ಎಸ್ ಬಿ ಐ ಸೇರಿ ಹಲವು ಬ್ಯಾಂಕ್ ಗಳೊಂದಿಗೆ ಟೋಕನೈಸೇಶನ್‌ ಸೌಲಭ್ಯಕ್ಕೆ ಮುಂದಾದ ಗೂಗಲ್ ಪೇ..!

ಕಾರ್ಡ್ ಟೋಕನೈಸೇಶನ್‌ ಎಂದರೇನು..? ಇದು ಹೇಗೆ ಸಹಕಾರಿ..? ಇಲ್ಲಿದೆ ಮಾಹಿತಿ  

Team Udayavani, Jun 17, 2021, 4:07 PM IST

google-pay-started-card-tokenization-with-these-banks-including-sbi

ನವದೆಹಲಿ : ಗೂಗಲ್ ಪೇ ಕಾರ್ಡ್ ಟೋಕನೈಸೇಶನ್‌ ಮೂಲಕ ತನ್ನ ನೆಟ್ ವರ್ಕ್ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದೆ.

ದೇಶದ ಅತ್ಯಂತ ದೊಡ್ಡ ನಾಗರಿಕ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಒಳಗೊಂಡು ಹಲವಾರು ದೊಡ್ಡ್ ಬ್ಯಾಂಕ್ ಗಳ ಸಹಕಾರದೊಂದಿಗೆ ಗೂಗಲ್ ಪೇ ಕಾರ್ಡ್ ಟೋಕನೈಸೇಶನ್‌ ಮೂಲಕ ನೆಟ್ ವರ್ಕ್ ವಿಸ್ತರಿಸಲು ಕಾರ್ಯ ರೂಪದಲ್ಲಿದೆ ಎಂದು ಗೂಗಲ್ ಪೇ ಸಂಸ್ಥೆ ತಿಳಿಸಿದೆ.

ಗೂಗಲ್ ಪೇ ಕಾರ್ಡ್ ಟೋಕನೈಸೇಶನ್‌ ಸೌಲಭ್ಯದ ಮೂಲಕ, ಬಳಕೆದಾರರು ತಮ್ಮ ಫೋನ್‌ ಗೆ ಲಗತ್ತಿಸಲಾದ ಸುರಕ್ಷಿತ ಡಿಜಿಟಲ್ ಟೋಕನ್ ಮೂಲಕ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ : ಲಸಿಕೆ ಉತ್ಪಾದನೆಯಲ್ಲಿ ನವಜಾತ ಕರುಗಳ ಸೀರಮ್ ಬಳಸದಂತೆ ನಿರ್ದೇಶಿಸಿ : ಡಿಸಿಜಿಐ ಗೆ ಪೆಟಾ ಪತ್ರ

ಇನ್ನು, ಗೂಗಲ್ ಪೇ ಕಾರ್ಡ್ ಟೋಕನೈಸೇಶನ್‌  ಪ್ರಕ್ರಿಯೆಯಲ್ಲಿ ಎಸ್‌ ಬಿ ಐ ಒಳಗೊಂಡು ಇಂಡಸ್‌ ಇಂಡ್ ಬ್ಯಾಂಕ್, ಫೆಡರಲ್ ಬ್ಯಾಂಕ್, ಕೊಟಕ್ ಮಹೀಂದ್ರಾ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಎಸ್‌ಬಿಐ ಕಾರ್ಡ್‌ಗಳು, ಫೆಡರಲ್ ಬ್ಯಾಂಕಿನ ಡೆಬಿಟ್ ಕಾರ್ಡ್‌ಗಳು, ಇಂಡಸ್‌ ಇಂಡ್ ಬ್ಯಾಂಕ್ ಮತ್ತು ಎಚ್‌ ಎಸ್‌ ಬಿಸಿ ಇಂಡಿಯಾ ಕ್ರೆಡಿಟ್ ಕಾರ್ಡ್ ಬ್ಯಾಂಕುಗಳು ಸೇರಿವೆ.

