Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ


Team Udayavani, Apr 26, 2024, 2:07 PM IST

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

ಹೊನ್ನಾಳಿ: ರಾಜಕೀಯ, ಶೈಕ್ಷಣಿಕ, ಆಧ್ಯಾತ್ಮಿಕ, ಧಾರ್ಮಿಕವಾಗಿ ಎಲ್ಲ ದೃಷ್ಟಿಯಿಂದಲೂ ಪರಿಪೂರ್ಣತೆ ಹೊಂದಿರುವ ನರೇಂದ್ರ ಮೋದಿ ಅವರಂತಹ ಇನ್ನೊಬ್ಬ ನಾಯಕ 100 ವರ್ಷ ಕಳೆದರೂ ಈ ದೇಶಕ್ಕೆ ಸಿಗುವುದಿಲ್ಲ. ಎಲ್ಲರೂ ಮೆಚ್ಚುವಂತಹ, ಸೋಜಿಗ ಪಡುವಂತಹ ವ್ಯಕ್ತಿತ್ವ ಮೋದಿ ಅವರದ್ದಾಗಿದೆ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಬಣ್ಣಿಸಿದರು.

ಬಿಜೆಪಿಯ ಹೊನ್ನಾಳಿ ಮಂಡಲದ ವತಿಯಿಂದ ತಾಲೂಕಿನ ಅರಕೆರೆ, ಹಿರೇಗೋಣಿಗೆರೆ ಸೇರಿದಂತೆ ಇತರ ಗ್ರಾಮಗಳಲ್ಲಿ ಗುರುವಾರ ಮತಯಾಚನೆ ಮಾಡಿ ಅವರು ಮಾತನಾಡಿದರು. ಮೋದಿ ಅಂತಹ ನಾಯಕ ಬೇರೆ ದೇಶದಲ್ಲಿ ಜನಿಸಿದ್ದರೆ ದೇಶದ ಜನರೆಲ್ಲರೂ ಅವರನ್ನು ಪೂಜಿಸುತ್ತಿದ್ದರು. ಅಂತಹ ಮೇರು ವ್ಯಕ್ತಿತ್ವದ ಮೋದಿ ಅವರನ್ನು ವಿರೋಧಿಸುವಂತಹ ಮಾನಸಿಕ ಸ್ಥಿತಿ ಕೆಲವರಲ್ಲಿದೆ. ಕಾಂಗ್ರೆಸ್‌ ನಿಂದ ದೇಶಕ್ಕೆ ಯಾವ ಲಾಭವಿದೆ ಎಂದು ಪ್ರಶ್ನಿಸಿದರು.

23 ವರ್ಷ ಕಾಲ ಗುಜರಾತ್‌ ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಒಂದು ದಿನವೂ ರಜೆ ತೆಗೆದುಕೊಳ್ಳದೆ 16ರಿಂದ 18 ತಾಸು ದೇಶದ ಸರ್ವರ ಒಳಿತಿಗಾಗಿ ಮೋದಿ ಶ್ರಮಿಸುತ್ತಿದ್ದಾರೆ. ಹಾಗಾಗಿ ಅವರನ್ನು ಮತ್ತೂಮ್ಮೆ ಪ್ರಧಾನಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ನನ್ನನ್ನು ಗೆಲ್ಲಿಸಿದರೆ ಅಲ್ಲಿ ಮೋದಿಯವರು ಪ್ರಧಾನಿ ಆಗುತ್ತಾರೆ. ಇಂತಹ ಅವಕಾಶವನ್ನು ಯಾರೂ ಬಿಡಬಾರದು ಎಂದು ಮನವಿ ಮಾಡಿದರು.

