BJP;ಅಮಿತ್‌ ಶಾ ‘ಟಿಕ್‌’ ಮಾಡಿದ ಪಟ್ಟಿ ಬಗ್ಗೆ ಕುತೂಹಲ:ಉಡುಪಿ-ಚಿಕ್ಕಮಗಳೂರು ಸಹಿತ ಹಲವು ಜಟಿಲ

ಅಭ್ಯರ್ಥಿ ಆಯ್ಕೆ ಸಂಬಂಧ ಶುಕ್ರವಾರ ನಿಗದಿಯಾಗಿದ್ದ ಬಿಜೆಪಿ ಕೇಂದ್ರ ಚುನಾವಣ ಸಮಿತಿ ಸಭೆ ರದ್ದು

Team Udayavani, Mar 8, 2024, 6:50 AM IST

amit-sha

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಮೂರು ಸಮೀಕ್ಷಾ ವರದಿಗಳನ್ನು ಆಧಾರವಾಗಿಟ್ಟುಕೊಂಡು ದಿಲ್ಲಿ ಬಿಜೆಪಿ ಕಚೇರಿಯಲ್ಲಿ ಮ್ಯಾರಥಾನ್‌ ಸಭೆ ನಡೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ “ಟಿಕ್‌’ ಮಾಡಿದ ಪಟ್ಟಿ ಬಗ್ಗೆ ಈಗ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಇದೆಲ್ಲದರ ಮಧ್ಯೆ ಮಾ.8ರಂದು ನಿಗದಿಯಾಗಿದ್ದ ಬಿಜೆಪಿ ಕೇಂದ್ರ ಚುನಾವಣ ಸಮಿತಿ ಸಭೆ ಹಠಾತ್‌ ರದ್ದಾಗಿದೆ.

ಕೇಂದ್ರ ಬಿಜೆಪಿ, ಅಮಿತ್‌ ಶಾ ಹಾಗೂ ರಾಜ್ಯ ನಾಯಕರು ಅಭ್ಯರ್ಥಿ ಆಯ್ಕೆ ಬಗ್ಗೆ ನಡೆಸಿದ ಸರ್ವೇ ವರದಿ ಇಟ್ಟುಕೊಂಡು ಬುಧವಾರ ರಾತ್ರಿ ಸುಮಾರು 5 ತಾಸು ಸಭೆ ನಡೆಸಿದ್ದಾರೆ. ಆದರೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ಆದರೆ ಸಭೆಯಲ್ಲಿ ಅಮಿತ್‌ ಶಾ ಟಿಕ್‌ ಮಾಡಿದ ಹೆಸರು ಯಾವುದು ಎಂಬ ಬಗ್ಗೆ ಬಿಜೆಪಿಯ ಯಾವ ನಾಯಕರೂ ತುಟಿ ಬಿಚ್ಚಿಲ್ಲ.

ನಿರ್ಧಾರವಾಗದ ಉಡುಪಿ
ಕೆಲವು ಹಾಲಿ ಸಂಸದರಿಗೆ ಟಿಕೆಟ್‌ ನೀಡಬೇಕೋ, ಬೇಡವೋ ಎಂಬ ವಿಚಾರ ಇನ್ನೂ ರಹಸ್ಯವಾಗಿಯೇ ಉಳಿದಿದೆ. ಅದೇ ರೀತಿ ವಿಧಾನಸಭಾ ಚುನಾವಣೆಯಲ್ಲಿ ಸೋತು ಈಗ ಲೋಕಸಭೆಯ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವರ ಭವಿಷ್ಯವೂ ಇತ್ಯರ್ಥವಾಗಿಲ್ಲ. ಉತ್ತರ ಕನ್ನಡ ಲೋಕಸಭಾ ಆಕಾಂಕ್ಷಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ, ಉಡುಪಿ-ಚಿಕ್ಕಮಗಳೂರು ಅಥವಾ ಬೆಂಗಳೂರು ಉತ್ತರದಲ್ಲಿ ಸ್ಥಳ ನಿಯೋಜನೆ ಬಯಸಿರುವ ಸಿ.ಟಿ.ರವಿ, ಚಿಕ್ಕಬಳ್ಳಾಪುರ ಆಕಾಂಕ್ಷಿ ಡಾ| ಕೆ.ಸುಧಾಕರ್‌ ಹೆಸರನ್ನು ಇನ್ನೂ ವೇಟಿಂಗ್‌ ಲಿಸ್ಟ್‌ ನಲ್ಲಿಯೇ ಇಡಲಾಗಿದೆ. ಆದರೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಬಳ್ಳಾರಿ ಲೋಕಸಭಾ ಕಣಕ್ಕೆ ಇಳಿಸುವ ಬಗ್ಗೆ ಅಮಿತ್‌ ಶಾ ಬಹುತೇಕ ಹಸುರು ನಿಶಾನೆ ತೋರಿದ್ದಾರೆ ಎಂದು ತಿಳಿದು ಬಂದಿದೆ.

