ಅಲಿಬಾಬಾದಿಂದ ಜಾಕ್ ಮಾ ನಿವೃತ್ತಿ; ಸಾಮಾನ್ಯ ಶಿಕ್ಷಕ ಈಗ ಯಶಸ್ವಿ ಉದ್ಯಮಿ


Team Udayavani, Sep 10, 2019, 1:39 PM IST

Jak-Ma

ಬೀಜಿಂಗ್:ಚೀನಾ ಮೂಲದ ಅತೀ ದೊಡ್ಡ ಕಂಪನಿಯಾದ ಅಲಿಬಾಬಾ ಗ್ರೂಪ್ ಲಿಮಿಟೆಡ್ ಸ್ಥಾಪಕ, ಮಾಜಿ ಶಿಕ್ಷಕ ಜಾಕ್ ಮಾ ತನ್ನ 55ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ.

ವಿಶ್ವದ ಶ್ರೀಮಂತ ಉದ್ಯಮಿಯಾಗಿ ಹೊರಹೊಮ್ಮುವ ಮುನ್ನ ಜಾಕ್ ಮಾ ಶಿಕ್ಷಕ ವೃತ್ತಿಯಲ್ಲಿದ್ದರು. 1988ರಲ್ಲಿ ಬಿಎ ಇಂಗ್ಲಿಷ್ ಪದವಿ ಪಡೆದ ಬಳಿಕ ಜಾಕ್ ಹಾಂಗ್ ಹೋ ಯೂನಿರ್ವಸಿಟಿಯಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು.

ತದನಂತರ ಸುಮಾರು 30 ವಿವಿಧ ಕೆಲಸಗಳಿಗೆ ಅರ್ಜಿ ಹಾಕಿದ್ದರು. ಆದರೆ ಒಂದೂ ಕೆಲಸವೂ ಸಿಕ್ಕಿರಲಿಲ್ಲವಾಗಿತ್ತು. 1994ರಲ್ಲಿ ಇಂಟರ್ನೆಟ್ ಕುರಿತು ತಿಳಿದುಕೊಂಡ ಜಾಕ್ ಮೊದಲ ಕಂಪನಿಯನ್ನು ಆರಂಭಿಸಿದ್ದರು. ಅದೊಂದು ಟ್ರಾನ್ಸ್ ಲೇಶನ್(ತರ್ಜುಮೆ) ಕಂಪನಿಯಾಗಿತ್ತು. 1995ರಲ್ಲಿ ತನ್ನ ಗೆಳೆಯರೊಡನೆ ಜಾಕ್ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ಚೀನಾಕ್ಕೆ ಸಂಬಂಧಿಸಿದ ಮಾಹಿತಿ ಹಲವು ದೇಶಗಳಿಗೆ ಲಭ್ಯವಾಗುತ್ತಿಲ್ಲ ಎಂಬುದು ಜಾಕ್ ಗಮನಕ್ಕೆ ಬಂದಿತ್ತು.

ಹೀಗೆ ಚೀನಾಕ್ಕೆ ಸಂಬಂಧಿಸಿದ ವೆಬ್ ಸೈಟ್ ಅನ್ನು ಜಾಕ್ ಆರಂಭಿಸಿದ್ದರು. ಹೀಗೆ 1995ರ ಏಪ್ರಿಲ್ ನಲ್ಲಿ ಜಾಕ್ ಮಾ ಹಾಗೂ ಕಂಪ್ಯೂಟರ್ ಶಿಕ್ಷಕ ಯಿಬಿಂಗ್ ಜತೆಗೂಡಿ ಚೈನಾ ಪೇಜಸ್ ಎಂಬ ಹೊಸ ಮೊದಲ ಕಚೇರಿ ಆರಂಭಿಸಿದ್ದರು. ಮೇ 10ರಲ್ಲಿ ಜಾಕ್ ಮಾ ಎರಡನೇ ಕಂಪನಿ ಶುರು ಮಾಡಿದ್ದರು. ಅಮೆರಿಕದಲ್ಲಿ ಚೈನಾಪೇಜಸ್ ಡಾಟ್ ಕಾಮ್ ಹೆಸರಿನಲ್ಲಿ ಡೊಮೈನ್ ರಿಜಿಸ್ಟ್ರರ್ಡ್ ಮಾಡಿಸಿದ್ದರು. ಈ ಕಂಪನಿ ಮೂರು ವರ್ಷಗಳಲ್ಲಿ 8,000,000 ಅಮೆರಿಕನ್ ಡಾಲರ್ ಆದಾಯ ಗಳಿಸಿತ್ತು.

1999ರಲ್ಲಿ ಜಾಕ್ ಮಾ ಮಾಹಿತಿ ತಂತ್ರಜ್ಞಾನ ಕಂಪನಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಹೀಗೆ ಅಲಿಬಾಬಾ ಕಂಪನಿಯ ಸ್ಥಾಪಕರಾಗಿ ಬೆಳೆದ ಜಾಕ್ ಮಾ ಎರಡು ದಶಕಗಳಲ್ಲಿಯೇ 3ಲಕ್ಷ ಕೋಟಿ ರೂಪಾಯಿಗಳ ಒಡೆಯರಾಗಿದ್ದಾರೆ. ಈ ಮೊದಲೇ ಘೋಷಿಸಿದಂತೆ ಜಾಕ್ ಮಾ ಅಲಿಬಾಬಾ ಗ್ರೂಪ್ ಕಂಪನಿಯ ಅಧ್ಯಕ್ಷ ಸ್ಥಾನದಿಂದ ಇಂದು ಕೆಳಗಿಳಿದಿದ್ದಾರೆ. ತನ್ನನ್ನು ಚೀನಾ ಸರಕಾರ ಬಲವಂತದಿಂದ ಅಧ್ಯಕ್ಷಗಾದಿಯಿಂದ ಕೆಳಗಿಳಿಸಿದೆ ಎಂಬ ವರದಿಯನ್ನು ಜಾಕ್ ಮಾ ತಳ್ಳಿಹಾಕಿದ್ದಾರೆ. ಮುಂದಿನ ದಿನಗಳಲ್ಲಿ ತನ್ನ ಪೌಂಡೇಶನ್ ಮೂಲಕ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೇಣಿಗೆ ನೀಡುವ ಮೂಲಕ ಸಮಾಜ ಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.