ್ಲಿ ನೋಡಿದರೂ ಜನರ ದಂಡು, ನೂಕು ನುಗ್ಗಲು, ಜಾತ್ರೆ ವಾತಾವರಣ ಮನೆ ಮಾಡಿತ್ತು.

ಕಮೆಂಟ್ರಿಗೆ 30 ಮಂದಿ!: ಕಂಬಳದಲ್ಲಿ ಕೋಣಗಳು ಓಡುವುದು ಎಷ್ಟು ಮುಖ್ಯವೋ ಅಷ್ಟೇ ಕಮೆಂಟ್ರಿ ಮಾಡುವವರು ಸಹ. ಈ ಬಾರಿ ಬೆಂಗಳೂರು ಕಂಬಳಕ್ಕೆ ಕರಾವಳಿಯಿಂದ 30 ಮಂದಿ ಕಮೆಂಟ್ರಿ ಮಾಡುವವರು ಬಂದಿದ್ದರು. ಪ್ರತಿ ನಾಲ್ಕು ಗಂಟೆಗೊಮ್ಮೆ ಕಮೆಂಟ್ರಿ ಮಾಡವವರು ಬದಲಾಗುತ್ತಿದ್ದರು. ಬೆಂಗಳೂರು ಜನರು ಕವಿಯನ್ನು ಅರಳಿಸಿ ಕಮೆಂಟ್ರಿ ಕೊಡುವವರು ಭಿನ್ನ ಮಾತಿನ ಮೋಡಿ ಹಾಗೂ ಹಾಸ್ಯ ಚಟಾಕಿಗೆ ನಕ್ಕು ನಕ್ಕು ಸುಸ್ತಾದರು.

ಮನಸೋತ ಪ್ರೇಕ್ಷಕರು: ಕೃಷ್ಣರಾಜ ಒಡೆಯರ್‌ ವೇದಿಕೆಯಲ್ಲಿ ಕೆಳೆದೆರಡು ದಿನಗಳಿಂದ ಬೆಳಗ್ಗೆಯಿಂದ ಸಂಜೆವರೆಗೆ ಕರಂಗೋಲು ನೃತ್ಯ, ಯಕ್ಷಗಾನ, ಆಟಿ ಕಳಂಜ, ಹುಲಿ ವೇಷ, ಕಂಗೀಲು ನೃತ್ಯ, ಮಂಕಾಳಿ ನಲಿಕೆ, ಬಾಲಿವುಡ್‌ ಸಮಕಾಲೀನ ನೃತ್ಯ, ಕಂಬಳದ ಪದ ನಲಿಕೆ, ಚೆನ್ನು ನಲಿಕೆ ಮನರಂಜನೆ ನೀಡಿತು. ಆಕ್ಸಿಜನ್‌ ಡಾನ್ಸ್‌ ತಂಡ ನಡೆಸಿಕೊಟ್ಟ ನೃತ್ಯಕ್ಕೆ ಪ್ರೇಕ್ಷಕರು ಮಾರು ಹೋದರು. ಪ್ರಶಂಸಾ ಮಂಗಳೂರು ಕಾಮಿಡಿ ಕಿಲಾಡಿ ತಂಡದವರಿಂದ ಕಾಮಿಡಿ ಶೋ ನಗೆಗಡಲಿನಲ್ಲಿ ತೇಲುವಂತೆ ಮಾಡಿತು. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, ಗಾಯಕಿಯರಾದ ಇಂದು ನಾಗರಾಜ್‌, ಶಮಿತಾ ಮಲ್ನಾಡ್‌, ಗುರುಕಿರಣ್‌ ನಡೆಸಿಕೊಟ್ಟ ಸಂಗೀತ ಸಂಜೆ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಮಂದಿ ಮುಗಿಬಿದ್ದರು.

 

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.