“ಹಾಲಿ ಸಂಸದರಿಗೆ ಟಿಕೆಟ್‌ ಕೊಡುವ ವಿಚಾರದಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ, ತೀರ್ಮಾನ ನಾವು ಮಾಡುತ್ತೇವೆ’ ಎಂದು ವರಿಷ್ಠರು ಸೂಚಿಸಿದ್ದು, ಪರ-ವಿರೋಧ ಅಭಿಪ್ರಾಯಗಳೆಲ್ಲವನ್ನೂ ಆಲಿಸಲಾಗಿದೆ. ಆದರೆ ವಿರುದ್ಧ ಅಭಿಪ್ರಾಯ ಇರುವುದು ನಾಯಕರುಗಳಧ್ದೋ, ಮತದಾರರಧ್ದೋ ಅಥವಾ ಕಾರ್ಯಕರ್ತರಧ್ದೋ ಎಂಬ ಪ್ರಶ್ನೆಯನ್ನು ಒತ್ತಿ ಒತ್ತಿ ಕೇಳಲಾಗಿದೆ.

ಶೆಟ್ಟರ್‌ ವಿಚಾರ ನಮಗೆ ಬಿಡಿ ಎಂದ ವರಿಷ್ಠರು
“ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರ ವಿಚಾರವನ್ನು ನಮಗೆ ಬಿಡಿ’ ಎಂದು ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಆದೇ ರೀತಿ ಮಂಡ್ಯ ವಿಚಾರದಲ್ಲಿ ಯಾವುದೇ ಹೇಳಿಕೆ ನೀಡದಂತೆಯೂ ಸೂಚನೆ ನೀಡಲಾಗಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಹಾವೇರಿ ಪೈಕಿ ಎಲ್ಲಿಂದ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹಳಬರಿಗೆ ಕೈ ತಪ್ಪುವ ಸಾಧ್ಯತೆ ಇಲ್ಲ: ಬಿಎಸ್‌ವೈ
ಹೆಚ್ಚಿನ ಹಾಲಿ ಸಂಸದರಿಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಹಳಬರಿಗೆ ಟಿಕೆಟ್‌ ತಪ್ಪುತ್ತದೆಯೇ ಎಂದು ದಿಲ್ಲಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಸದ್ಯ ಆ ರೀತಿ ಏನೂ ಇಲ್ಲ’ ಎಂದು ಹೇಳಿದ್ದಾರೆ. 28 ಲೋಕಸಭಾ ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಾವೇರಿಗೆ ಬೊಮ್ಮಾಯಿ ಖಚಿತ
ಹಾವೇರಿ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಣಕ್ಕೆ ಇಳಿಯುವುದು ಬಹುತೇಕ ನಿಶ್ಚಯವಾದಂತಾಗಿದೆ. ಸಚಿವೆ ಶೋಭಾ ಕರಂದ್ಲಾಜೆ ಪರ ಮಾಜಿ ಸಿಎಂ ಯಡಿಯೂರಪ್ಪ, ನಳಿನ್‌ ಕುಮಾರ್‌ ಕಟೀಲು ಪರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಬ್ಯಾಟಿಂಗ್‌ ಮಾಡಿದ್ದಾರೆ. ಜೆಡಿಎಸ್‌ಗೆ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡುವುದು ಖಚಿತವಾಗಿದ್ದು, ಸೀಟು ಹಂಚಿಕೆ ಸಂಬಂಧ ಮೈತ್ರಿ ಪಕ್ಷಗಳ ಸಭೆ ನಡೆಸುವ ಯಾವುದೇ ಸಾಧ್ಯತೆಗಳು ಇಲ್ಲ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.