Exit poll ಒಡಿಶಾ ವಿಧಾನಸಭೆ; ಬಿಜೆಡಿ-ಬಿಜೆಪಿ ಜಿದ್ದಾಜಿದ್ದಿನ ಸ್ಪರ್ಧೆ!
ಪಾಟ್ನಾಯಕ್ ಕೈಯಿಂದ ಅಧಿಕಾರ ಕಸಿದುಕೊಳ್ಳಲು ಬಿಜೆಪಿ ಯಶಸ್ವಿಯಾಗುವುದೇ?
Team Udayavani, Jun 2, 2024, 9:53 PM IST
ಹೊಸದಿಲ್ಲಿ: ಒಡಿಶಾದಲ್ಲಿ ಆಡಳಿತಾರೂಢ ಬಿಜೆಡಿ ಮತ್ತು ವಿರೋಧ ಪಕ್ಷ ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡಲಿದ್ದು, ಯಾವ ಪಕ್ಷ ಮುಂದಿನ ಸರ್ಕಾರ ರಚಿಸಲಿದೆ ಎನ್ನುವ ಕುತೂಹಲ ತೀವ್ರವಾಗಿದೆ. ಲೋಕಸಭೆ ಮತ್ತು ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆದಿತ್ತು. ಬಹುತೇಕ ಸಮೀಕ್ಷೆಗಳು ಬಿಜೆಪಿ ಹೆಚ್ಚಿನ ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ.
ಭಾನುವಾರ ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ 147 ಸದಸ್ಯರ ವಿಧಾನಸಭೆಯಲ್ಲಿ ಎರಡೂ ಪಕ್ಷಗಳು 62-80 ಸ್ಥಾನಗಳನ್ನು ಗೆಲ್ಲುವ ಭವಿಷ್ಯ ನುಡಿದಿದೆ.
ಅಂದಾಜಿನ ಪ್ರಕಾರ, 2019 ರಲ್ಲಿ 32.49% ಮತಗಳನ್ನು ಹೊಂದಿದ್ದ ಬಿಜೆಪಿ ಈಗ 42% ಮತಗಳನ್ನು ಗಳಿಸುವ ಸಾಧ್ಯತೆಯಿದೆ, ಇದು ಸುಮಾರು 10% ರಷ್ಟು ಹೆಚ್ಚಳವಾಗಿದೆ. ಐದರಿಂದ ಎಂಟು ಸ್ಥಾನಗಳು ಮತ್ತು 12% ಮತಗಳೊಂದಿಗೆ ಕಾಂಗ್ರೆಸ್ ದೂರದ ಮೂರನೇ ಸ್ಥಾನವನ್ನು ಪಡೆಯುವ ಸಾಧ್ಯತೆಯಿದೆ ಎಂದು ಅಂಕಿಅಂಶಗಳು ಭವಿಷ್ಯ ಹೇಳಿವೆ.
ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಲಾಭ ಗಳಿಸುವ ಸಾಧ್ಯತೆಯಿದೆ, ಎಕ್ಸಿಟ್ ಪೋಲ್ ಬಿಜೆಪಿಗೆ 62-80 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ.ಸಿಎಂ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ (ಬಿಜೆಡಿ) ಭಾರಿ ನಷ್ಟವನ್ನು ಅನುಭವಿಸಿ ಕೇವಲ 62-80 ಸ್ಥಾನಗಳಿಗೆ ಸೀಮಿತವಾಗಬಹುದು ಎಂದು ಹೇಳಿದೆ.
2019 ರಲ್ಲಿ ಬಿಜೆಡಿ 112 ಸ್ಥಾನ ಗೆದ್ದು ಮತ್ತೆ ಅಧಿಕಾರ ಹಿಡಿದಿತ್ತು. ಬಿಜೆಪಿ 23 ಮತ್ತು ಕಾಂಗ್ರೆಸ್ ಕೇವಲ 9 ಸ್ಥಾನಗಳನ್ನು ಗೆದ್ದಿತ್ತು. 77 ರ ಹರೆಯದ ನವೀನ್ ಪಟ್ನಾಯಕ್ 2000 ದಿಂದ ನಿರಂತರ ಐದು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.