ಕೋವಿಡ್‌-19 ಬಿಕ್ಕಟ್ಟು : ದೇಶದ ಜಿಡಿಪಿ ಬೆಳವಣಿಗೆ ದರ ಶೇ 4ಕ್ಕೆ ಕುಸಿಯಲಿದೆ


Team Udayavani, Jun 19, 2020, 8:26 PM IST

ಕೋವಿಡ್‌-19 ಬಿಕ್ಕಟ್ಟು : ದೇಶದ ಜಿಡಿಪಿ ಬೆಳವಣಿಗೆ ದರ ಶೇ 4ಕ್ಕೆ ಕುಸಿಯಲಿದೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಕೋವಿಡ್‌-19 ಬಿಕ್ಕಟ್ಟು ಪ್ರಾರಂಭವಾದಗಿನಿಂದ ದೇಶ ಸೇರಿದಂತೆ ವಿದೇಶಗಳಲ್ಲಿ ಆರ್ಥಿಕ ಹಿಂಜರಿತದ ಬಿಸಿ ತಟ್ಟಿದೆ.

ಈ ಹೊಡೆತದಿಂದ ಚೇತರಿಸಿಕೊಳ್ಳಲು ನಮಗೆ ಇನ್ನೂ ಕೆಲವು ವರ್ಷಗಳೇ ಬೇಕಾಗಬಹುದು ಎಂದು ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ.

ಈ ಹೇಳಿಕೆಗಳಿಗೆ ಪುಷ್ಟಿ ನೀಡವಂತಹ ಅಧ್ಯಯನ ವರದಿಗಳು ಪ್ರಕಟವಾಗುತ್ತಿದ್ದು, ಇದೀಗ 2020 ನೇ ಸಾಲಿನಲ್ಲಿ ಏಷ್ಯಾದ ಅಭಿವೃದ್ಧಿಶೀಲ ರಾಷ್ಟ್ರಗಳ ಅಭಿವೃದ್ಧಿ ದರ ತೀರಾ ಕ್ಷೀಣವಾಗಿರಲಿದ್ದು, ಭಾರತದ ಆರ್ಥಿಕತೆ ಶೇ 4 ರಷ್ಟು ಕುಸಿಯಲಿದೆ ಎಂದು ಏಷ್ಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ (ಎಡಿಬಿ) ಅಂದಾಜು ಮಾಡಿದೆ. ಈ ಮೂಲಕ ಏಷ್ಯಾ ರಾಷ್ಟ್ರಗಳ ಅಭಿವೃದ್ಧಿ ದರ ಕುಸಿತಕ್ಕೆ  ಕೋವಿಡ್‌-19 ಸೃಷ್ಟಿಸಿರುವ ಸಮಸ್ಯೆಗಳ ಕಂದಕವೇ  ಕಾರಣ ಎಂದು ಅದು ಹೇಳಿದೆ.

ಕೋವಿಡ್ 19 ಸೋಂಕು ಹರಡುವಿಕೆ ತಡೆಗಟ್ಟಲು ಬಹುತೇಕ ರಾಷ್ಟ್ರಗಳು ಲಾಕ್‌ಡೌನ್‌ ಮೊರೆ ಹೋಗಿದ್ದು, ಸುಮಾರು 40 ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ವಿಧಿಸಲಾಗಿರುವ ಲಾಕ್‌ಡೌನ್‌ ಕ್ರಮಗಳಿಂದಾಗಿ ಆರ್ಥಿಕ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಇದರೊಂದಿಗೆ ಬಾಹ್ಯ ಬೇಡಿಕೆಗಳು ಗಣನೀಯವಾಗಿ ಕುಸಿತ ಕಂಡಿದ್ದು, ಸರಕು ಸಾಗಾಣಿಕೆ, ಖರೀದಿ ಪ್ರಮಾಣವು ಕಡಿತವಾಗಿದೆ ಎಂದು ಎಡಿಬಿ ತಿಳಿಸಿದೆ.

ಜತೆಗೆ ಕೈಗಾರಿಕಾ ಕ್ರಾಂತಿಯ ದೇಶಗಳಾದ ಹಾಂಕಾಂಗ್‌ ಹಾಗೂ ಚೀನ, ರಿಪಬ್ಲಿಕ್‌ ಆಫ್‌ ಕೊರಿಯಾ, ಸಿಂಗಾಪುರ, ತೈಪೆ ದೇಶಗಳನ್ನು ಹೊರತುಪಡಿಸಿದರೆ ಏಷ್ಯಾದ ಅಭಿವೃದ್ಧಿಶೀಲ ರಾಷ್ಟ್ರಗಳ ಬೆಳವಣಿಗೆ ಪ್ರಸಕ್ತ ಸಾಲಿನಲ್ಲಿ ಶೇ 0.4 ರಷ್ಟು ಹಾಗೂ 2021 ರಲ್ಲಿ ಶೇ 6.6 ರಷ್ಟಕ್ಕೆ ತಲುಪಿದ್ದು, ಒಟ್ಟಾರೆ ದಕ್ಷಿಣ ಏಷ್ಯಾ ಪರಿಗಣಿಸಿದಲ್ಲಿ 2020 ರಲ್ಲಿ ಈ ಭಾಗದ ದೇಶಗಳ ಬೆಳವಣಿಗೆ ದರ ಶೇ 3 ಕ್ಕೆ ಕುಸಿಯಲಿದೆ ಎಂದು ಎಡಿಬಿ ಸಂಸ್ಥೆಯ ವರದಿ ಉಲ್ಲೇಖ ಮಾಡಿದೆ.

ಇನ್ನು ಏಪ್ರಿಲ್‌ನಲ್ಲಿ ಈ ಅಂದಾಜು ಪ್ರಮಾಣ ಶೇ 4.1 ರಷ್ಟಿತ್ತು ಎಂದು ವರದಿ ತಿಳಿಸಿದ್ದು,  2021 ರ ವೇಳೆಗೆ ದಕ್ಷಿಣ ಏಷ್ಯಾ ಈ ಮುನ್ನ ಅಂದಾಜಿಸಿದ್ದ ಶೇ4.9 ನ್ನು ಮೀರಿ ಶೇ.6 ರಷ್ಟು ಬೆಳವಣಿಗೆ ದರ ಸಾಧಿಸಲಿದೆ ಎಂದು ಎಡಿಬಿ ಮಾಹಿತಿ ನೀಡಿದೆ. 2021ರ ಮಾರ್ಚ್‌ 31 ಕ್ಕೆ ಕೊನೆಗೊಳ್ಳುವ ಹಣಕಾಸು ಸಾಲಿನಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರ ಶೇ 4ಕ್ಕೆ ಕುಸಿಯಲಿದೆ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.