2020 ರಲ್ಲಿ ದೇಶದಲ್ಲಿ ಟ್ರ್ಯಾಕ್ಟರ್‌ಗೆ ಹೆಚ್ಚಿದ ಬೇಡಿಕೆ

ನಿರೀಕ್ಷಿತ ಮಟ್ಟ ತಲುಪಲು ಇತರ ವಾಹನಗಳು ವಿಫ‌ಲ

Team Udayavani, Dec 18, 2020, 6:19 AM IST

Tractor

ಸಾಂದರ್ಭಿಕ ಚಿತ್ರ

2020ರಲ್ಲಿ ವಾಹನ ಮಾರಾಟ ವಲಯ ಕುಸಿತ ಕಂಡಿದೆ. ಫೆಡರೇಶನ್‌ ಆಫ್ ಆಟೋಮೊಬೈಲ್‌ ಡೀಲರ್ ಅಸೋಸಿಯೇಶನ್‌(ಎಫ್ಎಡಿಎ) ನವೆಂಬರ್‌ ತಿಂಗಳ ವಾಹನ ನೋಂದಣಿ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ನವೆಂಬರ್‌ನಲ್ಲಿ 18.28 ಲಕ್ಷ ಯುನಿಟ್‌ಗಳು ಮಾರಾಟವಾಗಿದ್ದು, ಕಳೆದ ವರ್ಷಕ್ಕಿಂತ ಶೇ. 19.29ರಷ್ಟು ಕಡಿಮೆ ಎಂದು ಹೇಳಿದೆ. ಆದರೆ ಟ್ರ್ಯಾಕ್ಟರ್‌ ಮಾರಾಟದಲ್ಲಿ ಮಾತ್ರ ಹೆಚ್ಚಳ ಕಂಡುಬಂದಿದೆ.

ಫೆಬ್ರವರಿಯಲ್ಲಿ ಹೆಚ್ಚಾಗಿತ್ತು; ಮಾರ್ಚ್‌ನಲ್ಲಿ ಶೂನ್ಯ!
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಫೆಬ್ರವರಿಯಲ್ಲಿ ಮಾತ್ರ ವಾಹನ ಮಾರಾಟವು ಶೇ. 2.60ರಷ್ಟು ಏರಿಕೆಯಾಗಿತ್ತು. ಆದರೆ ಆಟೋ ಮಾರಾಟದ ಇತಿಹಾಸದಲ್ಲಿ ಮೊದಲ ಬಾರಿಗೆ ಮಾರ್ಚ್‌ನಲ್ಲಿ ಒಂದೇ ಒಂದು ವಾಹನ ಮಾರಾಟವಾಗಿಲ್ಲ. ಎಫ್ಎಡಿಎ ಪ್ರತೀ ತಿಂಗಳು ದೇಶದಲ್ಲಿ ಮಾರಾಟವಾದ ವಾಹನಗಳ ಅಂಕಿಅಂಶವನ್ನು ಬಿಡುಗಡೆ ಮಾಡುತ್ತಿದ್ದು ಅದರಲ್ಲಿ ಮಾರ್ಚ್‌ ಮತ್ತು ಎಪ್ರಿಲ್‌ ತಿಂಗಳ ನೋಂದಣಿ ಮಾಹಿತಿ ಇಲ್ಲ. ಮೇ ತಿಂಗಳಲ್ಲಿ ಆಟೋ ವಲಯ ಮಹಾ ಕುಸಿತ ಕಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮೇನಲ್ಲಿ ಶೇ. 88ರಷ್ಟು ಕಡಿಮೆ ಸಂಖ್ಯೆಯ ವಾಹನಗಳು ಮಾರಾಟಗೊಂಡಿವೆ. ಮೇ ತಿಂಗಳಿನಲ್ಲಿ ಬೈಕ್‌ಗಳು ಅತೀ ಹೆಚ್ಚು ಮಾರಾಟಗೊಂಡಿದ್ದು, ಇತರ ವಾಹನಗಳ ಪ್ರಮಾಣ ಕುಸಿತ ಕಂಡಿದೆ.

