ಹೆಣ್ಣಿನ ದೈಹಿಕ, ಮಾನಸಿಕ ಬದಲಾವಣೆ ಗೌರವಿಸೋಣ


Team Udayavani, May 28, 2019, 6:10 AM IST

girl

ಋತುಸ್ರಾವ ಅಥವಾ ಮುಟ್ಟು ಎನ್ನುವುದು ಹೆಣ್ಣು ನಿರ್ದಿಷ್ಟ ವಯಸ್ಸು ತಲುಪಿದಾಗ ಆಗುವ ದೈಹಿಕ ಬದಲಾವಣೆ. ಹಾರ್ಮೋನುಗಳ ಏರುಪೇರಿನಿಂದಾಗಿ ಋತುಮತಿಯಾದ ಹೆಣ್ಣು ದೈಹಿಕ ಹಾಗೂ ಮಾನಸಿಕವಾಗಿ ಅನೇಕ ಗೊಂದಲಗಳನ್ನು ಅನುಭವಿಸುತ್ತಾಳೆ. ಹಿಂದೆ ಇಂತಹ ವಿಚಾರಗಳ ಚರ್ಚೆಗೆ ನಿರ್ಬಂಧವಿತ್ತು. ಹೆಣ್ಣನ್ನು ಕೀಳಾಗಿ ಕಾಣುವ ಪರಿಪಾಠವೂ ಇತ್ತು.

ಇಂದು ಹೆಣ್ತನದ ಪರಿಭಾಷೆ ಬದಲಾಗಿದೆ. ಅವಳು ಸುಶಿಕ್ಷಿತಳಾದಂತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಹೊಂದಿದಂತೆ ಆಕೆಯ ಕುರಿತಾಗಿನ ಸಾಮಾಜಿಕ ದೃಷ್ಟಿಕೋನ ಬದಲಾಗಿದೆ. ಋತುಸ್ರಾವದ ಬಗ್ಗೆ ಹೇಳಲೂ ಹಿಂಜರಿಯುತ್ತಿದ್ದ ಕಾಲ ಹೋಗಿ ಇಂದು “ಹ್ಯಾಪಿ ಟು ಬ್ಲೀಡ್‌’ ಎನ್ನುವಂತಹ ಆಂದೋಲನಗಳಿಂದ ಮಹಿಳೆಗೆ ತನ್ನಲ್ಲಿನ ದೈಹಿಕ ಮತ್ತು ಮಾನಸಿಕ ಗೊಂದಲಗಳ ಬಗ್ಗೆ ಮುಕ್ತವಾಗಿ ಮಾತನಾಡುವಂತಾಗಿದ್ದು ಆರೋಗ್ಯಕರ ಬೆಳವಣಿಗೆಯೇ ಸರಿ.

ಉದ್ದೇಶ ಮತ್ತು ಯೋಜನೆ
ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಋತುಸ್ರಾವದ ಬಗ್ಗೆ ಮುಕ್ತವಾಗಿ ಮಾತನಾಡುವ ಹಾಗೂ ಶುದ್ಧ ನೀರು ಮತ್ತು ಶೌಚಾಲಯಗಳನ್ನು ಒದಗಿಸುವುದು, ಅವರ ದೇಹಕ್ಕೆ ಬೇಕಾದ ಪೋಷಕಾಂಶಗಳ ಸೇವನೆ ಬಗ್ಗೆ ಮಾಹಿತಿ ನೀಡುವುದು. ವೈಜ್ಞಾನಿಕವಲ್ಲದ ವರ್ತನೆಗಳಿಗೆ ಕಡಿವಾಣ ಹಾಕುವುದು, ಮುಟ್ಟಿನ ಸಂದರ್ಭದಲ್ಲಿ ಉಪಯೋಗಿಸಬೇಕಾದ ಪರಿಕರಗಳ ಬಗ್ಗೆ ತಿಳಿವಳಿಕೆ ನೀಡುವುದು, ತಮ್ಮ ದೈಹಿಕ ಬದಲಾವಣೆಗಳಿಗೆ ಮಹಿಳೆಯರು ಧನಾತ್ಮಕವಾಗಿ ಸ್ಪಂದಿಸುವಂತೆ ಮಾಡುವುದು, ಪುರುಷರಲ್ಲೂ ಈ ಬಗ್ಗೆ ಮಾಹಿತಿ ನೀಡುವ ಮೂಲಕ ಲಿಂಗ ಸಮಾನತೆಯನ್ನು ಎತ್ತಿ ಹಿಡಿಯುವುದು, ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಆರೋಗ್ಯ ಮತ್ತು ಸಂಪೂರ್ಣ ಅಭಿವೃದ್ಧಿಗೆ ಬದ್ಧರಾಗಿರುವುದು, ಜನರನ್ನು ಈ ಬಗ್ಗೆ ಸುಶಿಕ್ಷಿತರನ್ನಾಗಿಸುವುದು, ಸಮಸ್ಯೆಗಳಿಗೆ ಪ್ರಾಯೋಗಿಕವಾದ ಪರಿಹಾರ ನೀಡುವ ಗುರಿಗಳನ್ನು ಈ ದಿನ ಹೊಂದಿದೆ. 100ಕ್ಕೂ ಹೆಚ್ಚು ಸಂಸ್ಥೆಗಳು ಇದರ ಪ್ರಾಯೋಜಕತ್ವ ವಹಿಸಿದೆ. ಈ ಮೂಲಕ ಮಹಿಳೆಯರ ಸಮಸ್ಯೆಗಳಿಗೆ ಜಾಗತಿಕ ಮಟ್ಟದಲ್ಲಿ ಪರಿಹಾರವನ್ನು ಕಂಡುಹಿಡಿಯುವ ಮಹತ್ತರವಾದ ನಡೆ ಇದು.

