2020 ರಲ್ಲಿ ದೇಶದಲ್ಲಿ ಟ್ರ್ಯಾಕ್ಟರ್‌ಗೆ ಹೆಚ್ಚಿದ ಬೇಡಿಕೆ

ನಿರೀಕ್ಷಿತ ಮಟ್ಟ ತಲುಪಲು ಇತರ ವಾಹನಗಳು ವಿಫ‌ಲ

Team Udayavani, Dec 18, 2020, 6:19 AM IST

Tractor

ಸಾಂದರ್ಭಿಕ ಚಿತ್ರ

2020ರಲ್ಲಿ ವಾಹನ ಮಾರಾಟ ವಲಯ ಕುಸಿತ ಕಂಡಿದೆ. ಫೆಡರೇಶನ್‌ ಆಫ್ ಆಟೋಮೊಬೈಲ್‌ ಡೀಲರ್ ಅಸೋಸಿಯೇಶನ್‌(ಎಫ್ಎಡಿಎ) ನವೆಂಬರ್‌ ತಿಂಗಳ ವಾಹನ ನೋಂದಣಿ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ನವೆಂಬರ್‌ನಲ್ಲಿ 18.28 ಲಕ್ಷ ಯುನಿಟ್‌ಗಳು ಮಾರಾಟವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 19.29ರಷ್ಟು ಕಡಿಮೆ ಎಂದು ಹೇಳಿದೆ. ಆದರೆ ಟ್ರ್ಯಾಕ್ಟರ್‌ ಮಾರಾಟದಲ್ಲಿ ಮಾತ್ರ ಹೆಚ್ಚಳ ಕಂಡುಬಂದಿದೆ.

ಫೆಬ್ರವರಿಯಲ್ಲಿ ಹೆಚ್ಚಾಗಿತ್ತು; ಮಾರ್ಚ್‌ನಲ್ಲಿ ಶೂನ್ಯ!
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಫೆಬ್ರವರಿಯಲ್ಲಿ ಮಾತ್ರ ವಾಹನ ಮಾರಾಟವು ಶೇ. 2.60ರಷ್ಟು ಏರಿಕೆಯಾಗಿತ್ತು. ಆದರೆ ಆಟೋ ಮಾರಾಟದ ಇತಿಹಾಸದಲ್ಲಿ ಮೊದಲ ಬಾರಿಗೆ ಮಾರ್ಚ್‌ನಲ್ಲಿ ಒಂದೇ ಒಂದು ವಾಹನ ಮಾರಾಟವಾಗಿಲ್ಲ. ಎಫ್ಎಡಿಎ ಪ್ರತೀ ತಿಂಗಳು ದೇಶದಲ್ಲಿ ಮಾರಾಟವಾದ ವಾಹನಗಳ ಅಂಕಿಅಂಶವನ್ನು ಬಿಡುಗಡೆ ಮಾಡುತ್ತಿದ್ದು ಅದರಲ್ಲಿ ಮಾರ್ಚ್‌ ಮತ್ತು ಎಪ್ರಿಲ್‌ ತಿಂಗಳ ನೋಂದಣಿ ಮಾಹಿತಿ ಇಲ್ಲ. ಮೇ ತಿಂಗಳಲ್ಲಿ ಆಟೋ ವಲಯ ಮಹಾ ಕುಸಿತ ಕಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮೇನಲ್ಲಿ ಶೇ. 88ರಷ್ಟು ಕಡಿಮೆ ಸಂಖ್ಯೆಯ ವಾಹನಗಳು ಮಾರಾಟಗೊಂಡಿವೆ. ಮೇ ತಿಂಗಳಿನಲ್ಲಿ ಬೈಕ್‌ಗಳು ಅತೀ ಹೆಚ್ಚು ಮಾರಾಟಗೊಂಡಿದ್ದು, ಇತರ ವಾಹನಗಳ ಪ್ರಮಾಣ ಕುಸಿತ ಕಂಡಿದೆ.

ಟ್ರ್ಯಾಕ್ಟರ್‌ಗೆ ಹೆಚ್ಚಿದ ಬೇಡಿಕೆ
ಆಟೋ ವಲಯ ಭಾರೀ ಕುಸಿತ ಕಂಡರೆ ದಾಖಲೆ ಸಂಖ್ಯೆಯಲ್ಲಿ ಟ್ರ್ಯಾಕ್ಟರ್‌ಗಳು ಮಾರಾಟವಾಗಿವೆ. ಈ ವರ್ಷ ಟ್ರ್ಯಾಕ್ಟರ್‌ ಮಾರಾಟವು ಶೇ. 30ರಷ್ಟು ವೃದ್ಧಿಯಾಗಿದೆ. ಆದರೆ ಇತರ ವಾಹನಗಳಂತೆ ಮೇ ತಿಂಗಳಿನಲ್ಲಿ ಮಾತ್ರ ಇಳಿಕೆ ಕಂಡಿದೆ. ಇನ್ನು ಸೆಪ್ಟಂಬರ್‌ತಿಂಗಳಿನಲ್ಲಿ ಅತೀ ಹೆಚ್ಚು ಅಂದರೆ ಶೇ. 80ರಷ್ಟು ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದೇಶದಲ್ಲಿ ಕೃಷಿ ಚಟುವಟಿಕೆಗಳು ಚಿಗಿತುಕೊಂಡಿದ್ದವು. ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಜಾರಿ ಮಾಡಲಾಗಿದ್ದ ಲಾಕ್‌ಡೌನ್‌ನ ಸಂದರ್ಭದಲ್ಲಿ ಆಹಾರ ಪದಾರ್ಥಗಳು ಮತ್ತು ಧಾನ್ಯಗಳಿಗೆ ಬೇಡಿಕೆ ಹೆಚ್ಚಿದ್ದರಿಂದ ರೈತರ ಸಂಪಾದನೆ ಹೆಚ್ಚುವಂತಾಯಿತು.

