BJP; ಇಂದು 2ನೇ ಪಟ್ಟಿ ಬಿಡುಗಡೆ?: ಮಹಿಳೆಯರಿಗೆ ಹೆಚ್ಚಿನ ಸ್ಥಾನ?


Team Udayavani, Mar 10, 2024, 6:30 AM IST

BJP 2

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ವಾರದ ಹಿಂದೆ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ, ಮಾ.10, ರವಿವಾರ‌ 150 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಪಟ್ಟಿಯಲ್ಲಿ ಮಹಾ­ರಾಷ್ಟ್ರ ಮತ್ತು ಬಿಹಾರದ ಹೆಚ್ಚಿನ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ. ಜತೆಗೆ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಹಿಮಾ­ಚಲ ಪ್ರದೇಶ, ಹರಿಯಾಣ, ಒಡಿಶಾ ಅಭ್ಯರ್ಥಿ­ಗಳ ಹೆಸರು ಪ್ರಕಟವಾಗುವ ನಿರೀಕ್ಷೆಯಿದೆ.

ರವಿವಾರ‌ ಬಿಜೆಪಿಯ ಸಿಇಸಿ ಸಭೆ ನಡೆ ಯಲಿದೆ. ಬುಧವಾರದಿಂದಲೇ ಈ ಎಲ್ಲ ರಾಜ್ಯ ಗಳ ಅಭ್ಯರ್ಥಿಗಳ ಸಂಬಂಧ ಚರ್ಚೆ ನಡೆ ಸಲಾ ಗಿದೆ. ಹೈಕಮಾಂಡ್‌ ರಾಜಸ್ಥಾನ, ತಮಿಳು  ನಾಡು, ಆಂಧ್ರ, ಕರ್ನಾಟಕ, ಒಡಿಶಾ ಘಟಕಗಳ ಕೋರ್‌ ಕಮಿಟಿ ಜತೆಗೆ ಸಭೆ ನಡೆಸಿ, ಅಭಿಪ್ರಾಯ ಸಂಗ್ರಹಿ ಸಿದೆ, ಪಟ್ಟಿ ಸಿದ್ಧಪಡಿಸಲಾಗಿದೆ.

ಬಿಜೆಪಿ ಸೇರಿರುವ ಕಾಂಗ್ರೆಸ್‌ನ ಮಾಜಿ ಸಿಎಂ ಅಶೋಕ್‌ ಚವಾಣ್‌ ಸೊಸೆ ಮಿನಲ್‌ ಖಠಗಾ ವಂಕರ್‌(ನಾಂದೆಡ್‌), ಧರತಿ ದೇವಾರೆ(ಧುಲೆ), ಸ್ಮಿತಾ ವಾದಲ್‌(ಜಲಗಾಂವ್‌), ಪುತ್ರಿ ಪಂಕಜಾ ಮುಂಢೆ, ಪಕ್ಷೇತರ ಸಂಸದೆ ನವನೀತ ರಾಣಾ ಬಿಜೆಪಿಯಿಂದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯಲಿದ್ದಾರೆ. ಗುಜರಾತ್‌ನ ಬಿಜೆಪಿ ಅಧ್ಯಕ್ಷ ಸಿ .ಆರ್‌. ಪಾಟೀಲ್‌ ಪುತ್ರಿ ಅವರಿಗೆ ಸ್ಪರ್ಧಿಸಲು ಅವಕಾಶ ದೊರೆಯುವ ಸಾಧ್ಯತೆ ಇದೆ.

