Bihar ಮುನಿಸು ಶಮನ; RJD 26, ಕಾಂಗ್ರೆಸ್ಸಿಗೆ 9: ಪಪ್ಪುಗೆ ತಪ್ಪಿದ ಟಿಕೆಟ್‌!


Team Udayavani, Mar 30, 2024, 12:56 AM IST

congress

ಪಟ್ನಾ: ಬಿಹಾರದಲ್ಲಿ ಇಂಡಿಯಾ ಕೂಟದ ಆರ್‌ಜೆಡಿ, ಕಾಂಗ್ರೆಸ್‌ ಮತ್ತು ಎಡಪಕ್ಷಗಳ ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿದೆ. ಬಿಹಾರದ 40 ಕ್ಷೇತ್ರಗಳ ಪೈಕಿ 26ರಲ್ಲಿ ಆರ್‌ಜೆಡಿ, 9 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾಗೂ ಸಿಪಿಐ(ಎಂಎಲ್‌) 3 ಮತ್ತು ಸಿಪಿಐ ಹಾಗೂ ಸಿಪಿಎಂ ತಲಾ 1 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿವೆ. ಈ ಮೂಲಕ, ಇತ್ತೀಚೆಗೆ ಸೀಟು ಹಂಚಿಕೆಗೆ ಮುನ್ನವೇ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಿಸಿದ್ದ ಆರ್‌ಜೆಡಿ ನಡೆಯಿಂದ ಮಿತ್ರಪಕ್ಷಗಳಲ್ಲಿ ಮೂಡಿದ್ದ ಮನಸ್ತಾಪಕ್ಕೆ ತೆರೆಬಿದ್ದಿದೆ.

ಪಟ್ನಾದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಆರ್‌ಜೆಡಿ ರಾಷ್ಟ್ರೀಯ ವಕ್ತಾರ ಮತ್ತು ರಾಜ್ಯಸಭಾ ಎಂಪಿ ಮನೋಜ್‌ ಕುಮಾರ್‌ ಝಾ, ಬಿಹಾರ ಕಾಂಗ್ರೆಸ್‌ ಅಧ್ಯಕ್ಷ ಅಖೀಲೇಶ್‌ ಪ್ರಸಾದ್‌ ಯಾದವ್‌ ಎಡಪಕ್ಷಗಳ ನಾಯಕರು ಸೀಟು ಹಂಚಿಕೆಯ ವಿಷಯವನ್ನು ಪ್ರಕಟಿಸಿದರು.

ಎ.19ರ ಮೊದಲ ಹಂತದ ಚುನಾವಣೆಯಲ್ಲಿ ಬಿಹಾರದ ಗಯಾ, ಔರಂಗಾಬಾದ್‌, ಜಾಮುಯಿ ಮತ್ತು ನಾವಡಾ ಕ್ಷೇತ್ರಗಳಿಗೆ ಆರ್‌ಜೆಡಿ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದೆ. ಮತ್ತೂಂದೆಡೆ, ಸಿಪಿಐ ಮತ್ತು ಸಿಪಿಎಂ ಬೇಗುಸರಾಯಿ ಮತ್ತು ಖಗಾರಿಯಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿವೆ.

ಪಪ್ಪು ಯಾದವ್‌ಗೆ ತಪ್ಪಿದ ಟಿಕೆಟ್‌!

ಕಾಂಗ್ರೆಸ್‌ ಕಣ್ಣಿಟ್ಟಿದ್ದ ಪೂರ್ಣಿಯಾ ಕ್ಷೇತ್ರವು ಈಗ ಆರ್‌ಜೆಡಿ ಪಾಲಾಗಿದೆ. ಆದರೆ ಇದೇ ಕ್ಷೇತ್ರದಲ್ಲಿ 3 ಬಾರಿ ಗೆದ್ದಿದ್ದ ಪಪ್ಪು ಯಾದವ್‌ ಅವರು ಈ ಬಾರಿಯೂ ಪೂರ್ಣಿಯಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದರು. ಈಗ ಪೂರ್ಣಿಯಾ ಕ್ಷೇತ್ರವು ಆರ್‌ಜೆಡಿ ಪಾಲಾಗಿದೆ. ಈ ಕ್ಷೇತ್ರಕ್ಕೆ ಆರ್‌ಜೆಡಿ ಅಭ್ಯರ್ಥಿಯನ್ನು ಹೆಸರಿಸಿದ್ದರೂ, ನಾಮಪತ್ರ ಸಲ್ಲಿಸುವುದಾಗಿ ಪಪ್ಪು ಯಾದವ್‌ ಹೇಳಿದ್ದಾರೆ. ಕಳೆದ ವಾರವಷ್ಟೇ ಪಪ್ಪು ಅವರು ತಮ್ಮ ಪಕ್ಷವನ್ನು ಕಾಂಗ್ರೆಸ್‌ ಜತೆ ವಿಲೀನಗೊಳಿಸಿದ್ದರು.

ರಾಜಸ್ಥಾನದ 2 ಕ್ಷೇತ್ರದ ಕೈ ಅಭ್ಯರ್ಥಿಗಳು ಬದಲು
ಹೊಸದಿಲ್ಲಿ: ಕಾಂಗ್ರೆಸ್‌ ಕರ್ನಾಟಕದ 4 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶುಕ್ರವಾರ ರಾತ್ರಿ ಘೋಷಿಸಿದ್ದು, ರಾಜಸ್ಥಾನದ 2 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿದೆ. ಇದು ಕಾಂಗ್ರೆಸ್‌ನ 9ನೇ ಪಟ್ಟಿ.ರಾಜಸ್ಥಾನದ ರಾಜ್‌ಸಮಂದ್‌ ಕ್ಷೇತ್ರಕ್ಕೆ ಡಾ. ದಾಮೋದರ್‌ ಗುರ್ಜರ್‌ಗೆ ಟಿಕೆಟ್‌ ಘೋಷಿಸಲಾಗಿದೆ. ಈ ಮೊದಲು ಸುದರ್ಶನ್‌ ರಾವತ್‌ ಅವರಿಗೆ ನೀಡಲಾಗಿತ್ತು. ಅದೇ ರೀತಿ ಭಿಲಾವರ್‌ ಕ್ಷೇತ್ರಕ್ಕೆ ಹೆಸರಿಸಲಾಗಿದ್ದ ಡಾ| ದಾಮೋದರ್‌ ಗುರ್ಜರ್‌ ಅವರ ಬದಲಿಗೆ ಮಾಜಿ ಕೇಂದ್ರ ಸಚಿವ ಸಿ.ಪಿ.ಜೋಶಿಗೆ ಟಿಕೆಟ್‌ ನೀಡಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.