![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 16, 2021, 5:07 PM IST
ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ವಹಿವಾಟು ಅಲ್ಪ ಏರಿಕೆಯೊಂದಿಗೆ ಮುಕ್ತಾಯ ಕಂಡಿದೆ.
ಇದನ್ನೂ ಓದಿ:ಹಳೆ ಮಿತ್ರರನ್ನು ಸ್ಮತಿಪುಟಗಳಲ್ಲಿತಂದು ನೆನಪುಗಳನ್ನು ಬೆಸೆಯುವ ಕೊಂಡಿ ಆಟೋಗ್ರಾಫ್
ಶುಕ್ರವಾರ(ಏಪ್ರಿಲ್ 16) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 28.35 ಅಂಕಗಳ ಏರಿಕೆಯೊಂದಿಗೆ 48,832.03 ಅಂಕಗಳೊಂದಿಗೆ ವಹಿವಾಟು ಮುಕ್ತಾಯಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 36.40 ಅಂಕಗಳ ಏರಿಕೆಯೊಂದಿಗೆ 14,617.85ರ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆ ಪರಿಣಾಮ ಏಷ್ಯನ್ ಪೇಂಟ್ಸ್, ಆಲ್ಟ್ರಾ ಟೆಕ್ ಸಿಮೆಂಟ್, ಒಎನ್ ಜಿಸಿ, ಸನ್ ಫಾರ್ಮಾ, ಎಚ್ ಸಿಎಲ್ ಟೆಕ್ ಮತ್ತು ನೆಸ್ಲೆ ಇಂಡಿಯಾ ಷೇರುಗಳು ಲಾಭ ಗಳಿಸಿವೆ. ಏತನ್ಮಧ್ಯೆ ಐಸಿಐಸಿಐ ಬ್ಯಾಂಕ್, ಬಜಾಜ್ ಫೈನಾನ್ಸ್, ಇನ್ಫೋಸಿಸ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ನಷ್ಟ ಕಂಡಿವೆ.
ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗತಿಯಲ್ಲಿ ಏರುತ್ತಿದ್ದು, ಈಗಾಗಲೇ ದಿನಂಪ್ರತಿ ಎರಡು ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದೆ. ಈ ಸ್ಥಿತಿ ಮುಂದುವರಿದಲ್ಲಿ ಹೂಡಿಕೆದಾರರು, ಖರೀದಿದಾರರು ಹಿಂದೇಟು ಹಾಕುವ ಮೂಲಕ ಷೇರುಪೇಟೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ ಎಂದು ರಿಲಯನ್ಸ್ ಸೆಕ್ಯುರಿಟೀಸ್ ಸ್ಟ್ರೆಟಜಿ ಹೆಡ್ ಬಿನೋದ್ ಮೋದಿ ತಿಳಿಸಿದ್ದಾರೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.