ಮಧ್ಯಪ್ರದೇಶ, ರಾಜಸ್ಥಾನದಲ್ಲಿ “ಕೈ’ಗೆ ಹೊಡೆತ: ಬಿಜೆಪಿ ಸೇರಿದ ಪ್ರಮುಖರು
ಭೋಪಾಲ್‌: ಮಧ್ಯ ಪ್ರದೇಶದ ಪ್ರಮುಖ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಸುರೇಶ್‌ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್‌ ರಾಜುಖೇಡಿ ಬಿಜೆಪಿ ಸೇರಿ ದ್ದಾರೆ. ಮತ್ತೂಂದೆಡೆ ರಾಜಸ್ಥಾನದ ಮಾಜಿ ಸಿಎಂ ಅಶೋಕ್‌ ಗೆಹೊÉàಟ್‌ ಬೆಂಬಲಿಗರಾದ ಲಾಲ್‌ಚಂದ ಕಟಾರಿಯಾ ಹಾಗೂ ರಾಜೇಂದ್ರ ಯಾದವ್‌ ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ. ಮ.ಪ್ರ. ಸಿಎಂ ಮೋಹನ್‌ ಯಾದವ್‌ ಸಮ್ಮುಖದಲ್ಲಿ ಪಚೌರಿ, ರಾಜುಖೇಡಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಿದ್ದಾರೆ. ಪಚೌರಿ ಗಾಂಧಿ ಕುಟುಂಬಕ್ಕೆ ತುಂಬಾ ಹತ್ತಿರ ವಾಗಿದ್ದರು. ರಾಜುಖೇಡಿ ಕೂಡ ಬುಡಕಟ್ಟು ಸಮುದಾಯದ ಪ್ರಮುಖ ನಾಯಕರಾಗಿದ್ದರು.

ಆಂಧ್ರದಲ್ಲಿ ಬಿಜೆಪಿಗೆ 6 ಕ್ಷೇತ್ರಗಳು!
ಹೊಸದಿಲ್ಲಿ: ಟಿಡಿಪಿ ಮತ್ತು ನಟ ಪವನ್‌ ಕಲ್ಯಾಣ್‌ ಅವರ ಜನಸೇನಾ ಪಕ್ಷ (ಜೆಎಸ್‌ಪಿ) ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಆಂಧ್ರ ಪ್ರದೇಶದಲ್ಲಿ 6 ಪ್ಲಸ್‌ 2 ಸೂತ್ರ ಮುಂದಿಡಲಾಗಿದೆ. ಅದರ ಅನುಸಾರ 25 ಕ್ಷೇತ್ರಗಳ ಪೈಕಿ ಬಿಜೆಪಿ 6, ಜೆಎಸ್‌ಪಿ 2 ಹಾಗೂ ಉಳಿದ 17ರಲ್ಲಿ ಟಿಡಿಪಿ ಸ್ಪರ್ಧಿಸಲಿದೆ.

ಅದೇ ರೀತಿ 175 ವಿಧಾನಸಭೆ ಕ್ಷೇತ್ರಗಳ ಪೈಕಿ, ಬಿಜೆಪಿ-ಜೆಎಸ್‌ಪಿ 30 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, 145ರಲ್ಲಿ ಟಿಡಿಪಿ ಕಣಕ್ಕಿಳಿಯಲಿದೆ.

ದಿಲ್ಲಿಯಲ್ಲಿ ಚರ್ಚೆ: ಈ ನಡುವೆ ಚಂದ್ರಬಾಬು ನಾಯ್ಡು ಶನಿವಾರ ಗೃಹ ಸಚಿವ ಅಮಿತ್‌ ಶಾ ಜತೆಗೆ ಸ್ಥಾನ ಹೊಂದಾಣಿಕೆ ಮತ್ತು ರಾಜಕೀಯ ಮೈತ್ರಿ ಬಗ್ಗೆ 2ನೇ ಸುತ್ತಿನ ಮಾತುಕತೆ ನಡೆಸಿದರು. ಮೈತ್ರಿ ಬಗ್ಗೆ ಒಂದೆರಡು ದಿನದಲ್ಲಿ ಅಧಿಕೃತ ಘೋಷಣೆ ಹೊರ ಬೀಳಲಿದೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟ್ವೀಟ್‌ ಮಾಡಿ ಎನ್‌ಡಿಎ ಬಳಗಕ್ಕೆ ಚಂದ್ರಬಾಬು, ಪವನ್‌ ಕಲ್ಯಾಣ್‌ ಅವರನ್ನು ಸ್ವಾಗತಿಸುವುದಾಗಿ ಘೋಷಿಸಿದ್ದಾರೆ. 2018ರಲ್ಲಿ ಚಂದ್ರಬಾಬು ಎನ್‌ಡಿಎ ತೊರೆದಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.