ಕೋವಿಡ್ ಹೊಸ ಪ್ರಕರಣಗಳ ಇಳಿಕೆಯಾಗುತ್ತಿವೆ ನಿರ್ಬಂಧಗಳನ್ನು ತೆರವುಗೊಳಿಸಿ ಫಿಕ್ಕಿ ಆಗ್ರಹ
Team Udayavani, Jun 3, 2021, 8:23 PM IST
ನವ ದೆಹಲಿ: ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳು ಇಳಿಮುಖವಾಗುತ್ತಿವೆ. ಆರ್ಥಿಕ ಚಟುವಟಿಕೆಗಳ ಪುನರಾರಂಭಕ್ಕೆ ಹಂತ ಹಂತವಾಗಿ ಅವಕಾಶ ಕಲ್ಪಿಸಬೇಕು ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ ಕೇಂದ್ರ(ಫಿಕ್ಕಿ) ಸರ್ಕಾರಕ್ಕೆ ಆಗ್ರಹಿಸಿದೆ.
ಇದನ್ನೂ ಓದಿ : ಸರ್ಕಾರ ಎಲ್ಲ ವರ್ಗಗಳ ಬೆನ್ನೆಲುಬಾಗಿ ನಿಂತಿದೆ : ಸಚಿವ ಪ್ರಭು ಚವ್ಹಾಣ್
ನಿರ್ಬಂಧಗಳನ್ನು ಜಾರಿಗೆ ತರಲು ಬಹಳ ಸಮಯ ಕಾಯುವುದರ ಪರಿಣಾಮವಾಗಿ, ಕೋವಿಡ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳಕ್ಕೆ ಕಾರಣವಾಗಬಹುದು. ಅದು ವೈದ್ಯಕೀಯ ಮೂಲಸೌಕರ್ಯದ ಮೇಲೆ ತೀವ್ರ ಒತ್ತಡ ಸೃಷ್ಟಿಸಬಹುದು ಎಂಬುದನ್ನು ಎರಡನೆಯ ಅಲೆಯು ತೋರಿಸಿಕೊಟ್ಟಿದೆ ಎಂದು ಒಕ್ಕೂಟವು ಹೇಳಿದೆ.
ಪತ್ರದ ಮೂಲಕ ಸಲಹೆ ನೀಡಿದ ಒಕ್ಕೂಟ, ಜೀವ ಮತ್ತು ಜೀವನೋಪಾಯದ ನಡುವೆ ಸಮತೋಲನ ಕಾಯ್ದುಕೊಂಡು, ಆರ್ಥಿಕ ಚಟುವಟಿಕೆಗಳನ್ನು ಹಂತ ಹಂತವಾಗಿ ಆರಂಭಿಸುವ ಸಲಹೆಯನ್ನು ನಾವು ಮುಂದಿಡುತ್ತಿದ್ದೇವೆ’ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರಿಗೆ ಹೇಳಿದೆ. ಕನಿಷ್ಠ ಶೇಕಡ 60ರಷ್ಟು ಕಾರ್ಮಿಕರಿಗೆ ಒಂದು ಡೋಸ್ ಲಸಿಕೆ ಹಾಕಿಸಿರುವ ಉದ್ದಿಮೆಗಳನ್ನು ನಿರ್ಬಂಧಗಳಿಂದ ತೆರವುಗೊಳಿಸಬೇಕು ಎಂದು ಕೂಡ ಆಗ್ರಹಿಸಿದೆ.
ಇದನ್ನೂ ಓದಿ : ರೈತರಿಗೆ ವಿತರಿಸಲು ಸಂಗ್ರಹಿಸಿದ್ದ ಬಿತ್ತನೆ ಬೀಜದಲ್ಲಿ ಕಲಬೆರಕೆ: ಶಾಸಕ ಪರಣ್ಣ ಗರಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್ ನಿಯಮದಲ್ಲಿ ಬದಲಾವಣೆ…
Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!
Dollar Earnings: ಭಾರತದಲ್ಲಿ ಗೌತಮ್ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ
MUST WATCH
ಹೊಸ ಸೇರ್ಪಡೆ
Council By Election: ಪರಿಷತ್ ಉಪ ಚುನಾವಣೆ: 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ
Udupi: ಭೈರತಿ ಮುಡಾ ಪ್ರಕರಣದ ದಾಖಲೆಗಳ ಸುಟ್ಟಿರುವುದು ಕರಂದ್ಲಾಜೆ ನೋಡಿದ್ದಾರಾ?: ಲಕ್ಷ್ಮೀ
Udupi: ವಿದ್ಯುನ್ ಹೆಬ್ಬಾರ್ಗೆ ಫೋಟೋಗ್ರಾಫರ್ ಆಫ್ ದಿ ಇಯರ್ ಪ್ರಶಸ್ತಿ ಪ್ರದಾನ
Mangaluru: ವಾಣಿಜ್ಯ ಸಂಕೀರ್ಣ, ಅಪಾರ್ಟ್ಮೆಂಟ್ಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಕಡ್ಡಾಯ
Handicrafts Expo: ಮಂಗಳೂರಿನಲ್ಲಿ ನ್ಯೂ ಇಂಡಿಯನ್ ಕ್ರಾಫ್ಟ್ ಎಕ್ಸ್ಪೋಗೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.