BJP; 100 ದಿನದಲ್ಲಿ 10 ಸಾವಿರ ಕೋಟಿ ಅನುದಾನ ತರುತ್ತೇನೆ:ವಿ.ಸೋಮಣ್ಣ ಭರವಸೆ

ಕೊರಟಗೆರೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ ಬಿಜೆಪಿ -ಜೆಡಿಎಸ್

Team Udayavani, Mar 30, 2024, 7:28 PM IST

1-aaaa

ಕೊರಟಗೆರೆ: ನಾನು ಲೋಕಸಭಾ ಚುನಾವಣೆಯಲ್ಲಿ ಗೆದ್ದ 100 ದಿನದೂಳಗೇ ಕೇಂದ್ರದಿಂದ ಕಲ್ಪತರು ನಾಡಿಗೆ 10ಸಾವಿರ ಕೋಟಿ ಅನುದಾನ ತರುತ್ತೇನೆ. ರಾಯದುರ್ಗ ರೈಲ್ವೆ ಕಾಮಗಾರಿ ಮತ್ತು ಎತ್ತಿನಹೊಳೆ ನೀರಾವರಿ ಯೋಜನೆಗೆ ಮರುಚಾಲನೆ ನೀಡುತ್ತೇನೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭರವಸೆ ನೀಡಿದರು.

ಕೊರಟಗೆರೆ ಪಟ್ಟಣದ ಊರ್ಡಿಗೆರೆ ಸಮೀಪದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಿಂದ ಶನಿವಾರ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಬೃಹತ್ ಸಮನ್ವಯ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರಕಾರದಿಂದ ಕೊರಟಗೆರೆ ಕ್ಷೇತ್ರಕ್ಕೆ ಹೈಟೆಕ್ ಆಸ್ಪತ್ರೆ ತಂದೇ ತರುತ್ತೇನೆ ಇದು ಕೇವಲ ಭರವಸೆ ಅಲ್ಲ ಬಡಜನರ ನೋವಿನ ಮನವಿ. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ದಿಗೆ ಪ್ರಥಮ ಆಧ್ಯತೆ. ಸಿದ್ದರಬೆಟ್ಟ ಮತ್ತು ಏಳುಸುತ್ತಿನ ಕೋಟೆಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ರೂಪುರೇಷು. ಕೊರಟಗೆರೆ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಕಾವಲುಗಾರನಾಗಿ ನಾನು ಹಗಲುರಾತ್ರಿ ಕೆಲಸ ಮಾಡುತ್ತೇನೆ ಎಂದರು.

ಮಾಜಿ ಸಚಿವ ಗೋಪಾಲಯ್ಯ ಮಾತನಾಡಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರಾಜ್ಯಕ್ಕೆ ಬರಗಾಲವು ತಾನಾಗಿಯೇ ಬರುತ್ತದೆ. ಕುಡಿಯುವ ನೀರು ಮತ್ತು ಮೇವಿಗೆ ಹಾಹಾಕಾರ ಎದುರಾಗಿದೆ. ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ದಿಗೆ ಮಾಜಿ ಪ್ರಧಾನಿ ದೇವೇಗೌಡರ ಕೊಡುಗೆ ಅಪಾರ. ವಿ.ಸೋಮಣ್ಣ ಅಭಿವೃದ್ದಿಯ ಪರವಾದ ಜನಸ್ನೇಹಿ ನಾಯಕ. ತುಮಕೂರು ಜಿಲ್ಲೆಯನ್ನ ಅಭಿವೃದ್ದಿಗೆ ಅವರ ಕೊಡುಗೆ ನೀಡುತ್ತಾರೆ ಎಂದರು.

ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಮಾತನಾಡಿ ಕೊರಟಗೆರೆ ಕ್ಷೇತ್ರದ ಕಾರ್ಯಕರ್ತರು ಎಂಎಲ್‌ಎ ಸೋಲಿನ ಸೇಡು ಎಂಪಿ ಚುನಾವಣೆಯಲ್ಲಿ ತೀರಿಸಿ. ಸುಧಾಕರಲಾಲ್ ಮತ್ತು ಅನಿಲ್‌ಕುಮಾರ್ ಸೇರಿದರೆ ಕುರುಕ್ಷೇತ್ರವೇ ಮೀರಿಸುವ ಪ್ರಬಲ ಶಕ್ತಿಯೇ ಸೃಷ್ಟಿಯಾಗುತ್ತದೆ. ಕೋರಾ ಮತ್ತು ಕೋಳಾಲ ಕ್ಷೇತ್ರದಲ್ಲಿ ನಾನು ಕಾರ್ಯಕರ್ತರ ಜತೆಗಿರುತ್ತೇನೆ. ಪಾಕಿಸ್ಥಾನ ಜಿಂದಬಾದ್ ಎಂದೋರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತದೆ ಎಂದು ಕಿಡಿ ಕಾರಿದರು.