ಮೇ 28 ಏಕೆ?
ಸಮಾಜ ಮುಂದುವರಿದಿದೆ. ಆದರೂ ಮಹಿಳೆ ತನ್ನ ತಿಂಗಳ ದಿನಗಳ ನೈರ್ಮಲ್ಯದ ಬಗ್ಗೆ ಅಸಡ್ಡೆ ವಹಿಸುತ್ತಿದ್ದಾಳೆ. ಸಮರ್ಪಕವಾದ ಶೌಚಾಲಯದ ಸೌಲಭ್ಯವಿಲ್ಲದೆ ಅಥವಾ ಶುಚಿಯಿಲ್ಲದ ಬಟ್ಟೆಗಳನ್ನು ಉಪಯೋಗಿಸುವ ಮೂಲಕ ತಾನೇ ಅಪಾಯ ತಂದೊಡ್ಡುತ್ತಿದ್ದಾಳೆ. ಅನೇಕರಿಗೆ ಸ್ಯಾನಿಟರಿ ಪ್ಯಾಡ್‌, ಟ್ಯಾಂಪೂನ್‌ ಕಪ್‌ಗ್ಳ ಬಳಕೆ ತಿಳಿದಿಲ್ಲ. ಕೆಲವು ಗ್ರಾಮೀಣ ವಿದ್ಯಾರ್ಥಿನಿಯರು ಈ ಮುಜುಗರದಿಂದಲೇ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ್ದೂ ಇದೆ. ಮುಟ್ಟಿನ ಸಂದರ್ಭ ಶುಚಿತ್ವ ಮತ್ತು ನೈರ್ಮಲ್ಯದ ಕುರಿತಾಗಿ ಅರಿವು ಮೂಡಿಸಲು ಋತುಸ್ರಾವ ನೈರ್ಮಲ್ಯ ದಿನ ಹುಟ್ಟಿಕೊಂಡಿದೆ.

ಜರ್ಮನಿಯ “ವಾಶ್‌’ ಸಂಸ್ಥೆ 2014ರ ಮೇ 28ರಂದು ಸಾಮಾಜಿಕ ಜಾಲತಾಣಗಳಲ್ಲಿ ಚಳವಳಿ ಆರಂಭಿಸಿತು. ಜಾಥಾ, ಸಿನೆಮಾ ಪ್ರದರ್ಶನ, ಕಾರ್ಯಾಗಾರ, ಪ್ರದರ್ಶನಗಳನ್ನು ಏರ್ಪಡಿಸಿ ಋತುಸ್ರಾವ ನೈರ್ಮಲ್ಯ ದಿನಕ್ಕೆ ಚಾಲನೆ ನೀಡಲಾಯಿತು. ಆಗ ಸಿಕ್ಕ ಸ್ಪಂದನೆ ಅಭೂತಪೂರ್ವ. ಜಾಗತಿಕವಾಗಿ ಅದು ಮನ್ನಣೆಗೆ ಪಾತ್ರವಾಯಿತು.

– ರಶ್ಮಿ ಯಾದವ್‌ ಕೆ.
ದ್ವಿತೀಯ ಪತ್ರಿಕೋದ್ಯಮ ವಿಭಾಗ ಎಸ್‌ಡಿಎಂ ಪದವಿ ಕಾಲೇಜು, ಉಜಿರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.