ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ


Team Udayavani, Jun 1, 2023, 7:12 AM IST

ಆರ್ಥಿಕತೆ ಶೇ.7 ಪ್ರಗತಿ ನಿರೀಕ್ಷೆ: ಕಳೆದ ವಿತ್ತ ವರ್ಷದ ಕೊನೆಯಲ್ಲಿ ಶೇ.6.1ರಷ್ಟು ವೃದ್ಧಿ

ಹೊಸದಿಲ್ಲಿ: ದೇಶದ ಅರ್ಥ ವ್ಯವಸ್ಥೆ ಸ್ಥಿರವಾಗಿದೆ ಮತ್ತು ಬೆಳವಣಿಗೆ ಸಾಧಿಸುತ್ತಿದೆ ಎಂಬುದಕ್ಕೆ ಮತ್ತೂಂದು ದಾಖಲೆ ಲಭ್ಯವಾಗಿದೆ. ಕಳೆದ ವಿತ್ತೀಯ ವರ್ಷದ ಕೊನೆಯ ತ್ತೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇ.6.1ರ ಬೆಳವಣಿಗೆ ಸಾಧಿಸಿದೆ. ಹೀಗಾಗಿ ನಾಲ್ಕೂ ತ್ತೈಮಾಸಿಕಗಳ ಲೆಕ್ಕಾಚಾರದಲ್ಲಿ ಒಟ್ಟಾರೆಯಾಗಿ ದೇಶದ ಜಿಡಿಪಿ ದರ ಶೇ.7.2 ನಿರೀಕ್ಷಿಸಲಾಗಿದೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಸಾಧಿಸುತ್ತಿರುವ ಅರ್ಥ ವ್ಯವಸ್ಥೆಗಳಲ್ಲಿ ಭಾರತವೇ ಪ್ರಥಮ ಎಂಬ ಹೆಗ್ಗಳಿಕೆಯೂ ಲಭಿಸಿದೆ.

ಕೇಂದ್ರ ಸರಕಾರದ ಸಾಂಖಿಕ ಮತ್ತು ಯೋಜನೆಗಳ ಅನುಷ್ಠಾನ ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ದತ್ತಾಂಶಗಳಲ್ಲಿ ಈ ವಿಷಯ ಸ್ಪಷ್ಟವಾಗಿದೆ. 2021-22ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ, ಈ ಜಿಡಿಪಿ ಪ್ರಮಾಣ ತುಸು ಕಡಿಮೆಯೇ. ಆಗ ಶೇ.9.1ರಷ್ಟು ಜಿಡಿಪಿ ದರ ದಾಖಲಾಗಿತ್ತು.

ಕೃಷಿ, ಉತ್ಪಾದನೆ ಕ್ಷೇತ್ರ, ಗಣಿಗಾರಿಕೆ ಮತ್ತು ನಿರ್ಮಾಣ ಕ್ಷೇತ್ರಗಳ ಉತ್ತಮ ಸಾಧನೆಯಿಂದ 2022-23ನೇ ಸಾಲಿನ ವಿತ್ತ ವರ್ಷದ ಕೊನೆಯ ತ್ತೈಮಾಸಿಕದಲ್ಲಿ ತೃಪ್ತಿದಾಯಕ ಸಾಧನೆ ಮಾಡಲಾಗಿದೆ. ಆರ್‌ಬಿಐ ನೀಡಿದ್ದ ಆರ್ಥಿಕ ಮುನ್ನೋಟದಲ್ಲಿ ಕಳೆದ ವಿತ್ತೀಯ ವರ್ಷದ ಕೊನೆಯ ತ್ತೈಮಾಸಿಕದಲ್ಲಿ ಶೇ.5.1, ಎಸ್‌ಬಿಐ ಸಂಶೋಧನ ಕೇಂದ್ರದ ಪ್ರಕಾರ ಶೇ.5.5ರ ದರಲ್ಲಿ ಜಿಡಿಪಿ ವೃದ್ಧಿಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.