ಕೊಟಕ್ ಮಹೀಂದ್ರಾ ಬ್ಯಾಂಕ್, ಎಸ್‌ ಬಿಐ ಕಾರ್ಡ್‌ಗಳು ಮತ್ತು ಆಕ್ಸಿಸ್ ಬ್ಯಾಂಕ್‌ನೊಂದಿಗೆ ಟೋಕನೈಸೇಶನ್ ನನ್ನು ಯಶಸ್ವಿಯಾಗಿ ಪ್ರಾರಂಭಿಸಿದ ನಂತರ, ಗೂಗಲ್ ಪೇ  ಈಗ ಎಸ್‌ ಬಿ ಐ, ಇಂಡಸ್ ಇಂಡ್ ಬ್ಯಾಂಕ್ ಮತ್ತು ಫೆಡರಲ್ ಬ್ಯಾಂಕ್‌ ನಿಂದ ಡೆಬಿಟ್ ಕಾರ್ಡ್‌ಗಳನ್ನು ಮತ್ತು ಇಂಡಸ್‌ ಇಂಡ್ ಬ್ಯಾಂಕ್ ಮತ್ತು ಎಚ್‌ ಎಸ್‌ ಬಿಸಿ ಇಂಡಿಯಾದ ಕ್ರೆಡಿಟ್ ಕಾರ್ಡ್‌ಗಳನ್ನು ತನ್ನ ಸ್ಲೇಟ್‌ ಗೆ ಸೇರಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಟೋಕನೈಸೇಶನ್ ಅಂದರೇ ಏನು..?

ಬಳಕೆದಾರರು ತಮ್ಮ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ವಿವರಗಳನ್ನು ಹಂಚಿಕೊಳ್ಳದೆ ತಮ್ಮ ಫೋನ್‌ ಗೆ ಲಗತ್ತಿಸಲಾದ ಸುರಕ್ಷಿತ ಡಿಜಿಟಲ್ ಟೋಕನ್ ಮೂಲಕ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಪಾವತಿಗಳನ್ನು ಮಾಡಲು ಅನುವು ಮಾಡಿಕೊಡುವ  ಸೌಲಭ್ಯವೇ ಟೋಕನೈಸೇಶನ್ ಆಗಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ಗೂಗಲ್ ಪೇ ಮತ್ತು ಎನ್‌ ಬಿ ಯು-ಎಪಿಎಸಿ ವ್ಯವಹಾರಗಳ ಮುಖ್ಯಸ್ಥ ಸಜಿತ್ ಶಿವಾನಂದನ್, ಟೋಕನೈಸೇಶನ್ ಡಿಜಿಟಲ್ ಯುಗದಲ್ಲಿ ಸುರಕ್ಷಿತ ವಹಿವಾಟು ನಡೆಸಲು ಮತ್ತು ಆನ್‌ ಲೈನ್ ಮತ್ತು ಆಫ್‌ ಲೈನ್‌ ನಲ್ಲಿ ವ್ಯಾಪಾರಿ ವಹಿವಾಟುಗಳನ್ನು ವಹೆಚ್ಚಿಸಿಕೊಳ್ಳಲು ಬಳಕೆದಾರರನ್ನು ಉತ್ತೇಜಿಸುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು, ಟೋಕನೈಸೇಶನ್ ಬಗ್ಗೆ ಮಾತನಾಡಿದ ವೀಸಾ ಇಂಡಿಯಾ ಮತ್ತು ದಕ್ಷಿಣ ಏಷ್ಯಾ ಗ್ರೂಪ್ ಕಂಟ್ರಿ ಮ್ಯಾನೇಜರ್ ಟಿ.ಆರ್.ರಾಮಚಂದ್ರನ್, ಟೋಕನೈಸೇಶನ್, ಸಂಪರ್ಕವಿಲ್ಲದ ಪಾವತಿ ವಿಧಾನ, ಲಕ್ಷಾಂತರ ಮೊಬೈಲ್ ಬಳಕೆದಾರರು ತಮ್ಮ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ ಗಳನ್ನು ಗೂಗಲ್ ಪೇನಲ್ಲಿ ಬಳಸಲು ಸಾಧ್ಯವಾಗುತ್ತದೆ. ಇದೊಂದು ಅತ್ಯುನ್ನತ ವಿಶ್ವಾಸಾರ್ಹ ವಿಧಾನ ಎಂದು ಅವರು ಅನಿಸಿಕೆ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ : ಮೈಕ್ರೋಸಾಫ್ಟ್ ಟೀಮ್ಸ್ ಈಗ ಕನ್ನಡದಲ್ಲಿಯೂ ಲಭ್ಯ: ಈಗ ವೈಯಕ್ತಿಕ ವೈಶಿಷ್ಟ್ಯಗಳು ಉಚಿತ

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.