ಫೆ. 18-25: ಕುಡುಪು ದೇಗುಲದಲ್ಲಿ  ಬ್ರಹ್ಮಕಲಶೋತ್ಸವ


Team Udayavani, Feb 4, 2018, 12:13 PM IST

22556.jpg

ಮಂಗಳೂರು: ದ. ಭಾರತದ ಪ್ರಸಿದ್ಧ ನಾಗಾರಾಧನ ಕ್ಷೇತ್ರ ಕುಡುಪು ಅನಂತ ಪದ್ಮನಾಭ ದೇವಸ್ಥಾನದಲ್ಲಿ ಫೆ. 18ರಿಂದ ಫೆ. 25ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ವಾಸ್ತು ತಜ್ಞ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಕೆ. ಕೃಷ್ಣರಾಜ ತಂತ್ರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಫೆ. 25 ರಂದು ಬೆಳಗ್ಗೆ 6.45ರಿಂದ 7.45ರ ವರೆಗೆ ಶ್ರೀ ಅನಂತ ಪದ್ಮನಾಭ ದೇವರಿಗೆ ವೈಭವದ ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದರು.ಧಾರ್ಮಿಕ ದತ್ತಿ ಇಲಾಖೆಯಿಂದ ಅನುಮೋದಿಸಲ್ಪಟ್ಟ 21 ಜನರ ಜೀರ್ಣೋದ್ಧಾರ ಸಮಿತಿ ಅಸ್ತಿತ್ವದಲ್ಲಿದೆ. ಈಗಾಗಲೇ 1.75 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಶಿಲಾಮಯ, ದಾರು ಶಿಲ್ಪ ಸಹಿತವಾದ ಚತುರಶ್ರಾಕಾರದ ನೂತನ ಗರ್ಭಗುಡಿ ದೇವರಿಗೆ ಅರ್ಪಣೆಗೊಂಡಿದ್ದು, ಇದು ರಾಜ್ಯದಲ್ಲಿಯೇ ಅತ್ಯಂತ ಅಪರೂಪದ್ದು ಎಂದರು.

ಸುಮಾರು 65 ಲ.ರೂ. ವೆಚ್ಚದಲ್ಲಿ ಅನನ್ಯವಾದ ಭೂಪುರ ಆಕೃತಿಯ ಭದ್ರಾ ಸರಸ್ವತಿ ತೀರ್ಥ ಪುಷ್ಕರಿಣಿ ನಿರ್ಮಾಣ ಗೊಂಡಿದೆ. 60 ಲ.ರೂ. ವೆಚ್ಚದಲ್ಲಿ ವಿಶೇಷ ವಿನ್ಯಾಸದ ಶಿಲಾ ಅಧಿಷ್ಠಾನ, ಕೆಂಪು ಕಲ್ಲಿನ ಗೋಡೆ ಹಾಗೂ ಹಿತ್ತಾಳೆಯ ಮುಚ್ಚಿಗೆ ಇರುವ ನೂತನ ದೈವಸ್ಥಾನ ರಚನೆಯಾಗಿದೆ.

