Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ


Team Udayavani, May 17, 2024, 6:40 AM IST

MOdi (3)

ಜೌನ್‌ಪುರ: ಕಾಂಗ್ರೆಸ್‌ ನೇತೃತ್ವದ ಐಎನ್‌ಡಿಐಎ ಒಕ್ಕೂಟದ ನಾಯಕರು ದಕ್ಷಿಣ ಭಾರತದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಉತ್ತರ ಪ್ರದೇಶದ ಜನರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿ, ಅವಮಾನಿಸುತ್ತಿದ್ದಾರೆ. ಆದರೆ ಇಲ್ಲಿಗೆ ಬಂದು ಪ್ರಚಾರ ನಡೆಸುವ ವೇಳೆ ವಿಧೇಯತೆಯಿಂದ ಮತ ಯಾಚಿಸುತ್ತಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಜೌನ್‌ಪುರದಲ್ಲಿ ಗುರುವಾರ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡಿ, ಐಎನ್‌ಡಿಐಎ ಒಕ್ಕೂಟದ ಮಿತ್ರಪಕ್ಷಗಳಾಗಿರುವ ತಮಿಳುನಾಡಿನ ಡಿಎಂಕೆ, ಕೇರಳದ ಎಡಪಕ್ಷಗಳು, ಕರ್ನಾಟಕ ಹಾಗೂ ತೆಲಂಗಾಣದ ಕಾಂಗ್ರೆಸ್‌ ನಾಯಕರು ತಮ್ಮ ತಮ್ಮ ರಾಜ್ಯಗಳಲ್ಲಿ ಉತ್ತರ ಪ್ರದೇಶದವರ ವಿರುದ್ಧ ಕೆಟ್ಟ ಭಾಷೆಯಲ್ಲಿ ನಿಂದಿಸುತ್ತಾರೆ. ಜತೆಗೆ ಲಘುವಾಗಿ ಮಾತನಾಡುತ್ತಾರೆ ಎಂದಿದ್ದಾರೆ. ಸನಾತನ ಧರ್ಮದ ವಿರುದ್ಧವೂ ಅವರೆಲ್ಲರೂ ಲಘುವಾಗಿ ಮಾತನಾಡುತ್ತಾರೆ. ಹೀಗೆ ನಿಮ್ಮ ವಿರುದ್ಧ ಕೀಳಾಗಿ ಮಾತನಾಡಿದವರನ್ನು ಕ್ಷಮಿಸಿ, ಅವರಿಗೆ ಮತ ಹಾಕುತ್ತೀರಾ ಎಂದು ಮೋದಿ ಪ್ರಶ್ನಿಸಿದ್ದಾರೆ.

ಬಿಜೆಪಿಯು ಭಾರತದ ಉತ್ತರ ಹಾಗೂ ದಕ್ಷಿಣ ಭಾಗಗಳಿಗೆ ತಾರತಮ್ಯ ಮಾಡುತ್ತಿದೆ ಎಂದು ಐಎನ್‌ಡಿಐಎ ಒಕ್ಕೂಟದ ನಾಯಕರು ಆರೋಪಿಸಿದ್ದರು. ಆದರೆ ಅವರೇ ಉತ್ತರ ಪ್ರದೇಶದ ಜನರ ವಿರುದ್ಧ ಕೆಟ್ಟ ಪದಗಳನ್ನು ಬಳಸಿ ಅವಹೇಳನ ಮಾಡುತ್ತಾರೆ ಎಂದು ಪ್ರಧಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃತಜ್ಞತೆಯಿಲ್ಲದ ಪ್ರಧಾನಿ: ಸಿಎಂ

ಪ್ರಧಾನಿ ಮೋದಿ ಆರೋಪಕ್ಕೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, “ದಕ್ಷಿಣ ಭಾರತದಲ್ಲಿ ಚುನಾವಣೆ ಮುಗಿದಿದೆ ಎಂಬ ಕಾರಣಕ್ಕೆ ಕೃತಜ್ಞತೆಯಿಲ್ಲದ ಪ್ರಧಾನಿ ಮೋದಿ ಅವರು ಈಗ ಉತ್ತರ ಮತ್ತು ದಕ್ಷಿಣ ಭಾರತ ಎಂದು ವಿಭಜಿ ಸಲು ಪ್ರಯತ್ನಿಸುತ್ತಿದ್ದಾರೆ. ನಾವು ಕರ್ನಾಟಕವನ್ನು ಭಾರತ ಜನನಿಯ ತನುಜಾತೆ ಎಂದು ಪರಿಗಣಿಸಿದ್ದೇವೆ. ಆದರೆ ಮೋದಿ ಯಂತಹ ಜನರು ನಂಜು ಕಾರುತ್ತಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Mobile Recharge Plans; ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Randheer-Jaiswal

Biased; ಧಾರ್ಮಿಕ ಸ್ವಾತಂತ್ರ್ಯ ಕುರಿತು ವರದಿ: ಅಮೆರಿಕಕ್ಕೆ ಭಾರತ ತಿರುಗೇಟು

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Rajya sabha ಕಲಾಪದಲ್ಲಿ ಪ್ರತಿಭಟನೆ ವೇಳೆ ಕುಸಿದು ಬಿದ್ದ ಕಾಂಗ್ರೆಸ್‌ ಸಂಸದೆ…

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ

Minister RB Timmapur ರಾಜ್ಯ ಸರ್ಕಾರ ರೈತರ ಪರವಾಗಿ ಕಾರ್ಯ ಮಾಡುತ್ತಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-wqeqwe

Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು

1-sdsads

Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

1-aaa

Kottigehara; ನದಿಯ ಕಿರು ಕಾಲುವೆಗೆ ಬಿದ್ದ ಕಾರು: ಇಬ್ಬರು ಪಾರು

ISREL

Warning; ಶಿಲಾಯುಗಕ್ಕೆ ಮರಳಿಸುತ್ತೇವೆ ! : ಲೆಬನಾನ್ ಗೆ ಇಸ್ರೇಲ್ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.