14 ವರ್ಷಗಳಿಂದ ಕೊಲನಿಗೆ ಕಲಿಕೋಪಕರಣ ವಿತರಣೆ ಮಾಡುತ್ತಿರುವ ಕೊಡುಗೈ ದಾನಿ


Team Udayavani, Jul 8, 2019, 5:29 PM IST

1

ಬದಿಯಡ್ಕ: ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸದ ಹಕ್ಕಿದೆ. ಆದುದರಿಂದ ಸೂಕ್ತ ವಿದ್ಯಾಭ್ಯಾಸ ನೀಡುವಲ್ಲಿ ಹೆತ್ತವರು ಆಸಕ್ತಿ ತೋರಬೇಕು. ಸರಕಾರಿ ಶಾಲೆ ಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಉಚಿತವಾಗಿ ನೀಡಲಾಗುತ್ತಿದೆ. ಎಲ್ಲರೂ ತಮ್ಮ ಮ್ಕಕಳನ್ನು ಶಾಲೆಗೆ ಕಳುಹಿಸಲೇಬೇಕು. ಮಾತ್ರವಲ್ಲದೆ ಈ ಶಾಲೆಯ ಕಟ್ಟಡಕ್ಕೆ 2 ಲಕ್ಷ ರೂ. ಮೀಸಲಿಟ್ಟಿದ್ದೇವೆ. ಇನ್ನು 2 ತಿಂಗಳಲ್ಲಾಗಿ ಕೆಲಸ ಪ್ರಾರಂಭಿಸಲಿದ್ದೇವೆ. ಇಲ್ಲಿನ ವಿದ್ಯುತ್ತಿನ ಕೊರತೆಯನ್ನು ಪಂಚಾಯತು ಈಗಾಗಲೇ ನೀಗಿಸಿದೆ. ಇಲ್ಲಿಯ ಮಕ್ಕಳಿಗೆ ಕಲಿಯುವಿಕೆಗೆ ಬೇಕಾದ ಹಣದ ಕೊರತೆಯಿರಬಾರದು ಎಂಬ ದೃಷ್ಟಿಯಿಂದ 14 ವರ್ಷಗಳಿಂದ ಪುಸ್ತಕ ಉಚಿತವಾಗಿ ತನ್ನ ಸ್ವಂತ ಕೈಯಿಂದ ನೀಡುತ್ತಿದ್ದೇನೆ ಎಂದು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್‌.ಕೃಷ್ಣ ಭಟ್‌ ಹೇಳಿದರು.

ಅವರು ಪೆರಡಾಲ ಕೊರಗ ಕಾಲನಿಯ ಎಂ.ಜಿ.ಎಲ್‌.ಸಿ. ಏಕಧ್ಯಾಪಕ ಶಾಲೆಯ ಕೊರಗ ಮಕ್ಕಳಿಗೆ ತನ್ನ ಸ್ವಂತ ಖರ್ಚಿನಿಂದ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.

ಬಡವರ ಪಾಲಿಗೆ ವಿದ್ಯೆ ಕೇವಲ ಒಂದು ಕನಸಾಗದೆ ನಾಳೆಯ ಬೆಳಕಾಗಬೇಕು ಎಂಬ ಉದ್ಧೇಶದಿಂದ ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್‌.ಕೃಷ್ಣ ಭಟ್‌ ಪೆರಡಾಲ ಕೊರಗ ಕಾಲನಿಯ ಎಂ.ಜಿ.ಎಲ್‌.ಸಿ. ಮಕ್ಕಳಿಗೆ ಸುಮಾರು 10 ವರ್ಷದಿಂದ ಬರವಣಿಗೆ ಸಾಮಾಗ್ರಿಗಳನ್ನು ಉಚಿತವಾಗಿ ನೀಡುತ್ತಿದ್ದಾರೆ . ಇವರು ಕೇವಲ ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ ಸಮಾಜ ಸೇವೆಯಲ್ಲಿಯೂ ಗುರುತಿಸಿಕೊಂಡ ವ್ಯಕ್ತಿ. ಕಿಳಿಂಗಾರಿನ ಸಾಯಿರಾಮ್‌ ಮನೆಯವರು ಬಡವರಿಗೆ ಮನೆಗಳನ್ನು, ರಿಕ್ಷಾ, ಹೊಲಿಗೆ ಯಂತ್ರ ಮುಂತಾದವುಗಳನ್ನು ಉಚಿತವಾಗಿ ನೀಡಿ ಆಸರೆಯಾಗುವ ಕೊಡುಗೆ„ದಾನಿಗಳು. ಇವರ ಸೇವೆ ಮನೆಮಾತಾಗಿದೆ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಉಪಾಧ್ಯಕ್ಷರಾದ ಪ್ರೊ.ಶ್ರೀನಾಥ್‌ ಅಭಿಪ್ರಾಯಪಟ್ಟರು. ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಬದಿಯಡ್ಕ ಗ್ರಾಮ ಪಂಚಾಯತಿನ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ಯಾಮ ಪ್ರಸಾದ ಮಾನ್ಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಎಂ.ಜಿ.ಎಲ್‌.ಸಿ.ಯ ಎಲ್ಲಾ ಮಕ್ಕಳಿಗೂ ಪುಸ್ತಕ ವಿತರಿಸಲಾಯಿತು. ಪಂಚಾಯತು ಅಧ್ಯಕ್ಷರು ತುಳುವಿನಲ್ಲಿ ಮಾತನಾಡಿ ಎಲ್ಲರ ಗಮನ ಸೆಳೆದರು. ಎಂ.ಜಿ.ಎಲ್‌.ಸಿ.ಯ ಅಧ್ಯಾಪಕರಾದ ಬಾಲಕೃಷ್ಣ ಸ್ವಾಗತಿಸಿ, ಪುಷ್ಪಾ ವಂದಿಸಿದರು.

ಕೊಲನಿಯಲ್ಲಿ ಯಾವುದೇ ತೊಂದರೆಗಳಿದ್ದಲ್ಲಿ ಪರಿಹರಿಸುವುದರಲ್ಲಿ ಪಂಚಾಯತು ಕಾರ್ಯಪ್ರವೃತ್ತವಾಗಿದೆ. ಇಲ್ಲಿನ ಎಲ್ಲರೂ ವಿದ್ಯಾಭ್ಯಾಸ ವಂತರಾಗಬೇಕು ಎಂಬುದು ನಮ್ಮ ಆಸೆ. ಆದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರಗಳನ್ನು ನೀಡಲಾಗುವುದು.
ಶ್ಯಾಮ ಪ್ರಸಾದ ಮಾನ್ಯ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.