ಹಬ್ಬದ ಸೀಜನ್‌ ದುಬಾರಿ ಪ್ರಯಾಣ; ಮೂರುಪಟ್ಟು ಅಲ್ಲ ಹಲವು ಪಟ್ಟು ದರ ಹೆಚ್ಚಳ

ವಿಚಿತ್ರವೆಂದರೆ ತಿಂಗಳು ಮೊದಲೇ ಬುಕಿಂಗ್‌ ಮಾಡಿದ್ದರೆ, ಪ್ರಯಾಣಿಕರು ಈ ಮೊತ್ತದಲ್ಲಿ ವಿಮಾನಗಳಲ್ಲೇ ಪ್ರಯಾಣಿಸಬಹುದು.

Team Udayavani, Dec 22, 2022, 11:55 AM IST

ಹಬ್ಬದ ಸೀಜನ್‌ ದುಬಾರಿ ಪ್ರಯಾಣ; ಮೂರುಪಟ್ಟು ಅಲ್ಲ ಹಲವು ಪಟ್ಟು ದರ ಹೆಚ್ಚಳ

ಬೆಂಗಳೂರು: ಮತ್ತೊಂದು ಹಬ್ಬದ ಸೀಜನ್‌. ಪ್ರಯಾಣಿಕರಿಗೆ ಮತ್ತದೇ ದುಬಾರಿ ಪ್ರಯಾಣದ “ಬರೆ’! ಹೌದು, ಕ್ರಿಸ್‌ಮಸ್‌ ರಜೆ ಹಿನ್ನೆಲೆಯಲ್ಲಿ ನಗರದಿಂದ ಬಹುತೇಕರು ತಮ್ಮ ಊರುಗಳು ಮತ್ತು ಪ್ರವಾಸಿ ತಾಣಗಳಿಗೆ ಹೋಗುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಇನ್ನೂ ಕೆಎಸ್‌ಆರ್‌ಟಿಸಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡುವುದಾಗಿಯೂ ಹೇಳಿಲ್ಲ. ಈ ಅವಕಾಶವನ್ನು ಅಕ್ಷರಶಃ ಪ್ರಯಾಣಿಕರ ಸುಲಿಗೆಗೆ ಬಳಸಿಕೊಳ್ಳಲು ಖಾಸಗಿ ಸಾರಿಗೆ ಸಂಸ್ಥೆಗಳು ಮತ್ತು
ಬುಕಿಂಗ್‌ ಏಜೆನ್ಸಿಗಳು ಸಜ್ಜಾಗಿವೆ.

ದುಪ್ಪಟ್ಟು ಮೂರುಪಟ್ಟು ಅಲ್ಲ ಹಲವು ಪಟ್ಟು ಹೆಚ್ಚಳ ಮಾಡಲಾಗಿದೆ. ಉದಾಹರಣೆಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಡಿ. 25ಕ್ಕೆ ಪ್ರೀಮಿಯಂ ಬಸ್‌ ಪ್ರಯಾಣದರ 8 ಸಾವಿರ ಇದ್ದರೆ, ಬೆಂಗಳೂರಿನಿಂದ ಎರ್ನಾಕುಲಂಗೆ ಅದೇ ದಿನ 7 ಸಾವಿರ ಇದೆ. ಇದೇ ಮಾರ್ಗಗಳಲ್ಲಿ ಹೊಸ ವರ್ಷಕ್ಕೆ ಅಂದರೆ ಜ. 1ಕ್ಕೆ ನೀವು ವಾಪಸ್‌ ಬರಲು ಇದೇ ಮೊತ್ತವನ್ನು ಪಾವತಿಸಬೇಕಾಗಿದೆ.