ಟ್ರ್ಯಾಕ್ಟರ್‌ಗೆ ಹೆಚ್ಚಿದ ಬೇಡಿಕೆ
ಆಟೋ ವಲಯ ಭಾರೀ ಕುಸಿತ ಕಂಡರೆ ದಾಖಲೆ ಸಂಖ್ಯೆಯಲ್ಲಿ ಟ್ರ್ಯಾಕ್ಟರ್‌ಗಳು ಮಾರಾಟವಾಗಿವೆ. ಈ ವರ್ಷ ಟ್ರ್ಯಾಕ್ಟರ್‌ ಮಾರಾಟವು ಶೇ. 30ರಷ್ಟು ವೃದ್ಧಿಯಾಗಿದೆ. ಆದರೆ ಇತರ ವಾಹನಗಳಂತೆ ಮೇ ತಿಂಗಳಿನಲ್ಲಿ ಮಾತ್ರ ಇಳಿಕೆ ಕಂಡಿದೆ. ಇನ್ನು ಸೆಪ್ಟಂಬರ್‌ತಿಂಗಳಿನಲ್ಲಿ ಅತೀ ಹೆಚ್ಚು ಅಂದರೆ ಶೇ. 80ರಷ್ಟು ಹೆಚ್ಚಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದೇಶದಲ್ಲಿ ಕೃಷಿ ಚಟುವಟಿಕೆಗಳು ಚಿಗಿತುಕೊಂಡಿದ್ದವು. ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಜಾರಿ ಮಾಡಲಾಗಿದ್ದ ಲಾಕ್‌ಡೌನ್‌ನ ಸಂದರ್ಭದಲ್ಲಿ ಆಹಾರ ಪದಾರ್ಥಗಳು ಮತ್ತು ಧಾನ್ಯಗಳಿಗೆ ಬೇಡಿಕೆ ಹೆಚ್ಚಿದ್ದರಿಂದ ರೈತರ ಸಂಪಾದನೆ ಹೆಚ್ಚುವಂತಾಯಿತು.

ಯಾವ ರಾಜ್ಯಗಳಲ್ಲಿ ಟ್ರ್ಯಾಕ್ಟರ್‌ಗೆ ಬೇಡಿಕೆ
ಬಿಹಾರ, ಗುಜರಾತ್‌, ಹರಿಯಾಣ, ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ರಾಜ್ಯಗಳಲ್ಲಿ ಟ್ರ್ಯಾಕ್ಟರ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಉತ್ತರ ಪ್ರದೇಶದಲ್ಲಿ ಪ್ರತೀ ತಿಂಗಳು ಸರಾಸರಿ 12,177 ಟ್ರಾಕ್ಟರ್‌ಗಳು ಮಾರಾಟವಾಗಿವೆ.

ಆಟೋ ರಿಕ್ಷಾಗೆ ಬೇಡಿಕೆ
ತ್ರಿಪುರಾ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಮೇ ತಿಂಗಳಿನಿಂದೀಚೆಗೆ ಆಟೋ ರಿಕ್ಷಾಗೆ ಹೆಚ್ಚಿನ ಬೇಡಿಕೆ ಕಂಡುಬಂದಿದೆ. ಉತ್ತರ ಪ್ರದೇಶ, ಬಿಹಾರ, ಗುಜರಾತ್‌, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ರಿಕ್ಷಾಗಳ ಬೇಡಿಕೆ ಕುಸಿತ ಕಂಡಿದೆ. ಈ ಹಿಂದೆ ಈ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತ್ರಿಚಕ್ರ ವಾಹನಗಳು ಮಾರಾಟವಾಗುತ್ತಿದ್ದವು.

ನಿಧಾನವಾಗಿ ಹೆಚ್ಚಿದ ಬೇಡಿಕೆ
ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ವಾಹನಗಳು ಕಳೆದ 3 ತಿಂಗಳುಗಳಿಂದ ಬೇಡಿಕೆ ಹೊಂದಿವೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಇವೆರಡರ ಮಾರಾಟ ಪ್ರಮಾಣ ತನ್ನ ಗುರಿಯನ್ನು ಮೀರಿಲ್ಲ. ಈ ವರ್ಷ ಖಾಸಗಿ ವಾಹನಗಳ ಮಾರಾಟವು ಸೆಪ್ಟಂಬರ್‌ನಲ್ಲಿ 1,95,665 ಯುನಿಟ್‌ಗಳಾಗಿದ್ದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 9.8ರಷ್ಟು ಏರಿಕೆಯಾಗಿದೆ. ಈ ತಿಂಗಳು ಮಾತ್ರ ಈ ವಲಯ ಚೇತರಿಕೆ ಕಂಡಿದೆ.

ಹಬ್ಬಗಳ ಸಂದರ್ಭ ನಿರೀಕ್ಷಿತ ಬೇಡಿಕೆ ಇಲ್ಲ
ಈ ವರ್ಷ ಹಬ್ಬದ ಋತುವಿನಲ್ಲಿ ಆಟೋ ಉದ್ಯಮ ಹೊಸ ನಿರೀಕ್ಷೆಯಲ್ಲಿತ್ತು. ಆದರೆ 42 ದಿನಗಳ ಹಬ್ಬದ ಸಂಭ್ರಮದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 4.74ರಷ್ಟು ಕಡಿಮೆ ಮಾರುಕಟ್ಟೆಯನ್ನು ಕಂಡಿದೆ. ಆದರೆ ಈ ಅವಧಿಯಲ್ಲಿ ಖಾಸಗಿ ವಾಹನ ಮತ್ತು ಟ್ರ್ಯಾಕ್ಟರ್‌ಗಳಿಗೆ ಬೇಡಿಕೆ ಕಂಡುಬಂದರೆ ವಾಣಿಜ್ಯ ಉದ್ದೇಶದ ವಾಹನಗಳು ಹಿಂದುಳಿದವು.

ಟಾಪ್ ನ್ಯೂಸ್

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.