Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

ವೈಮಾನಿಕ ದಾಳಿಯ ಬಗ್ಗೆ ಮೊದಲೇ ಪಾಕಿಸ್ಥಾನದ ಅಧಿಕಾರಿಗಳಿಗೆ ತಿಳಿಸಲಾಗಿತ್ತು...

Team Udayavani, Apr 29, 2024, 8:33 PM IST

1-wweewq

ಬಾಗಲಕೋಟೆ: ‘ ಹಿಂಬದಿಯಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ.ಪಾಕಿಸ್ಥಾನದ ಬಾಲಾಕೋಟ್‌ನಲ್ಲಿನ ಉಗ್ರರ ಶಿಬಿರದ ಮೇಲೆ ನಡೆದ ವೈಮಾನಿಕ ದಾಳಿಯ ಬಗ್ಗೆ ಮೊದಲೇ ಪಾಕಿಸ್ಥಾನದ ಅಧಿಕಾರಿಗಳಿಗೆ ತಿಳಿಸಲಾಗಿತ್ತು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿಕೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಸೋಮವಾರ ನಡೆದ ವಿಜಯ ಸಂಕಲ್ಪ ಸಮಾವೇಶ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ”ವೈಮಾನಿಕ ದಾಳಿಯ ಬಗ್ಗೆ ಮಾಧ್ಯಮಗಳಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ನಾನು ಸೇನಾಪಡೆಗಳನ್ನು ಕೇಳಿದ್ದೆ, ಆದರೆ ಅದಕ್ಕೂ ಮೊದಲು ನಾನು ಫೋನ್ ಮೂಲಕ ಪಾಕಿಸ್ಥಾನಿ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದೆ ಆದರೆ ಅವರು ಸ್ವೀಕರಿಸಲಿಲ್ಲ. ಆದ್ದರಿಂದ ನಾನು ಸೇನಾಪಡೆಗಳನ್ನು ಕಾಯಲು ಕೇಳಿದೆ, ಪಾಕಿಸ್ಥಾನದ ಅಧಿಕಾರಿಗಳಿಗೆ ತಿಳಿಸಿದ ನಂತರ, ನಾವು ರಾತ್ರಿ ನಡೆದ ವೈಮಾನಿಕ ದಾಳಿಯ ಬಗ್ಗೆ ಜಗತ್ತಿಗೆ ಬಹಿರಂಗಪಡಿಸಿದ್ದೇವೆ, ವಿಷಯಗಳನ್ನು ಮರೆಮಾಚುವುದರಲ್ಲಿ ಅಥವಾ ಹಿಂಬದಿಯಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ ಎಂದು ಹೇಳಿದರು.

‘ ಚುನಾವಣೆಯಲ್ಲಿ ಸೋತವರು ಮತ್ತು ಸೋಲಬಹುದು ಎಂದು ಯೋಚಿಸುತ್ತಿರುವ ಜನರು ತಂತ್ರಜ್ಞಾನವನ್ನು ಬಳಸಿಕೊಂಡು ನಕಲಿ ವೀಡಿಯೊಗಳನ್ನು ಮಾಡುತ್ತಿದ್ದಾರೆ. ಕೃತಕ ಬುದ್ಧಿಮತ್ತೆಯನ್ನು ದುರುಪಯೋಗಪಡಿಸಿಕೊಂಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಧ್ವನಿಯಲ್ಲಿ ತಪ್ಪು ವಿಷಯಗಳನ್ನು ಹಾಕಿದ್ದಾರೆ, ಇದು ದೊಡ್ಡ ಬೆದರಿಕೆಯನ್ನು ಸೃಷ್ಟಿಸುತ್ತಿದೆ. ಇಂತಹ ವಿಡಿಯೋಗಳು ಕಂಡುಬಂದಲ್ಲಿ ಪೊಲೀಸರಿಗೆ ಅಥವಾ ಬಿಜೆಪಿ ಕಾರ್ಯಕರ್ತರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

“ನಿಮ್ಮ ಮತವೇ ಮೋದಿಯನ್ನು ಬಲಪಡಿಸಿ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಭಾರತವನ್ನು ಉತ್ಪಾದನಾ ಕೇಂದ್ರ ಮತ್ತು ಕೌಶಲ್ಯ ಕೇಂದ್ರವನ್ನಾಗಿ ಮಾಡುವುದು ನಮ್ಮ ಸಂಕಲ್ಪವಾಗಿದೆ. ಈ ನಿರ್ಣಯಗಳನ್ನು ರಜಾದಿನಗಳನ್ನು ಆನಂದಿಸುವವರಿಂದ ಈಡೇರಿಸಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ಟೀಕೆಗಳಿಗೆ ತಿರುಗೇಟು ನೀಡಿದರು.

2019 ಫೆಬ್ರವರಿ 26 ರಂದು ಪಾಕಿಸ್ಥಾನದಲ್ಲಿ ಬಾಲಾಕೋಟ್ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ವಾಯುಪಡೆ ವೈಮಾನಿಕ ದಾಳಿಗಳನ್ನು ನಡೆಸಿ ಹಲವು ಉಗ್ರರನ್ನು ಸದೆಬಡಿದಿತ್ತು. 2019 ಫೆಬ್ರವರಿ 14 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಅರೆಸೇನಾ ಸಿಬಂದಿ ಮೇಲೆ ನಡೆದ ಭೀಕರ ದಾಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿಗಳನ್ನು ನಡೆಸಲಾಗಿತ್ತು.

ಟಾಪ್ ನ್ಯೂಸ್

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.