ಯಾವ ರಾಜ್ಯಗಳಲ್ಲಿ ಟ್ರ್ಯಾಕ್ಟರ್‌ಗೆ ಬೇಡಿಕೆ
ಬಿಹಾರ, ಗುಜರಾತ್‌, ಹರಿಯಾಣ, ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ರಾಜ್ಯಗಳಲ್ಲಿ ಟ್ರ್ಯಾಕ್ಟರ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಉತ್ತರ ಪ್ರದೇಶದಲ್ಲಿ ಪ್ರತೀ ತಿಂಗಳು ಸರಾಸರಿ 12,177 ಟ್ರಾಕ್ಟರ್‌ಗಳು ಮಾರಾಟವಾಗಿವೆ.

ಆಟೋ ರಿಕ್ಷಾಗೆ ಬೇಡಿಕೆ
ತ್ರಿಪುರಾ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಮೇ ತಿಂಗಳಿನಿಂದೀಚೆಗೆ ಆಟೋ ರಿಕ್ಷಾಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಉತ್ತರ ಪ್ರದೇಶ, ಬಿಹಾರ, ಗುಜರಾತ್‌, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ರಿಕ್ಷಾಗಳ ಬೇಡಿಕೆ ಕುಸಿತ ಕಂಡಿದೆ. ಈ ಹಿಂದೆ ಈ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತ್ರಿಚಕ್ರ ವಾಹನಗಳು ಮಾರಾಟವಾಗುತ್ತಿದ್ದವು.

ನಿಧಾನವಾಗಿ ಹೆಚ್ಚಿದ ಬೇಡಿಕೆ
ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳು ಕಳೆದ 3 ತಿಂಗಳುಗಳಿಂದ ಬೇಡಿಕೆ ಹೊಂದಿವೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಇವೆರಡರ ಮಾರಾಟ ಪ್ರಮಾಣ ತನ್ನ ಗುರಿಯನ್ನು ಮೀರಿಲ್ಲ. ಈ ವರ್ಷ ಖಾಸಗಿ ವಾಹನಗಳ ಮಾರಾಟವು ಸೆಪ್ಟಂಬರ್‌ನಲ್ಲಿ 1,95,665 ಯುನಿಟ್‌ಗಳಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 9.8ರಷ್ಟು ಏರಿಕೆಯಾಗಿದೆ. ಈ ತಿಂಗಳು ಮಾತ್ರ ಈ ವಲಯ ಚೇತರಿಕೆ ಕಂಡಿದೆ.

ಹಬ್ಬಗಳ ಸಂದರ್ಭ ನಿರೀಕ್ಷಿತ ಬೇಡಿಕೆ ಇಲ್ಲ
ಈ ವರ್ಷ ಹಬ್ಬದ ಋತುವಿನಲ್ಲಿ ಆಟೋ ಉದ್ಯಮ ಹೊಸ ನಿರೀಕ್ಷೆಯಲ್ಲಿತ್ತು. ಆದರೆ 42 ದಿನಗಳ ಹಬ್ಬದ ಸಂಭ್ರಮದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 4.74ರಷ್ಟು ಕಡಿಮೆ ಮಾರುಕಟ್ಟೆಯನ್ನು ಕಂಡಿದೆ. ಆದರೆ ಈ ಅವಧಿಯಲ್ಲಿ ಖಾಸಗಿ ವಾಹನ ಮತ್ತು ಟ್ರ್ಯಾಕ್ಟರ್‌ಗಳಿಗೆ ಬೇಡಿಕೆ ಕಂಡುಬಂದರೆ ವಾಣಿಜ್ಯ ಉದ್ದೇಶದ ವಾಹನಗಳು ಹಿಂದುಳಿದವು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

Herbal: ಪಂಕಜ ಕಸ್ತೂರಿ ಹರ್ಬಲ್‌ ಗೆ ಅತ್ತ್ಯುತ್ತಮ ಹೆಲ್ತ್ ಕೇರ್‌ ಬ್ರ್ಯಾಂಡ್‌ ಮನ್ನಣೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.