ನಮ್ಮೆಲ್ಲರ ಅಚ್ಚುಮೆಚ್ಚಿನ ವಿ.ಸೋಮಣ್ಣ ಲೋಕಸಭಾ ಸದಸ್ಯರಾಗಿ ಖಚಿತವಾಗಿ ಆಯ್ಕೆಯಾಗುತ್ತಾರೆ. ಸದಸ್ಯರಾಗಿ ಆಯ್ಕೆಯಾದ ನಂತರ ನಮ್ಮ ಕೊರಟಗೆರೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ನೇರಳಾಗಿ ನಿಲ್ಲಬೇಕಿದೆ. ವಿಶ್ವನಾಯಕ ನರೇಂದ್ರಮೋದಿ ಮತ್ತೆ ಪ್ರಧಾನಿಯಾಗಲು ಜನರಿಂದಲೇ ಒಗ್ಗಟ್ಟು ಪ್ರದರ್ಶನವಾಗಿದೆ. ನಾವು ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟಾಗಿ ವಿ.ಸೋಮಣ್ಣ ಪರವಾಗಿ ನಿಲ್ಲಬೇಕಿದೆ ಎಂದು ಜೆಡಿಎಸ್ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಹೇಳಿದರು.

ಭಾರತದಲ್ಲಿ 400 ಕ್ಕೂ ಅಧಿಕ ಲೋಕಸಭಾ ಸೀಟ್ ಗೆಲ್ಲುವುದೇ ನಮ್ಮ ನರೇಂದ್ರ ಮೋದಿ ಗ್ಯಾರಂಟಿ. ಕರ್ನಾಟಕದ ೨೮ಕ್ಷೇತ್ರದಲ್ಲೂ ಮತ್ತೆ ಕಾಂಗ್ರೆಸ್ ಸೋಲುವುದೇ ಸಿದ್ದರಾಮಯ್ಯ ಗ್ಯಾರಂಟಿ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಒಂದಾಗಿ ಕೆಲಸ ಮಾಡ್ತೀವಿ. ಮೈತ್ರಿಕೂಟದ ವಿ.ಸೋಮಣ್ಣ ಗೆಲುವಿಗೆ ಮಧುಗಿರಿ ಮತ್ತು ಕೊರಟಗೆರೆ ಕ್ಷೇತ್ರದಿಂದ ಅತಿಹೆಚ್ಚು ಮತಗಳ ಲೀಡ್ ನೀಡುತ್ತೇವೆ ಎಂದು ಬಿಜೆಪಿ ಮುಖಂಡ ಅನಿಲ್‌ಕುಮಾರ್.ಬಿ.ಎಚ್. ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ನರೇಂದ್ರಬಾಬು, ಕೊರಟಗೆರೆ ಬಿಜೆಪಿ ಮಂಡಲ ಅಧ್ಯಕ್ಷ ದರ್ಶನ್, ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವೀರಕ್ಯಾತರಾಯ, ಬಿಜೆಪಿ ಯುವಧ್ಯಕ್ಷ ಶಿವಕುಮಾರ್, ಮಾಜಿ ಜಿಪಂ ಸದಸ್ಯ ಶಿವರಾಮಯ್ಯ, ಪವನಕುಮಾರ್, ಡಾ.ಲಕ್ಷ್ಮೀಕಾಂತ, ಗುರುಧತ್, ಶ್ರೀನಿವಾಸ, ಮಾಜಿ ತಾಪಂ ಸದಸ್ಯ ಎಲ್.ವಿ.ಪ್ರಕಾಶ್, ಪಪಂ ಸದಸ್ಯ ಪುಟ್ಟನರಸಪ್ಪ, ರಮೇಶ್, ದಾಸಲುಕುಂಟೆ ರಘು, ವೆಂಕಟೇಶ್, ಸಿ.ಬಿ.ರಂಗಮ್ಮ ಸೇರಿದಂತೆ ಇತರರು ಇದ್ದರು.

ಮೈತ್ರಿ ಕಾರ್ಯಕರ್ತರ ಬೈಕ್ ರ್‍ಯಾಲಿ
ತುಮಕೂರು ಲೋಕಸಭಾ ಅಭ್ಯರ್ಥಿ ವಿ.ಸೋಮಣ್ಣ ಕೊರಟಗೆರೆ ಪಟ್ಟಣದ ಕಟ್ಟೆ ಗಣಪತಿಗೆ ಪ್ರಥಮಪೂಜೆ ಸಲ್ಲಿಸಿದ ನಂತರ ಪಂಚಜನ್ಯ ಕಚೇರಿಯಿಂದ ಶಾಸಕ ಸುರೇಶ್‌ಗೌಡ, ಮಾಜಿ ಪಿ.ಆರ್.ಸುಧಾಕರಲಾಲ್, ಬಿಜೆಪಿ ಮುಖಂಡ ಅನಿಲ್‌ಕುಮಾರ್ ಮತ್ತು ಮಂಡಲ ಅಧ್ಯಕ್ಷ ದರ್ಶನ್ ಸೇರಿದಂತೆ ಸಾವಿರಾರು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಜತೆಗೂಡಿ ಬೈಕ್ ರ್‍ಯಾಲಿ ಮೂಲಕ ಸಮಾವೇಶದ ವೇದಿಕೆಗೆ ಆಗಮಿಸಿದರು.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Koratagere: ಚಿನ್ನ ನೀಡುವುದಾಗಿ ಹಣ ಪಡೆದು ವಂಚಿಸಿದ ಪ್ರಕರಣ: ಮೂವರ ಬಂಧನ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Python Rescue: ಬೃಹತ್ ಗಾತ್ರದ ಹೆಬ್ಬಾವು ಸೆರೆ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.