BJP candidate list; ಕೇರಳದಲ್ಲಿ ಬಿಜೆಪಿ ಹೊಸ ರಣತಂತ್ರ: ಸರ್ವಧರ್ಮ ಸಮನ್ವಯತೆ
ಮಲಪ್ಪುರಂನಿಂದ ಅಬ್ದುಲ್... ಅಟ್ಟಿಂಗಲ್ ನಿಂದ ಆಂಟೋನಿ... ತ್ರಿಶೂರ್ನಲ್ಲಿ ಸ್ಟಾರ್ ಅಭ್ಯರ್ಥಿ
Team Udayavani, Mar 2, 2024, 7:37 PM IST
ಹೊಸದಿಲ್ಲಿ: ದೇವರನಾಡು ಕೇರಳದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಖಾತೆ ತೆರೆಯಲು ಭಾರೀ ಕಸರತ್ತು ನಡೆಸುತ್ತಿರುವ ಬಿಜೆಪಿ ಮೊದಲ ಪಟ್ಟಿಯಲ್ಲಿ 20 ಕ್ಷೇತ್ರಗಳ ಪೈಕಿ 12 ಅಭ್ಯರ್ಥಿಗಳನ್ನು ಘೋಷಿಸಿ ರಣತಂತ್ರ ಹಣೆದಿದೆ.
ನಿರೀಕ್ಷೆಯಂತೆ ತ್ರಿಶೂರ್ನಲ್ಲಿ ಸ್ಟಾರ್ ಅಭ್ಯರ್ಥಿ ಸುರೇಶ್ ಗೋಪಿ ಅವರಿಗೆ ಟಿಕೆಟ್ ನೀಡಲಾಗಿದೆ. ತಿರುವನಂತದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ವಿ ಮುರಳೀಧರನ್ ಅವರು ಅಟ್ಟಿಂಗಲ್ ನಲ್ಲಿ, ಅನಿಲ್ ಆಂಟೋನಿ ಪಥನಂತಿಟ್ಟದಿಂದ ಚುನಾವಣೆ ಎದುರಿಸಲಿದ್ದಾರೆ.
ಕಾಸರಗೋಡು ಕ್ಷೇತ್ರದಿಂದ ಎಂ.ಎಲ್.ಅಶ್ವಿನಿ, ಕಣ್ಣೂರಿನಿಂದ ಸಿ. ರಘುನಾಥ್, ಮಲಪ್ಪುರಂನಿಂದ ಡಾ. ಅಬ್ದುಲ್ ಸಲಾಂ, ಪೊನ್ನಾನಿಯಿಂದ ನಿವೇದಿತಾ ಸುಬ್ರಹ್ಮಣ್ಯನ್, ಪಾಲಕ್ಕಾಡ್ ನಿಂದ ಸಿ. ಕೃಷ್ಣಕುಮಾರ್, ಆಲಪ್ಪುಳದಿಂದ ಶೋಭಾ ಸುರೇಂದ್ರನ್, ವಡಕರದಿಂದ ಪ್ರಫುಲ್ ಕೃಷ್ಣ ಕೋಝಿಕ್ಕೋಡ್ ನಿಂದ ಎಂ.ಟಿ. ರಮೇಶ್ ಕಣಕ್ಕಿಳಿಯಲಿದ್ದಾರೆ.
ಎಲ್ ಡಿಎಫ್ -ಯುಡಿಎಫ್ ಮೈತ್ರಿಕೂಟದ ಬಿರುಕು
ಇಂಡಿಯಾ ಮೈತ್ರಿಕೂಟ ರಚಿಸಿ ಬಿಜೆಪಿಯನ್ನು ಎದುರಿಸುವ ಯತ್ನ ಕೇರಳದಲ್ಲಿ ವಿಫಲವಾಗಿದ್ದು, ಈಗಾಗಲೇ ಆಡಳಿತಾರೂಢ ಎಲ್ ಡಿಎಫ್ ಮೈತ್ರಿಕೂಟ ಅಭ್ಯರ್ಥಿಗಳನ್ನು ಘೋಷಿಸಿದ್ದು, ಯುಡಿಎಫ್ ಕೂಟವೂ ಅಭ್ಯರ್ಥಿಗಳನ್ನು ಘೋಷಿಸಿ ಸಮರಕ್ಕೆ ಸಜ್ಜಾಗಿವೆ. ಹೆಚ್ಚಿನ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ.
ಭಾರೀ ನಿರೀಕ್ಷೆ
ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಮತ್ತು ವಿ. ಮುರಳೀಧರನ್ ಅವರು ಕಣಕ್ಕಿಳಿದಿರುವ ತಿರುವನಂತಪುರ ಮತ್ತು ಅಟ್ಟಿಂಗಲ್ ನಲ್ಲಿ, ನಟ ಸುರೇಶ್ ಗೋಪಿ ಕಣ್ಣಕ್ಕಿಳಿದಿರುವ ತ್ರಿಶೂರ್ನಲ್ಲಿ ಬಿಜೆಪಿಗೆ ಕಾರ್ಯಕರ್ತರ ಬಲವಿದ್ದು, ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆಗಳಿವೆ. ಬಿಜೆಪಿ ಯಾವ ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಲಿದೆ ಎನ್ನುವ ಕುತೂಹಲ ಮೂಡಿಸಿದೆ.ತಿರುವನಂತಪುರಂ ಕ್ಷೇತ್ರವನ್ನು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಪ್ರತಿನಿಧಿಸುತ್ತಿದ್ದಾರೆ ಎನ್ನುವುದು ವಿಶೇಷ.
ಟಿಕೆಟ್ ಹಂಚಿಕೆ ವಿಚಾರದಲ್ಲೂ ಕೇಸರಿ ಪಕ್ಷ ಗಮನ ಸೆಳೆದಿದ್ದು, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ತಲಾ ಒಬ್ಬರಿಗೆ ಟಿಕೆಟ್ ನೀಡಿ ಧರ್ಮ ಸಮನ್ವಯತೆ ತೋರಿದೆ. ಇದು ಯಾವ ಮಟ್ಟದಲ್ಲಿ ಪಕ್ಷಕ್ಕೆ ಲಾಭ ತರಲಿದೆ ಎನ್ನುವ ನಿರೀಕ್ಷೆಯೂ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.