ಕ್ರೆಡಿಟ್ ಕಾರ್ಡ್‌ ವಿತರಣೆಗೆ ಎಚ್ ಡಿ ಎಫ್ ಸಿ ಬ್ಯಾಂಕ್ ಗೆ ಆರ್ ಬಿ ಐ ಅನುಮತಿ..!?


Team Udayavani, Aug 19, 2021, 3:32 PM IST

HDFC bank Now can start to issue credit card

ನವ ದೆಹಲಿ : ದೇಶದ ಅತ್ಯಂತ ದೊಡ್ಡ ನಾಗರಿಕ ಖಾಸಗಿ ವಲಯದ  ಎಚ್‌ ಡಿಎಫ್‌  ಸಿ ಬ್ಯಾಂಕ್‌ಗೆ  ಹೊಸ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಣೆ ಮಾಡುವುದಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು (ಆರ್‌ಬಿಐ) ಅನುಮತಿ ನೀಡಿದೆ.

ಎಚ್‌ ಡಿಎಫ್‌ಸಿ ಬ್ಯಾಂಕ್​ನಿಂದ ಹೊಸ ಕ್ರೆಡಿಟ್ ಕಾರ್ಡ್‌ ಗಳನ್ನು ನೀಡದಂತೆ ಮತ್ತು ಡಿಜಿಟಲ್ 2.0 ಕಾರ್ಯಕ್ರಮದ ಅಡಿಯಲ್ಲಿ ತನ್ನ ಡಿಜಿಟಲ್ ವ್ಯವಹಾರ ಚಟುವಟಿಕೆಗಳು ಎಲ್ಲ ಆರಂಭಗಳನ್ನು ನಿಲ್ಲಿಸುವಂತೆ ಕಳೆದ ವರ್ಷ ಡಿಸೆಂಬರ್‌ ನಲ್ಲಿ ಆರ್ ​ಬಿಐ ನಿರ್ದೇಶಿಸಿತ್ತು.

ಈ ಬಗ್ಗೆ ಮಾಹಿತಿ ನೀಡಿದ ಬ್ಯಾಂಕ್ ನ ಮೂಲಗಳು , “ಹೊಸ ಕಾರ್ಡ್‌ ಗಳನ್ನು ನೀಡುವುದಕ್ಕಿದ್ದ ನಿರ್ಬಂಧಗಳನ್ನು ಅಂತಿಮಗೊಳಿಸಿ ಹಾಗೂ ಹೊಸ ಕ್ರೆಡಿಟ್ ಕಾರ್ಡ್‌ ಗಳ ಸೋರ್ಸಿಂಗ್ ನನ್ನು ತೆಗೆದುಕೊಳ್ಳಲು  ಆರ್‌ ಬಿಐ ಈಗ ಬ್ಯಾಂಕ್‌ ಗೆ ಅನುಮತಿಸಿದೆ” ಎಂದು ತಿಳಿಸಿವೆ.

ಇದನ್ನೂ ಓದಿ : ಅಫ್ಘಾನಿಸ್ತಾನದ ಬಹುಕೋಟಿ ಸಂಪತ್ತು ತಾಲಿಬಾನ್ ಉಗ್ರರ ಕೈಗೆ ಸಿಗದು!

ಎಚ್‌ ಡಿಎಫ್‌ ಸಿ ಬ್ಯಾಂಕ್ ದೇಶದ ಅತಿದೊಡ್ಡ ಕ್ರೆಡಿಟ್ ಕಾರ್ಡ್ ನೀಡುವ ಸಂಸ್ಥೆಯಾಗಿದೆ ಮತ್ತು ನಿಷೇಧದ ನಂತರವೂ ಅದೇ ಸ್ಥಾನದಲ್ಲಿಯೇ ಉಳಿಕೊಂಡಿದೆ ಎನ್ನುವುದು ಬ್ಯಾಂಕ್ ನ ಹಿರಿಮೆ.