ಬೆಂಗಳೂರಿನಿಂದ ಎರ್ನಾಕುಲಂ ಪ್ರಯಾಣಕ್ಕೂ 7 ಸಾವಿರ ದರ ಇದೆ. ಮಂಗಳೂರಿಗೆ 3,500 , ಮೈಸೂರಿಗೆ 5 ಸಾವಿರ, ಮಡಿಕೇರಿಗೆ 1,600 ದರ ನಿಗದಿಯಾಗಿರುವುದು ವೆಬ್‌ಸೈಟ್‌ಗಳಲ್ಲಿ ತೋರಿಸುತ್ತಿದೆ. ವಿಚಿತ್ರವೆಂದರೆ ತಿಂಗಳು ಮೊದಲೇ ಬುಕಿಂಗ್‌ ಮಾಡಿದ್ದರೆ, ಪ್ರಯಾಣಿಕರು ಈ ಮೊತ್ತದಲ್ಲಿ ವಿಮಾನಗಳಲ್ಲೇ ಪ್ರಯಾಣಿಸಬಹುದು.

ಕ್ರಿಸ್‌ಮಸ್‌ ಪ್ರಯುಕ್ತ ಮುಂದಿನ ವಾರ ಬಹುತೇಕ ಖಾಸಗಿ ಶಾಲೆಗಳಿಗೆ ರಜೆ ಇದ್ದುದರಿಂದ ಬೇಡಿಕೆ ಹೆಚ್ಚಾಗಿದೆ. ಆದರೆ, ಹೊರ ಊರುಗಳಿಗೆ ತೆರಳಲು ಖಾಸಗಿ ಬಸ್‌ಗಳನ್ನು ಹತ್ತಲು ಮುಂದಾದವರು ಪ್ರಯಾಣ ದರ ನೋಡಿ ಗಾಬರಿಗೊಳ್ಳುತ್ತಿದ್ದಾರೆ. ಹಬ್ಬ ಮತ್ತು ಸರ್ಕಾರಿ ರಜೆಗಳ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳವಾಗದಂತೆ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದರು. ಸಾರಿಗೆ ಅಧಿಕಾರಿಗಳು ಖಾಸಗಿ ಬಸ್‌ ಆಪರೇಟರ್‌ಗಳ ಸಭೆಯನ್ನೂ ಈ ಹಿಂದೆ ಮಾಡಿದ್ದರು. ಅದಾವುದಕ್ಕೂ ಬಸ್‌ ಮಾಲಿಕರು ಸೊಪ್ಪುಹಾಕಿಲ್ಲ.

ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ಮಾತ್ರ ಪ್ರಯಾಣ ದರ ಸಾಮಾನ್ಯ ದಿನಗಳಷ್ಟೇ ಇದೆ. ಹೊರ  ರಾಜ್ಯಗಳಿಗೆ ವಿಶೇಷ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದು ಕೆಎಸ್‌ಆರ್‌ಟಿಸಿಗೆ ಕಷ್ಟದ ಕೆಲಸ. ಬೇಡಿಕೆ ಆಧರಿಸಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಿದರೆ, ಅಂತರರಾಜ್ಯ ಒಪ್ಪಂದ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಹೆಚ್ಚುವರಿ ಬಸ್‌ ಗಳನ್ನು ಕಾರ್ಯಾಚರಣೆ ಮಾಡುವುದು ಕಷ್ಟ. ಇದರ ನಡುವೆಯೂ ಕ್ರಿಸ್‌ಮಸ್‌ ರಜೆಯಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡಲು ಹೆಚ್ಚುವರಿ 300 ವಿಶೇಷ ಬಸ್‌ ಗಳನ್ನು ಕಾರ್ಯಾಚರಣೆಗೆ ಇಳಿಸಲಾಗಿದೆ ಎಂದು ಕೆಎಸ್‌ ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

ಕನ್ನಡದಲ್ಲಿ ಎಂಜಿನಿಯರಿಂಗ್‌ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ

ಕನ್ನಡದಲ್ಲಿ ಎಂಜಿನಿಯರಿಂಗ್‌ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.