![7-belthangady](https://www.udayavani.com/wp-content/uploads/2024/06/7-belthangady-415x249.jpg)
Maharashtra ಫಲಿತಾಂಶದಲ್ಲಿ ಹಿನ್ನಡೆ: ರಾಜೀನಾಮೆಗೆ ಮುಂದಾದ ಡಿಸಿಎಂ ಫಡ್ನವಿಸ್
ಜವಾಬ್ದಾರಿಯಿಂದ ಬಿಡುಗಡೆ ಮಾಡುವಂತೆ ಹೈಕಮಾಂಡ್ ಗೆ ಮನವಿ
Team Udayavani, Jun 5, 2024, 3:14 PM IST
![1-sadsad](https://www.udayavani.com/wp-content/uploads/2024/06/1-sadsad-1-620x403.jpg)
ಮುಂಬಯಿ: ಮಹಾರಾಷ್ಟ್ರ ದಲ್ಲಿ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಕಳಪೆ ಸಾಧನೆ ಮಾಡಿರುವ ಕುರಿತು ನೈತಿಕ ಹೊಣೆ ಹೊತ್ತಿರುವ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಪಕ್ಷ ಉಪಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಫಲಿತಾಂಶ ಪ್ರಕಟವಾದ ಮರುದಿನ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಫಡ್ನವಿಸ್”ಮಹಾರಾಷ್ಟ್ರದಲ್ಲಿ ನಾನು ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಸಲುವಾಗಿ ನನ್ನನ್ನು ಸರ್ಕಾರದ ಜವಾಬ್ದಾರಿಯಿಂದ ಬಿಡುಗಡೆ ಮಾಡುವಂತೆ ನಾನು ಬಿಜೆಪಿ ಹೈಕಮಾಂಡ್ ಗೆ ವಿನಂತಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
” ನಮ್ಮ ಸ್ಥಾನಗಳು ಕಡಿಮೆಯಾಗಿದೆ, ಸೋಲಿನ ಸಂಪೂರ್ಣ ಜವಾಬ್ದಾರಿ ಜವಾಬ್ದಾರಿಯನ್ನು ನಾನು ಸ್ವೀಕರಿಸುತ್ತೇನೆ. ಏನೇ ಕೊರತೆಯಿದ್ದರೂ ಅದನ್ನು ಪೂರೈಸಲು ಪ್ರಯತ್ನಿಸುತ್ತೇನೆ. ನಾನು ಒಬ್ಬ ಓಡಿಹೋಗುವ ವ್ಯಕ್ತಿಯಲ್ಲ. ಹೊಸ ತಂತ್ರವನ್ನು ಸಿದ್ಧಪಡಿಸುತ್ತೇವೆ ಮತ್ತು ಹೊಸ ತಂತ್ರವನ್ನು ಸಿದ್ಧಪಡಿಸಿದ ನಂತರ ನಾವು ಸಾರ್ವಜನಿಕರ ನಡುವೆ ಹೋಗುತ್ತೇವೆ” ಎಂದರು.
48 ಸ್ಥಾನಗಳ ಪೈಕಿ ಬಿಜೆಪಿ 9, ಶಿವಸೇನೆ ಶಿಂಧೆ ಬಣ 7 ಮತ್ತು ಅಜಿತ್ ಪವಾರ್ ಬಣದ ಎನ್ ಸಿಪಿ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿ ಭಾರೀ ಹಿನ್ನಡೆ ಅನುಭವಿಸಿದೆ.
ಏಕನಾಥ್ ಶಿಂಧೆ ಅವರು ಶಿವಸೇನೆಯಿಂದ ಹೊರಬಂದು ಬಿಜೆಪಿಯೊಡನೆ ಕೈಜೋಡಿಸಿ ಸರಕಾರ ರಚಿಸಿದ ಬಳಿಕ ಮುಖ್ಯಮಂತ್ರಿಯಾಗಿ ಅನುಭವ ಹೊಂದಿದ್ದ ಫಡ್ನವಿಸ್ ಪಕ್ಷದ ಆಜ್ಞೆ ಮೀರದೆ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದರು.
ಟಾಪ್ ನ್ಯೂಸ್
![7-belthangady](https://www.udayavani.com/wp-content/uploads/2024/06/7-belthangady-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
![7-belthangady](https://www.udayavani.com/wp-content/uploads/2024/06/7-belthangady-150x90.jpg)
Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು
![Rohit Sharma backs Virat kohli in T20 World Cup](https://www.udayavani.com/wp-content/uploads/2024/06/ro-ko-150x83.jpg)
T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?
![Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ](https://www.udayavani.com/wp-content/uploads/2024/06/Malpe-4-150x86.jpg)
Udupi: ಜೂನ್ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ
![DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?](https://www.udayavani.com/wp-content/uploads/2024/06/ice-creme-2-150x84.jpg)
DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?
![Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್](https://www.udayavani.com/wp-content/uploads/2024/06/sandal-1-150x83.jpg)
Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.