ಕಳೆದ ಜೂನ್‌ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ, ಬ್ಯಾಂಕ್​ನ ಪೇಮೆಂಟ್ ವ್ಯವಹಾರದ ದೇಶದ ಮುಖ್ಯಸ್ಥ ಮತ್ತು ತಂತ್ರಜ್ಞಾನ ಪರಿವರ್ತನೆಯ ಉಸ್ತುವಾರಿ ಪರಾಗ್ ರಾವ್ ಪ್ರತಿಕ್ರಿಯಿಸಿ, ಕ್ರೆಡಿಟ್ ಕಾರ್ಡ್ ವ್ಯವಹಾರದ ನಿರ್ಬಂಧ ತೆಗೆದರೆ ಆಕ್ರಮಣಕಾರಿಯಾಗಿ ಮರಳಲು ಬ್ಯಾಂಕ್ ಯೋಜನೆಯನ್ನು ಸಿದ್ಧಪಡಿಸಿದೆ ಎಂದಿದ್ದರು.

ಇನ್ನು, ಎಚ್ ಡಿ ಎಫ್ ಸಿ ಬ್ಯಾಂಕ್ ಗೆ  ನಿಯಮಾವಳಿಗಳನ್ನು ಸಮಾಧಾನಕರವಾಗಿ ಅನುಸರಿಸುತ್ತಿದ್ದಲ್ಲಿ ಮಾತ್ರ ಪರಿಶೀಲನೆಯ ಬಳಿಕ ನಿರ್ಬಂಧಗಳನ್ನು ತೆರೆವುಗೊಳಿಸಲಾಗುವುದು ಎಂದು ಆರ್ ​ಬಿಐ ನಿರ್ಬಂಧಗಳನ್ನು ವಿಧಿಸುವಾಗಲೇ ತಿಳಿಸಿತ್ತು.

ನಿಷೇಧದ ನಂತರ ಎಚ್‌ಡಿಎಫ್‌ಸಿ ಬ್ಯಾಂಕ್ ತಕ್ಷಣದ, ಅಲ್ಪಾವಧಿ, ಮಧ್ಯಾವಧಿ ಮತ್ತು ದೀರ್ಘಾವಧಿಯ ಮೇಲೆ ಕೇಂದ್ರೀಕರಿಸುವ ಯೋಜನೆಯನ್ನು ಕೆಲವು ತಿಂಗಳ ಹಿಂದೆ ಆರ್​ಬಿಐಗೆ ಸಲ್ಲಿಸಿತ್ತು.

ಇನ್ನು ಈ ಬಗ್ಗೆ 2020ರ ಡಿಸೆಂಬರ್​ನಲ್ಲಿ ನಿಷೇಧ ಹೇರಿದ ನಂತರ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಎಂ.ಡಿ. ಮತ್ತು ಸಿಇಒ ಶಶಿ ಜಗದೀಶನ್, “ಸುಧಾರಣಾಭಿವೃದ್ಧಿಗಾಗಿ ಗುರುತಿಸಲಾದ ಸಂಗತಿಗಳನ್ನು ಬಲಪಡಿಸುವ ಉದ್ದೇಶದಿಂದ ನಾವು ತಜ್ಞರು ಮತ್ತು ನಿಯಂತ್ರಕರೊಂದಿಗೆ ಕೆಲಸ ಮಾಡುತ್ತೇವೆ. ಆಂತರಿಕವಾಗಿ ನಮ್ಮನ್ನು ಮತ್ತಷ್ಟು ಸುಧಾರಿಸಿಕೊಳ್ಳಲು ಮತ್ತು ಬಲಶಾಲಿಯಾಗಿ ಹೊರಹೊಮ್ಮಲು ಇದೊಂದು ಅವಕಾಶ ಎಂದು ನಂಬುತ್ತೇವೆಂದು ಹೇಳಿದ್ದರು.

ಇದನ್ನೂ ಓದಿ :  ಕಾಗಿನಲೆ ಸ್ವಾಮೀಜಿ ಆರ್ಶಿವಾದ ಪಡೆದ ಕೇಂದ್ರ ಸಚಿವ ನಾರಾಯಣಸ್ವಾಮಿ: ಎಸ್ ಟಿ ಮೀಸಲಾತಿ ಚರ್ಚೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.