ಮೌಲ್ಯದ ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 2022-23ನೇ ಸಾಲಿನ ವಿತ್ತೀಯ ವರ್ಷದಲ್ಲಿ 160.06 ಲಕ್ಷ ಕೋಟಿ ರೂ. 2021-22ನೇ ಸಾಲಿನಲ್ಲಿ ಅದರ ಮೌಲ್ಯ 149.26 ಲಕ್ಷ ಕೋಟಿ ರೂ. ಆಗಿತ್ತು. ಇದೇ ವೇಳೆ, ಆರ್‌ ಬಿಐ ನೀಡಿದ್ದ ಅಂದಾಜು ಲೆಕ್ಕಾಚಾರವನ್ನೂ ಮೀರಿ ಭಾರತದ ಜಿಡಿಪಿ ಶೇ.7.2ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಕೇಂದ್ರ ಸರಕಾರದ ವರದಿ ಹೇಳಿದೆ. ಆರ್‌ ಬಿಐ ಶೇ.7ರಷ್ಟು ಬೆಳವಣಿಗೆಯಾಗಬಹುದು ಎಂದು ಹೇಳಿತ್ತು.

ಹಿಂದಿನ ತ್ತೈಮಾಸಿಕಗಳಲ್ಲಿ
2022ರ ಜುಲೈ-ಸೆಪ್ಟಂಬರ್‌ನಲ್ಲಿ ಶೇ.6.2, ಅಕ್ಟೋಬರ್‌-ಡಿಸೆಂಬರ್‌ ಅವಧಿಯಲ್ಲಿ ಶೇ.4.5ರ ಪ್ರಮಾಣದಲ್ಲಿ ಅರ್ಥ ವ್ಯವಸ್ಥೆ ವೃದ್ಧಿಯಾಗಿತ್ತು. ರಾಷ್ಟ್ರೀಯ ಸಾಂಖೀÂಕ ಸಂಸ್ಥೆ ನೀಡಿದ್ದ ಮಾಹಿತಿಯಂತೆ 2022ರ ಎಪ್ರಿಲ್‌ನಿಂದ ಜೂನ್‌ ಅವಧಿಯಲ್ಲಿ ಅರ್ಥ ವ್ಯವಸ್ಥೆ ಬೆಳವಣಿಗೆ ಶೇ.13.1 ದಾಖಲಾಗಿತ್ತು. 2021  -22ನೇ ಸಾಲಿನ ಕೊನೆಯ ತ್ತೈಮಾಸಿಕದಲ್ಲಿ ಜಿಡಿಪಿ ಪ್ರಮಾಣ ಶೇ.4 ಆಗಿತ್ತು.

ಚೇತರಿಕೆಯ ಹಾದಿಯಲ್ಲಿ
ಕೊರೊನಾ ಹಾವಳಿ ತಗ್ಗಿದ ಬಳಿಕ ಸೇವಾ ಕ್ಷೇತ್ರದಲ್ಲಿ ನಿಧಾನಕ್ಕೆ ಚೇತರಿಕೆ ಕಂಡುಬಂದಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಜಿಡಿಪಿ ಮತ್ತು ಅರ್ಥ ವ್ಯವಸ್ಥೆಗೆ ಗಣನೀಯ ಕೊಡುಗೆ ಉಂಟಾಗಿದೆ. ಜತೆಗೆ ಖಾಸಗಿಯಾಗಿ ಜನರು ಮಾಡುವ ವೆಚ್ಚಯೂ ನೆರವಾಗಿದೆ.

ಜಿಡಿಪಿ ಮಾಹಿತಿ
ಯಿಂದ ದೇಶದ ಅರ್ಥ ವ್ಯವಸ್ಥೆ ದೃಢವಾಗಿದೆ ಎನ್ನುವುದು ಸಾಬೀತಾಗಿದೆ. ಜನರ ದೃಢವಾದ ಬೆಂಬಲ ಮತ್ತು ಅರ್ಥ ವ್ಯವಸ್ಥೆಯ ವಿವಿಧ ಕ್ಷೇತ್ರಗಳಲ್ಲಿನ ಸಾಧನೆಯೇ ಇದಕ್ಕೆ ಕಾರಣ.

– ನರೇಂದ್ರ ಮೋದಿ, ಪ್ರಧಾನಮಂತ್ರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.