ತಿರುವಾಂಕೂರು ಶೈಲಿ ಗೋಪುರ
4 ಕೋ. ರೂ. ವೆಚ್ಚದ ನೂತನ ಶಿಲಾ ಅಧಿಷ್ಠಾನ, ವಿಶೇಷ ಕೆತ್ತನೆಯ ಕೆಂಪು ಕಲ್ಲಿನ ಗೋಡೆ ಹಾಗೂ ನಾಲ್ಕು ಸುತ್ತಲೂ ತಾಮ್ರದ ಮುಚ್ಚಿಗೆ ಇರುವ ಸುತ್ತುಪೌಳಿ, ತಿರುವಾಂಕೂರು ಶೈಲಿಯ ಕುದುರೆ ಮಾಳಿಗೆಯಿರುವ ಗೋಪುರ ಸಹಿತ ದೇವಾಲಯವು ಅತಿ ವಿಶಿಷ್ಟ ಹಾಗೂ ಅಪರೂಪದ ರಚನೆ ಯಾಗಿ ಕಂಗೊಳಿಸಲಿದೆ. 65 ಲ.ರೂ. ವೆಚ್ಚದಲ್ಲಿ ಪೂರ್ವ ದಿಕ್ಕಿನ ಗೋಪುರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಇದಲ್ಲದೆ ಸುಮಾರು 1.35 ಕೋ.ರೂ. ವೆಚ್ಚದ ಇತರ ಕಾಮ ಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಮುಂದಿನ ಯೋಜನೆಯಾಗಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಉತ್ತರ ದಿಕ್ಕಿನ ಗೋಪುರ ನಿರ್ಮಾಣ ಹಾಗೂ ನಾಗಬನ ನವೀಕರಣ ಜರಗಲಿದೆ ಎಂದು ಅವರು ವಿವರ ನೀಡಿದರು.
ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯ ಕ್ರಮ ನಡೆಯ ಲಿದ್ದು, ಹೊರೆಕಾಣಿಕೆಯು ಸುಮಾರು 4 ಕೇಂದ್ರ ಸ್ಥಾನಗಳಿಂದ ಹಾಗೂ 30 ಉಪಕೇಂದ್ರ ಗಳಿಂದ ಫೆ. 18, ಫೆ. 20, ಫೆ. 22ರಂದು ದೇವರಿಗೆ ಸಮರ್ಪಣೆ ಗೊಳ್ಳಲಿದೆ ಎಂದು ಅವರು ಹೇಳಿದರು.

ಪಾರ್ಕಿಂಗ್‌ ವ್ಯವಸ್ಥೆ 
ಸಮಿತಿಯ ಸಂಘಟನ ಕಾರ್ಯದರ್ಶಿ ವಾಸುದೇವ ರಾವ್‌ ಕುಡುಪು ಮಾತನಾಡಿ, ಭಕ್ತರ ಅನುಕೂಲಕ್ಕಾಗಿ ವಾಹನ ನಿಲುಗಡೆಗೆ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ಮಂಗಳೂರಿನಿಂದ ಬರುವ ಭಕ್ತರಿಗೆ ದೇವಸ್ಥಾನ ಬಳಿಯ ಸೇತುವೆ ಸಮೀಪದ ಎನ್‌ಎಂಪಿಟಿ ಖಾಲಿ ಜಾಗದಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ವಾಮಂಜೂರು ಮಾರ್ಗವಾಗಿ ಬರುವವರಿಗೆ ಮಂಗಳಜ್ಯೋತಿ ಶಾಲೆ ಬಳಿ ವಾಹನ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸಮಿತಿಯ ಗೌರವಾಧ್ಯಕ್ಷ ಚಂದ್ರಹಾಸ ರೈ, ಮೊಕ್ತೇಸರ ಭಾಸ್ಕರ ಕೆ., ಅಧ್ಯಕ್ಷ ಕೆ. ಸುದರ್ಶನ ಕುಡುಪು, ಪ್ರಧಾನ ಕಾರ್ಯದರ್ಶಿ ಕೆ. ಸುಜನ್‌ದಾಸ್‌ ಕುಡುಪು, ಅನ್ನ ಸಂತರ್ಪಣ ಸಮಿತಿಯ ಪ್ರಧಾನ ಸಂಚಾಲಕ ಶೆಡ್ಡೆ ಮಂಜುನಾಥ ಭಂಡಾರಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಆನುವಂಶಿಕ ಮೊಕ್ತೇಸರ ಕೆ. ಬಾಲಕೃಷ್ಣ ಕಾರಂತ, ಪ್ರಭಾಕರ ಭಟ್‌, ಮಾಧ್ಯಮ ಸಮಿತಿಯ ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

ವೈದ್ಯಕೀಯ ಶಿಕಣ ಪಡೆದವರೇ ಡ್ರಗ್ಸ್‌ ಗೆ ಬಲಿ: ಸಿವಿಲ್‌ ನ್ಯಾಯಾಧೀಶೆ ಶೋಭಾ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.