ಕಾಂಗ್ರೆಸ್‌ನವರದ್ದು ಅರ್ಬನ್‌ ನಕ್ಸಲ್‌ ಮನಸ್ಥಿತಿ. ದೇಶದ ಸಂಪತ್ತಿನ ಹೆಚ್ಚಿನ ಪಾಲು ಒಂದು ಸಮುದಾಯಕ್ಕೆ ಸಿಗಬೇಕು ಎನ್ನುವ ಮನಸ್ಥಿತಿ ಅವರದ್ದು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಆರ್ಥಿಕ ಸರ್ವೇ ಮಾಡುವುದಾಗಿ ಹೇಳುತ್ತಿದ್ದಾರೆ. ಕಷ್ಟಪಟ್ಟು ದುಡಿದ ಆಸ್ತಿ ಕಂಡವರ ಪಾಲಾಗಲು ಯಾವುದೇ ಕಾರಣಕ್ಕೂ ಬಿಡಬೇಡಿ. ಆರ್ಥಿಕ ಸಮೀಕ್ಷೆ ನಡೆಸುತ್ತೇವೆ ಎನ್ನುವವರನ್ನು ಮನೆಗೆ ಕಳುಹಿಸಲು ಸಿದ್ಧರಾಗಿ ಎಂದು ಕರೆ ನೀಡಿದರು.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ರಾಜ್ಯದ ಎಲ್ಲ 28 ಸ್ಥಾನಗಳಲ್ಲೂ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸುವುದು ಗ್ಯಾರಂಟಿ. ಅದರಲ್ಲಿ ದಾವಣಗೆರೆ ಕ್ಷೇತ್ರದ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಅವರ ಗೆಲುವು ಕೂಡ ಸೇರಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರದ ಓಲೈಕೆ ರಾಜಕಾರಣದಿಂದ ಜನ ಬೇಸತ್ತು ಹೋಗಿದ್ದಾರೆ ಎಂದರು.

ಬೆಂಗಳೂರು ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ನಡೆಯಿತು. ಇದನ್ನು ರೂಪಿಸಿದ ಭಯೋತ್ಪಾದಕರು ನಮ್ಮ ಪಕ್ಕದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯವರು. ಬೆಂಗಳೂರು ನಗರದಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡ ವ್ಯಾಪಾರಿಯೊಬ್ಬ ಹನುಮಾನ್‌ ಚಾಲೀಸಾ ಹಾಕಿಕೊಂಡು ಕೇಳುತ್ತಿರುವ ಸಂದರ್ಭದಲ್ಲಿ ಪುಂಡರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇನ್ನೂ ಹಸಿರಾಗಿರುವಾಗಲೇ ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ಪ್ರಕರಣದಲ್ಲಿ ನೇಹಾ ಹಿರೇಮಠ ಬರ್ಬರ ಹತ್ಯೆ ನಡೆಯಿತು. ಈ ಎಲ್ಲಾ ಘಟನೆಗಳು ಸರ್ಕಾರದ ಕಣ್ಣಿಗೆ ಬೀಳುತ್ತಿಲ್ಲವೇ ಎಂದು ಪ್ರಶ್ನಿಸಿದರು. ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್‌ ಇತರರು ಇದ್ದರು.

ಕಾಂಗ್ರೆಸ್‌ನಿಂದ ಜಾತಿ ವಿಷ ಬೀಜ ಬಿತ್ತುವ ಕಾರ್ಯ
ಕಾಂಗ್ರೆಸ್‌ ಅಭಿವೃದ್ಧಿಯ ಬಗ್ಗೆ ಎಲ್ಲಿಯೂ ಮಾತನಾಡುತ್ತಿಲ್ಲ. ಬದಲಾಗಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. 60 ವರ್ಷಗಳ ಕಾಲ ದೇಶದ ಜನರ ಹಣ ಲೂಟಿ ಮಾಡಿದ ಕಾಂಗ್ರೆಸ್‌, ಈಗ ನಿಮ್ಮ ಮರಣದ ನಂತರ ಆಸ್ತಿಯಲ್ಲಿ ಶೇ. 55ರಷ್ಟು ಪಾಲು ಸರ್ಕಾರಕ್ಕೆ, ಶೇ. 45ರಷ್ಟು ಪಾಲು ಆಸ್ತಿಯ ಒಡೆಯರ ವಾರಸುದಾರರಿಗೆ ಎನ್ನುವ ಬಗ್ಗೆ ಚಿಂತನೆ ನಡೆಸುತ್ತಿರುವುದು ದೇಶದ ಜನರಿಗೆ ಮಾಡುತ್ತಿರುವ ಮಹಾ ಮೋಸವಾಗಿದೆ ಎಂದು ಗಾಯಿತ್ರಿ ಸಿದ್ದೇಶ್ವರ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.